ಬೆಳಗಾವಿ ಶೆಟ್ಟರ ಸ್ಪರ್ಧೆ: ಯಾವ ನೈತಿಕತೆ ಇದೆ?

KannadaprabhaNewsNetwork |  
Published : Apr 03, 2024, 01:32 AM ISTUpdated : Apr 03, 2024, 01:33 AM IST
ರಾಮದುರ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪ್ರಚಾರ ಮಾಡಿದರು | Kannada Prabha

ಸಾರಾಂಶ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಸೋತರೂ ಮಾಜಿ ಮುಖ್ಯಮಂತ್ರಿ ಅಂತ ಹೇಳಿ ಹಿರಿತನಕ್ಕೆ ಗೌರವ ನೀಡಿ ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಏಕಾಏಕಿ ದೆಹಲಿಗೆ ಹೋದ ಶೆಟ್ಟರ್ ಬಿಜೆಪಿ ಸೇರ್ಪಡೆಗೊಂಡರು. ಇದೀಗ ಬೆಳಗಾವಿಯಿಂದ ಲೋಕಸಭೆ ಪ್ರವೇಶಿಸಲು ಕನಸು ಕಾಣುತ್ತಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಲು ಅವರಿಗೆ ಯಾವ ನೈತಿಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಸೋತರೂ ಮಾಜಿ ಮುಖ್ಯಮಂತ್ರಿ ಅಂತ ಹೇಳಿ ಹಿರಿತನಕ್ಕೆ ಗೌರವ ನೀಡಿ ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಏಕಾಏಕಿ ದೆಹಲಿಗೆ ಹೋದ ಶೆಟ್ಟರ್ ಬಿಜೆಪಿ ಸೇರ್ಪಡೆಗೊಂಡರು. ಇದೀಗ ಬೆಳಗಾವಿಯಿಂದ ಲೋಕಸಭೆ ಪ್ರವೇಶಿಸಲು ಕನಸು ಕಾಣುತ್ತಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಲು ಅವರಿಗೆ ಯಾವ ನೈತಿಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.

ಪಟ್ಟಣದ ರಾಠಿ ಫಾರ್ಮ್ ಹೌಸ್‌ನಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯ ಸಮ್ಮಿಲ ಸ್ವಾಭಿಮಾನಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, 2014ರಲ್ಲಿ ನಾನು ಲೋಕಸಭೆಗೆ ನಿಂತಾಗ ಇಲ್ಲಿಯ ಜನರು ನನ್ನ ಪರವಾಗಿ ಸಾಕಷ್ಟು ಹೋರಾಟ ಮಾಡಿದರು. ಇದೀಗ 10 ವರ್ಷಗಳ ಬಳಿಕ ನನ್ನ ಮಗ ಬಂದಿದ್ದಾನೆ. ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ. 2014ರಲ್ಲಿ ಎಲ್ಲರು ಶ್ರಮಿಸಿದರೂ ಸೋತೆವು. ಆದರೆ, ಈಗಿನ ಪರಿಸ್ಥಿತಿ ಭಿನ್ನವಾಗಿದೆ. ನಮ್ಮ ನಾಯಕ ಅಶೋಕ್ ಪಟ್ಟಣ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಅಭ್ಯರ್ಥಿ ಗೆಲುವಿಗೆ ಅನುಕೂಲವಾಗಲಿದೆ. ನನಗೆ ಕೊಟ್ಟ ರೀತಿಯಲ್ಲೇ ನಿಮ್ಮ ಸೇವೆ ಮಾಡಲು ನನ್ನ ಮಗನಿಗೂ ಅವಕಾಶ ಮಾಡಿಕೊಡಿ ಎಂದರು ಕೋರಿದರು.

ನನ್ನ ಸ್ವಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದಲೇ 60 ಸಾವಿರಕ್ಕೂ ಅಧಿಕ ಮತಗಳು ಲೀಡ್, ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ ಕ್ಷೇತ್ರಗಳಿಂದ 85 ಸಾವಿರ ಮತಗಳ ಮುನ್ನಡೆ ಸಿಗುವ ವಿಶ್ವಾಸವಿದೆ. ರಾಮದುರ್ಗದಲ್ಲಿ ಸಿಕ್ಕಿರುವ ಬೆಂಬಲ ನೋಡಿದರೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ 2 ಲಕ್ಷ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ಮೂಡುತ್ತಿದೆ ಎಂದರು.

