ದೀನದಯಾಳ ಉಪಾಧ್ಯಾಯ ಹಾಸ್ಟೇಲ್‌ ಕಾಮಗಾರಿ ವೀಕ್ಷಿಸಿದ ಬೆಲ್ಲದ

KannadaprabhaNewsNetwork |  
Published : May 27, 2025, 11:48 PM ISTUpdated : May 27, 2025, 11:49 PM IST
27ಡಿಡಬ್ಲೂಡಿ4ಉದಯ ಹಾಸ್ಟೆಲ್ ಬಳಿ ಕವಿವಿ ಜಾಗೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ದೀನದಯಾಳ ಉಪಾದ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯಗಳ ಕಾಮಗಾರಿಯನ್ನು ಶಾಸಕ ಅರವಿಂದ ಬೆಲ್ಲದ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.  | Kannada Prabha

ಸಾರಾಂಶ

ಲೋಕೋಪಯೋಗಿ ಇಲಾಖೆಯ ₹70 ಕೊಟಿ ಮತ್ತು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ₹26 ಕೋಟಿ ಸೇರಿ ಒಟ್ಟು ₹96 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸುಸಜ್ಜಿತ ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಿಲಯ ಒಟ್ಟು 6 ಬ್ಲಾಕ್‌ಗಳನ್ನು ಹೊಂದಿದೆ.

ಧಾರವಾಡ: ಇಲ್ಲಿನ ಉದಯ ಹಾಸ್ಟೆಲ್ ಬಳಿ ಕವಿವಿ ಜಾಗೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ದೀನದಯಾಳ ಉಪಾದ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯಗಳ ಕಾಮಗಾರಿಯನ್ನು ಶಾಸಕ ಅರವಿಂದ ಬೆಲ್ಲದ ವೀಕ್ಷಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯ ₹70 ಕೊಟಿ ಮತ್ತು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ₹26 ಕೋಟಿ ಸೇರಿ ಒಟ್ಟು ₹96 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸುಸಜ್ಜಿತ ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಿಲಯ ಒಟ್ಟು 6 ಬ್ಲಾಕ್‌ಗಳನ್ನು ಹೊಂದಿದೆ. ಉತ್ತಮ ಬೆಳಕು, ಗಾಳಿ, ಅಧ್ಯಯನಕ್ಕೆ ಅಗತ್ಯ ವಾತಾವರಣ ಹೊಂದಿದ್ದು, ಪದವಿ ಮತ್ತು ಸ್ನಾತಕೋತ್ತರದ ಸುಮಾರು 1500 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಎಲ್ಲ ಜಾತಿಯ ವಿದ್ಯಾರ್ಥಿಗಳಿಗೆ ಒಂದೇ ಹಾಸ್ಟೆಲ್‌ನಲ್ಲಿ ಅವಕಾಶ ಕಲ್ಪಿಸಿರುವುದರಿಂದ ಭಾತೃತ್ವ ಬೆಸೆಯಲು ಸಾಧ್ಯ. ಈ ಆಶಯದೊಂದಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಮೇಲೆ ಒತ್ತಡ ತಂದು ಮಂಜೂರಾತಿ ಪಡೆಯಲಾಗಿತ್ತು. ರಾಜ್ಯದಲ್ಲಿ ನಿರ್ಮಿಸಲಾಗುತ್ತಿರುವ ಆರು ಹಾಸ್ಟೆಲ್‌ಗಳಲ್ಲಿ ಧಾರವಾಡ ಕೂಡ ಒಂದು. ಇದೀಗ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ನಗರದ ಮಧ್ಯ ಭಾಗದಲ್ಲಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಬೆಲ್ಲದ ಹೇಳಿದರು.

ಕವಿವ ಸಂಘದ ಪರ ಒತ್ತಡ: ಇದೇ ಸಂದರ್ಭದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಜಾಗೆ, ಅಗತ್ಯ ಅನುದಾನ ಪಡೆಯುವುದು ಸೇರಿದಂತೆ ಇತರ ಬೇಡಿಕೆಗಳಿಗಾಗಿ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಬೆಲ್ಲದ ತಿಳಿಸಿದರು. ಮೈಸೂರು ಮಹಾರಾಜರು ಕೊಟ್ಟ ಆರ್ಥಿಕ ನೆರವಿನಿಂದ ಇದು ಆರಂಭವಾಗಿದೆ. ಅನೇಕ ಮಹನೀಯರು ಸಂಘವನ್ನು ಅತಿ ಕಾಳಜಿಯಿಂದ ಮುನ್ನಡೆಸುತ್ತಿದ್ದಾರೆ. ಇಂತಹ ಸಂಘಕ್ಕೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸುವುದು ಸರ್ಕಾರದ ಹೊಣೆ. ಈ ಬಗ್ಗೆ ಎರಡು ಬಾರಿ ಸದನದಲ್ಲಿಯೂ ತಾವು ಆಗ್ರಹಿಸಿದ್ದೇವೆ. ಸಂಘದ ಬೇಡಿಕೆಗಳಿಗಾಗಿ ಪ್ರಯತ್ನ ಮಾಡುತ್ತೇನೆ ಎಂದರು.ಪಾಲಿಕೆ ಸದಸ್ಯರಾದ ಶಿವು ಹಿರೇಮಠ, ವಿಷ್ಣುಕಾಂತ ಕೊರ್ಲಹಳ್ಳಿ, ಜ್ಯೋತಿ ಪಾಟೀಲ ಇತರರು ಇದ್ದರು.

PREV

Recommended Stories

ಮಾಲೇಗಾಂವ ಸ್ಫೋಟ ತೀರ್ಪು; ಸಂಭ್ರಮಾಚರಣೆ
ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಷಡ್ಯಂತ್ರ: ಪ್ರಮೋದ ಮುತಾಲಿಕ