ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಬಹು ಮಹಡಿಯ ಕಟ್ಟಡಕ್ಕೆ ವಯಸ್ಕರು, ಅಂಗವಿಕಲರು ತೆರಳಲು ಸೂಕ್ತ ಲಿಫ್ಟ್ ವ್ಯವಸ್ಥೆಯಿಲ್ಲ. ಆದರೆ ಇದನ್ನು ಮಾಲಕರ ಬಳಿ ಕೇಳುವ ಬದಲು ಬಾಡಿಗೆದಾರರು ಪಟ್ಟಣ ಪಂಚಾಯಿತಿ ಮುಂಭಾಗ ಗಲಾಟೆ ಮಾಡುತ್ತಾರೆ. ಆದರೆ ಪ.ಪಂ.ನಿಂದ ಮೇಲಧಿಕಾರಿಗಳಿಗೆ ಪತ್ರ ಬರೆಯಬೇಕಿತ್ತು ಎಂದರು.
ಬೆಳ್ತಂಗಡಿ ಪ.ಪಂ. ಒಳಪಟ್ಟ ಸಂತೆಕಟ್ಟೆಬಸ್ನಿಲ್ದಾಣವಿರುವ ರಾಜೀವ್ ಗಾಂಧಿ ಕಟ್ಟಡ 2016ರಲ್ಲಿ ಉದ್ಘಾಟನೆಗೊಂಡಿದ್ದು, ಪ್ರಸಕ್ತ ಅಪಾಯದಲ್ಲಿರುವ ಕುರಿತು ಚರ್ಚೆ ನಡೆದಾಗ ಸಾಮರ್ಥ್ಯ ಪರಿಶೀಲನೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದೆಂದು ನಿರ್ಣಯಿಸಲಾಯಿತು. ಸಂತೆಕಟ್ಟೆನೂತನ ಕಟ್ಟಡವೂ ಅವೈಜ್ಞಾನಿಕವಾಗಿ ರಚಿಸಲಾಗಿದೆ ಎಂದು ಸದಸ್ಯ ಜಗದೀಶ್ ಸಭೆಯ ಗಮನ ಸೆಳೆದರು.ಖಾಸಗಿ ಕಟ್ಟಡದ ಸಮಸ್ಯೆ ಮತ್ತು ಕೊಳಚೆ ನೀರಿನ ಬಗ್ಗೆ ಅಧ್ಯಕ್ಷ ಜಯಾನಂದ್ ಪ್ರತಿಕ್ರಿಯಿಸಿ ಸೋಮಾವತಿ ನದಿಗೆ ಚರಂಡಿ ಮೂಲಕ ಕೊಳಚೆ ನೀರು ಸಾಗುತ್ತಿದೆ. ಕಟ್ಟಡ ಸಹಿತ ಯಾವುದೇ ಮನೆ, ಖಾಸಗಿ ಕಟ್ಟಡದವರು ತೆರೆದ ಚರಂಡಿಗೆ ಕೊಳಚೆ ನೀರು ಬಿಡುವಂತಿಲ್ಲ. ಬಹು ಮಹಡಿ ಕಟ್ಟಡ ಮುಂಭಾಗ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಲಕರು ಗುರುತಿಸಬೇಕು. ತೆರೆದ ಚರಂಡಿಗೆ ಪ.ಪಂ. ಕಲ್ಲುಹಾಸಿಕೊಡುವ ನಿರ್ಧಾರವಿಲ್ಲ. ಮಾಲಕರೇ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು. ಆದರೆ ಕಾಮಗಾರಿ ಕೈಗೆತ್ತಿಕೊಳ್ಳುವ ಮೊದಲು ಪ.ಪಂ. ಅನುಮತಿ ಪಡೆದು ಮಳೆಗಾಲದಲ್ಲಿ ನೀರು ಸರಾಗವಾಗಿ ಸಾಗಲು ವ್ಯವಸ್ಥೆ ಕಲ್ಪಿಸಿಕೊಟ್ಟರಷ್ಟೆ ಅನುಮತಿ ನೀಡಲಾಗುವುದು ಎಂದರು.ಕೃಷಿ ಇಲಾಖೆ ಸಮೀಪ 10 ಸೆಂಟ್ಸ್ ಜಾಗ ಯುಜಿಡಿ ಘಟಕ ನಿರ್ಮಾಣಕ್ಕೆ ಅವಕಾಶ ಕೋರಿ ಸರಕಾರಕ್ಕೆ ಪತ್ರ ಬರೆಯಲು ಚಿಂತನೆ ನಡೆಸಲಾಯಿತು. 40 ಲಕ್ಷ ರುಪಾಯಿ ವೆಚ್ಚದಲ್ಲಿ ಬೆಳ್ತಂಗಡಿ ರುದ್ರಭೂಮಿ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವ ಬಗ್ಗೆ ಸಭೆಯಲ್ಲಿ ತಿಳಿಸಲಾಯಿತು.
ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ ಎಂಜಿನಿಯರ್ ಮಹಾವೀರ ಆರಿಗ ಸಹಿತ ಸದಸ್ಯರು ಸಭೆಯಲ್ಲಿ ಹಾಜರಿದ್ದರು.