ಕರ್ನಾಟಕದ 7 ಕೋಟಿ ಜನರಿಗೆ ನಾನೊಬ್ಬಳೆ ಮಹಿಳಾ ಸಚಿವೆಯಾಗಿ ನಿಂತಿದ್ದೇನೆ. ಇಂದು ರಾಜ್ಯಾದ್ಯಂತ ಸೇವೆ ಮಾಡುವ ಅವಕಾಶ ಲಭಿಸಿದೆ. ಇದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಹಿರಿಯ ಶಾಸಕ ಅಶೋಕ್ ಪಟ್ಟಣ ಅವರು ಸಚಿವರಾಗಬೇಕಿತ್ತು. ಅದು ನನ್ನ ಅಪೇಕ್ಷೆಯೂ ಆಗಿತ್ತು. ಆದರೆ, ಬದ್ಧತೆಗೆ ಹೆಸರಾಗಿರುವ ಅಶೋಕ್ ಪಟ್ಟಣ ಅವರು ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿದ್ದಾರೆ ಎಂದು ಬಣ್ಣಿಸಿದರು.

ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಈ ಚುನಾವಣೆ ಸಿದ್ದರಾಮಯ್ಯ ನೇತೃತ್ವದ ಅಭಿವೃದ್ಧಿ ಹಾಗೂ 5 ಗ್ಯಾರಂಟಿ ಯೋಜನೆಗಳ ಮೇಲೆ ನಡೆಯುತ್ತಿದೆ. ಕಳೆದ 10 ತಿಂಗಳಲ್ಲಿ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ಸಿದ್ದರಾಮಯ್ಯನವರು ಕಳೆದ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ 5 ವರ್ಷದಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಿದ್ದರು. ಬಳಿಕ 4 ವರ್ಷಗಳ ಆಡಳಿತ ನಡೆಸಿದ ಬಿಜೆಪಿ ಬಡ ಜನರಿಗೆ ಒಂದೇ ಒಂದು ಮನೆಯನ್ನು ನಿರ್ಮಾಣ ಮಾಡಲಿಲ್ಲ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ ಪ್ರತಿ ವರ್ಷ ₹೬೦ ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿಸಿದ್ದು, ಮಹಿಳೆಯರನ್ನು ಸಬಲೀಕರಣ ಮಾಡುವುದೇ ನಮ್ಮ ಸರ್ಕಾರದ ಉದ್ದೇಶ ಎಂದರು.

ಚಿಕ್ಕೋಡಿ ಹಾಗೂ ಬೆಳಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಮೃಣಾಲ್ ಹೆಬ್ಬಾಳ್ಕರ್ ಇನ್ನೂ ಯುವಕ, ನಮ್ಮ ಜಿಲ್ಲೆಯ ಭವಿಷ್ಯದ ನಾಯಕ. ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದು ಬಹಳ ವರ್ಷಗಳಾಗಿವೆ. ಈ ಬಾರಿ ನಮ್ಮ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ತಾಯಿ ಅವರ ಮಾರ್ಗದರ್ಶನದಲ್ಲಿ ರಾಜಕೀಯ ಜೀವನ ಆರಂಭಿಸಿದ್ದು, ಜನರ ಪ್ರೀತಿ ವಿಶ್ವಾಸ ನೋಡಿದ ಮೇಲೆ ಜೀವನ ಪೂರ್ತಿ ಸಮಾಜ ಸೇವೆ ಮಾಡಬೇಕು ಎಂದು ತೀರ್ಮಾನಿಸಿರುವೆ ಎಂದರು.

ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮಾತನಾಡಿ, ಮೃಣಾಲ್‌ ಹೆಬ್ಬಾಳಕರ್ ಅವರನ್ನು ಅತ್ಯಧಿಕ ಬಹುಮತದಿಂದ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಜಹೂರ್ ಹಾಜಿ, ಸುರೇಶ ಪತ್ತೆಪೂರ್, ರಾಯಪ್ಪ ಕತ್ತಿ, ಜೆ.ಬಿ.ರಂಗನಗೌಡ್ರ, ಸೋಮಶೇಖ ಸಿದ್ಲಿಂಗಪ್ಪನವರ, ರಾಜೇಶ್ವರಿ ಮೆಟಗುಡ್, ಗಾಯಿತ್ರಿ ದೇವಾಂಗಮಠ್, ಮಂಜುಳಾ ದೇವರೆಡ್ಡಿ, ಚಿದಾನಂದ ದೊಡಮನಿ, ದುರಗಪ್ಪ ಮೂಲಿಮನಿ, ಹಜರತಸಾಬ್ ಪೈಲವಾನ್, ಪ್ರಕಾಶ ತಳವಾರ, ರಮೇಶ್ ಅಣ್ಣಿಗೇರಿ, ನಿಂಗಪ್ಪ ದಂಡಿನದರ್ಗಿ, ಪರಸಪ್ಪ ಜಂಗವಾಡ, ಚಿನ್ನಪ್ಪ ಮುದೆನೂರ್, ಬಸನಗೌಡ ಪ್ಯಾಟಿಗೌಡರ್, ರಾಮಣ್ಣ ಬಿಡಕಿ, ಕೃಷ್ಣಗೌಡ ಪಾಟೀಲ, ವಿಜಯಕುಮಾರ ರಾಠೋಡ್, ಕೆ.ಎಚ್.ಮುಮ್ಮರೆಡ್ಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!