ಬಳ್ಳಾರಿ: ಮಹಾನಗರ ಪಾಲಿಕೆ ಸಹಾಯಕ ಇಂಜಿನಿಯರ್ ಜಿ.ಎಂ. ವೀರೇಶ್ ಮೇಲೆ 38ನೇ ವಾರ್ಡ್ನ ಪಾಲಿಕೆ ಸದಸ್ಯ ವಿ.ಕುಬೇರ ನಡೆಸಿದ ಹಲ್ಲೆಯನ್ನು ಖಂಡಿಸಿ ಇಲ್ಲಿನ ಮಹಾನಗರ ಪಾಲಿಕೆ ಎದುರು ನೌಕರರು ಹಾಗೂ ಸಿಬ್ಬಂದಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಆರೋಪಿ ಬಂಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.ರಾಜ್ಯ ಸರ್ಕಾರಿ ನೌಕರರ ಸಂಘ ಹೋರಾಟಕ್ಕೆ ಸಾಥ್ ನೀಡಿದೆ. ಹಲ್ಲೆ ನಡೆಸಿರುವ ಪಾಲಿಕೆ ಸದಸ್ಯನ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಪ್ರಾಂಶುಪಾಲ ಡಾ.ರಾಜಶೇಖರ ಗಾಣಿಗಾರ ಮಾತನಾಡಿ, ಕರ್ತವ್ಯನಿರತ ಅಧಿಕಾರಿಗೆ ಹಲ್ಲೆಗೈದ ಆರೋಪಿ ವಿರುದ್ಧ ಕ್ರಮ ವಹಿಸಬೇಕು ಎಂದರು.
ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷ ಘಟನೆ ಖಂಡಿಸಿದೆ. ಪಾಲಿಕೆ ನೌಕರರ ಸಂಘ, ಸಿಬ್ಬಂದಿ ಪಾಲಿಕೆ ಎದುರು ಶುಕ್ರವಾರ ಧರಣಿ ಆರಂಭಿಸಿದ್ದು, ಅದು ಶನಿವಾರವಾದ ಎರಡನೇ ದಿನಕ್ಕೆ ಕಾಲಿರಿಸಿದೆ. ಪಾಲಿಕೆ ಸದಸ್ಯನ ನಡೆ ಆಡಳಿತಾರೂಢ ಕಾಂಗ್ರೆಸ್ ಮುಖಂಡರು ಸಹ ಟೀಕಿಸಿದ್ದಾರೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.ತಡರಾತ್ರಿವರೆಗೆ ನಡೆದ ಧರಣಿ:
ಕೆಲಸದಿಂದ ದೂರ ಉಳಿದ ಸಿಬ್ಬಂದಿ; ಮನವೊಲಿಕೆ:
ಹಲ್ಲೆ ಖಂಡಿಸಿ ವೀರಶೈವ ಲಿಂಗಾಯತ ಮಹಾಸಭಾ ಸದಸ್ಯರು ಪ್ರತಿಭಟನೆ ನಡೆಸಿದರು. ಮಹಾಸಭಾದ ಜಿಲ್ಲಾಧ್ಯಕ್ಷ ಬಿಚ್ಚುಗಲ್ಲು ಪಂಚಾಕ್ಷರಪ್ಪ, ಮುಖಂಡರಾದ ಬಿ.ಎಂ. ಎರಿಸ್ವಾಮಿ, ಸಿರಿಗೇರಿ ವಿಶ್ವನಾಥ ಇದ್ದರು.
ಹಲ್ಲೆ ಆರೋಪಿ ವಿರುದ್ಧ ಪ್ರಕರಣ ದಾಖಲು ಮಾಡದಂತೆ ಅನೇಕ ಒತ್ತಡ ತರಲಾಗಿದೆ. ಆದರೆ, ಪಾಲಿಕೆ ನೌಕರರು ಪಟ್ಟು ಸಡಿಲಿಸಲಿಲ್ಲ. ಕೊನೆಗೆ ಬ್ರೂಸ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾಗಿದ್ದ ಎಂಜಿನಿಯರ್ನನ್ನು ಜಿಲ್ಲಾಸ್ಪತ್ರೆಯಿಂದ ಶುಕ್ರವಾರ ರಾತ್ರಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಕನ್ನಡಪ್ರಭಕ್ಕೆ ತಿಳಿಸಿದರು.
ಹಲ್ಲೆ ಆರೋಪಿಯನ್ನು ಬಂಧಿಸಲಾಗಿಲ್ಲ. ಈವರೆಗೆ ಆತ ಪೊಲೀಸರ ಕೈಗೆ ಸಿಕ್ಕಿಲ್ಲ. ಸರ್ಕಾರಿ ನೌಕರನಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ, ಪ್ರಾಣ ಬೆದರಿಕೆ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬ್ರೂಸ್ಪೇಟೆ ಪೊಲೀಸರು ತಿಳಿಸಿದ್ದಾರೆ.