ಯುವರಕ್ತ ನಿಧಿ ಬೆಳ್ಳಾರೆ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ತ ದಾನ ಶಿಬಿರವು ಬೆಳ್ಳಾರೆ ಸಿ ಎ ಬ್ಯಾಂಕ್ ಸಭಾಭವನದಲ್ಲಿ ಭಾನುವಾರ ನಡೆಯಿತು.
ಸುಬ್ರಹ್ಮಣ್ಯ: ಯುವರಕ್ತ ನಿಧಿ ಬೆಳ್ಳಾರೆ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ತ ದಾನ ಶಿಬಿರವು ಬೆಳ್ಳಾರೆ ಸಿ ಎ ಬ್ಯಾಂಕ್ ಸಭಾಭವನದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಐ ಪಿ ಎಸ್ ಅಧಿಕಾರಿ ಹಾಗೂ ರೆಡ್ ಕ್ರಾಸ್ ಸೊಸೈಟಿ ಕರ್ನಾಟಕದ ಉಪಾಧ್ಯಕ್ಷ ಭಾಸ್ಕರ್ ರಾವ್ ಮಾತನಾಡಿ, ಇಂತಹ ಒಂದು ಗ್ರಾಮೀಣ ಭಾಗದಲ್ಲಿ ಮೊದಲ ಬಾರಿ ರಕ್ತ ದಾನ ಮಾಡುವವರನ್ನು ಗುರುತಿಸಿ ಅವರಿಂದ ರಕ್ತದಾನ ಮಾಡಿಸುವುದು ಯುವಸಮುದಾಯಕ್ಕೆ ಪ್ರೇರಣೆ ಸಿಕ್ಕಂತಾಗಿದೆ ಎಂದರು.ಬೆಳ್ಳಾರೆ ಯುವ ರಕ್ತ ನಿಧಿ ಸ್ಥಾಪಕ ಆರ್ .ಕೆ .ಭಟ್ ಪ್ರಾಸ್ತಾವಿಕ ಮಾತನಾಡಿ ನಮ್ಮ ಗ್ರಾಮಕ್ಕೆ ನಮ್ಮದೇ ರಕ್ತ ಅನ್ನುವ ಧ್ಯೇಯ ಇಟ್ಟುಕೊಂಡು ಇದನ್ನು ಮಾಡಿದ್ದೇವೆ ಎಂದರು.
ಪ್ರಾದೇಶಿಕ ರಕ್ತ ವರ್ಗಾವಣೆ ಕೇಂದ್ರ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಇದರ ಹಿರಿಯ ರೋಗ ಶಾಸ್ತ್ರಜ್ಞ ಡಾ. ಶರತ್ ಕುಮಾರ್ ರಾವ್ ರಕ್ತದಾನ ಮಾಹಿತಿ ನೀಡಿದರು.
ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸದಸ್ಯರಾದ ಡಾ. ಮುರಳಿಮೋಹನ್ ಚೂಂತಾರು ಮಾತನಾಡಿ ದೇಶದಲ್ಲಿ ಒಟ್ಟು ಯೋಚನೆ ಮಾಡಿದಾಗ ರಕ್ತ ನೀಡುವವರ ಸಂಖ್ಯೆ ಕಡಿಮೆ ಇದೆ. ರಕ್ತದಾನದ ಬಗ್ಗೆ ಅರಿವು ಅಗತ್ಯವಿದೆ ಎಂದರು.
ರೆಡ್ ಕ್ರಾಸ್ ಸೊಸೈಟಿ ಸುಳ್ಯ ಸಭಾಪತಿ ಪಿ. ಬಿ ಸುಧಾಕರ್ ರೈ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಮಿತಾ ಎಲ್ ರೈ ಕಾರ್ಯಕ್ರಮದಲ್ಲಿ ಡಾ. ಮುರಳಿಮೋಹನ್ ಚೂಂತಾರು, ಸುಧಾಕರ್ ರೈ ಪಿ ಬಿ ಹಾಗೂ ಪ್ರತೀಕ್ ಕುಲಾಲ್ ಅವರನ್ನು ಸನ್ಮಾನಿಸಿದರು.
ಮೊದಲು ರಕ್ತ ದಾನ ಮಾಡಿದ ದಾನಿಗಳನ್ನು ಗುಲಾಬಿ ಹೂ ನೀಡಿ ಗೌರವಿಸಲಾಯಿತು. 89 ಜನರು ರಕ್ತದಾನ ಮಾಡಿದರು. ಪ್ರಾದೇಶಿಕ ರಕ್ತ ವರ್ಗಾವಣೆ ಕೇಂದ್ರ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ವೈದ್ಯರ ತಂಡ ಶಿಬಿರ ನಡೆಸಿಕೊಟ್ಟರು. ಯುವ ರಕ್ತ ನಿಧಿ ನಿರ್ವಹಣಾ ಸಮಿತಿಯ ಆರ್ ಕೆ ಭಟ್ ಸ್ವಾಗತಿಸಿ, ನಿಶ್ಮಿತಾ ಬೆಳ್ಳಾರೆ ವಂದಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.