ಬೆಳ್ತಂಗಡಿ: ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

KannadaprabhaNewsNetwork |  
Published : Oct 12, 2025, 01:02 AM IST
ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ | Kannada Prabha

ಸಾರಾಂಶ

14ರ ಮತ್ತು 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಮುಂಡಾಜೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ದ.ಕ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ದಕ್ಷಿಣ ಕನ್ನಡ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಹಾಗೂ ಮುಂಡಾಜೆ ಪ್ರೌಢ ಶಾಲೆ ಮುಂಡಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಮುಂಡಾಜೆಯ ವಿವೇಕಾನಂದ ಕ್ರೀಡಾಂಗಣದಲ್ಲಿ ಶುಕ್ರವಾರವ ಸಂಜೆ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ ನೀಡಿ, ಮುಂಡಾಜೆ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗಳನ್ನು ಪ್ರಶಂಸಿಸಿ, ಕ್ರೀಡೆಯಿಂದ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೆಳ್ತಂಗಡಿಯ ನಿಕಟಪೂರ್ವ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಪಂದ್ಯಾಟಕ್ಕೆ ಶುಭಹಾರೈಸಿದರು.ಮುಂಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್ ಎಂ., ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ರಾಜ್ಯ ಸರ್ಕಾರಿ ನೌಕರರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯರಾಜ್ ಜೈನ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವಿರಾಜ್ ಗೌಡ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ಉಜಿರೆಯ ಕ್ರೀಡಾ ಕಾರ್ಯದರ್ಶಿ ರಮೇಶ್, ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಕೋಶಾಧಿಕಾರಿ ಡಾ.ರವಿ ಎಂ.ಎನ್., ಪ್ರೌಢಶಾಲೆಯ ಮುಖ್ಯಶಿಕ್ಷಕಿ ಜಯಂತಿ ಟಿ., ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ.ಎಸ್., ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಗೀತಾ, ಸರಸ್ವತಿ ಆಂ. ಮಾ. ಶಾಲೆ ಮುಂಡಾಜೆಯ ಮುಖ್ಯ ಶಿಕ್ಷಕಿ ಚಂದ್ರಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಾಲಿಬಾಲ್ ಆಟಗಾರ್ತಿ ಯಕ್ಷಿತಾ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಅಜಿತ್ ಕುಮಾರ್ ಜೈನ್ ಕೊಕ್ರಾಡಿ ನಿರೂಪಿಸಿ, ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕೃಷ್ಣಾನಂದ ರಾವ್ ವಂದಿಸಿದರು.

PREV

Recommended Stories

ಋತು ರಜೆ ಕೊಡದಿದ್ದರೆ ಕ್ರಮ : ಲಾಡ್‌
ಪ್ರೇಮಿ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