ಗ್ರಾಮಸ್ಥರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರಿಂದ ಆಯೋಜನೆ
ತಾಲೂಕಿನ ಪಡುವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾದ್ಯಾಯರಾಗಿ ಕೆಲಸ ನಿರ್ವಹಿಸುತ್ತಿದ್ದ ಸೋಮಶೇಖರ್ ಅವರನ್ನು ಗ್ರಾಮಸ್ಥರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರಿಂದ ಆತ್ಮೀಯವಾಗಿ ಬೀಳ್ಕೊಟ್ಟರು.
ಎಸ್ಡಿಎಂಸಿ ಅಧ್ಯಕ್ಷ ಚಂದನ್ ಮಾತನಾಡಿ, ‘ಪಡುವಳಲು ಶಾಲೆಯಲ್ಲಿ ಸುಮಾರು 9 ವರ್ಷದಿಂದ ಕರ್ತವ್ಯ ನಿರ್ವಹಿಸಿ ಹಾಸನದ ಹಾಲುಬಾಗಿಲು ಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಇವರು ನಮ್ಮ ಶಾಲೆಯಲ್ಲಿ ಉತ್ತಮ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಮಕ್ಕಳಿಗೆ ಪಾಠದ ಜತೆ ಸಂಸ್ಕಾರವನ್ನು ಸಹ ಕಲಿಸಿ ಕೊಟ್ಟಿದ್ದಾರೆ ಎಂದು ಹೇಳಿದರು.ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖ್ಯ ಶಿಕ್ಷಕರಾದ ಸೋಮಶೇಖರ್, ‘ನಾನು ಈ ಶಾಲೆಗೆ ಬಂದು ಸುಮಾರು 9 ವರ್ಷ ಆಗಿದ್ದು ಈ ಊರು ನನಗೆ ಸ್ವಂತ ಊರಿಗಿಂತ ಹೆಚ್ಚು. ಇಲ್ಲಿಯ ವಾತಾವರಣ ಗ್ರಾಮದ ಜನ ಈ ಶಾಲೆಯನ್ನು ಬಿಟ್ಟು ಹೋಗಲು ಮನಸ್ಸು ಇಲ್ಲ’ ಎಂದು ತಿಳಿಸಿದರು.
ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳು ಮುಖ್ಯೋಪಾಧ್ಯಾರಿಗೆ ಗುಲಾಬಿ ಹೂ ನೀಡುವ ಮೂಲಕ ಬೀಳ್ಕೊಡುಗೆ ನೀಡಿದರು.
ಗ್ರಾಮ ಪಂಚಾಯತಿ ಮಾಜಿ ಸದಸ್ಯ ಹರೀಶ್, ಶಾಲಾ ಶಿಕ್ಷಕರಾದ ಕುಮಾರ್, ತೀರ್ಥಮಣಿ, ಅತಿಥಿ ಶಿಕ್ಷಕರಾದ ಹೇಮ, ಲತಾ, ಎಸ್ಡಿಎಂಸಿ ಸದಸ್ಯರಾದ ದೇವಕುಮಾರ್, ತಾರೇಶ್, ಸತೀಶ್, ರಮೇಶ್, ವಿನುತಾ, ಶುಭಾ, ಆಶಾ ಹಾಗೂ ಗ್ರಾಮಸ್ಥರು ಹಾಜರಿದ್ದರು.ಬೇಲೂರು ತಾಲೂಕಿನ ಪಡುವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಿಗೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.