)
- ಭದ್ರಾ ಮೇಲ್ದಂಡೆ ಕಾಲುವೆಗೆ 3 ಟಿಎಂಸಿ ನೀರು, ಗುಟ್ಕಾ ನಿಷೇಧ ವಿರುದ್ಧ ಪ್ರತಿಭಟನೆ - ಬಲವಂತದಿಂದ ಅಂಗಡಿ ಮುಚ್ಚಿಸಲು ಪ್ರಯತ್ನ: ಸ್ಥಳಕ್ಕೆ ಪೊಲೀಸರು ದೌಡು
ಕನ್ನಡಪ್ರಭ ವಾರ್ತೆ ದಾವಣಗೆರೆ
ಗುಟ್ಕಾ-ಪಾನ್ ಮಸಾಲ ನಿಷೇಧ ಹಾಗೂ ಭದ್ರಾ ಡ್ಯಾಂನಿಂದ ಭದ್ರಾ ಮೇಲ್ದಂಡೆಗೆ ಪ್ರಾಯೋಗಿಕವಾಗಿ 3 ಟಿಎಂಸಿ ನೀರು ಬಿಡುಗಡೆ ಆದೇಶ ವಿರೋಧಿಸಿ ಬಿಜೆಪಿ ಹಾಗೂ ಅಡಕೆ ಬೆಳೆಗಾರರ ಒಕ್ಕೂಟದಿಂದ ಮಂಗಳವಾರ ಕರೆ ನೀಡಿದ್ದ ದಾವಣಗೆರೆ ಬಂದ್ ವೇಳೆ ಹಳೆ ಟೈರ್ಗಳನ್ನು ವಿವಿಧೆಡೆ ಸುಟ್ಟು ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.ನಗರದ ವಿದ್ಯಾರ್ಥಿ ಭವನ, ಶಾಬನೂರು ರಸ್ತೆ, ಕಿತ್ತೂರು ಚನ್ನಮ್ಮ ವೃತ್ತ, ರೇಣುಕಾ ಮಂದಿರ, ಈರುಳ್ಳಿ ಮಾರುಕಟ್ಟೆ ವೃತ್ತ, ಹರಳೆಣ್ಣೆ ಕೊಟ್ರಬಸಪ್ಪ ವೃತ್ತ, ಶ್ರೀ ಜಯದೇವ ವೃತ್ತ ಸೇರಿದಂತೆ ಪ್ರಮುಖ ವೃತ್ತ, ರಸ್ತೆಗಳಲ್ಲಿ ಪ್ರತಿಭಟನಾಕಾರರು ನಸುಕಿನಿಂದಲೇ ಹಳೆ ಟೈರ್ಗಳನ್ನು ಸುಟ್ಟು ಹಾಕುವ ಮೂಲಕ ದಾವಣಗೆರೆ ಬಂದ್ ತೀವ್ರತೆಯನ್ನು ಪ್ರದರ್ಶಿಸಿದರು.
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಲೋಕಿಕೆರೆ ನಾಗರಾಜ, ಬಿ.ಜಿ.ಅಜಯಕುಮಾರ, ಎಂ.ಬಸವರಾಜ ನಾಯ್ಕ, ಬಿ.ಎಸ್.ಜಗದೀಶ, ಮೆಳ್ಳೆಕಟ್ಟೆ ಎ.ಇ.ನಾಗರಾಜ, ಚಂದ್ರಶೇಖರ ಪೂಜಾರ ಇತರರ ನೇತೃತ್ವದಲ್ಲಿ ಕರೆ ನೀಡಿದ್ದ ದಾವಣಗೆರೆ ನಗರ ಬಂದ್ ಹಿನ್ನೆಲೆಯಲ್ಲಿ ವಿವಿಧೆಡೆ ರಸ್ತೆ ತಡೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುವ ಮೂಲಕ ಘೋಷಣೆ ಕೂಗಲಾಯಿತು. ಜಿಲ್ಲಾ ಕೇಂದ್ರದ ಬಹುತೇಕ ಕಡೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು.
ಪ್ರತಿಭಟನಾಕಾರರ ಸಿಟಿ ರೌಂಡ್ಸ್:
ಬಸ್ಸು ಸಂಚಾರ ಸ್ಥಗಿತಕ್ಕೆ ಮನವಿ:
50ಕ್ಕೂ ಹೆಚ್ಚು ಮಂದಿ ವಶ:
ಹಳೆ ಪಿ.ಬಿ. ರಸ್ತೆಯ ರಿಲಯನ್ಸ್ ಸ್ಮಾರ್ಟ್ ಬಜಾರ್ ತೆರೆದಿದ್ದನ್ನು ಗಮನಿಸಿದ ಪ್ರತಿಭಟನಾಕಾರರು ಒಳಗೆ ನುಗ್ಗಿ, ಲೈಟ್ ಆಫ್ ಮಾಡಿಸಿ, ಅದನ್ನು ಮುಚ್ಚಿಸಿದರು. ಮಂಗಳವಾರ ಬೆಳಗ್ಗೆ 6 ಗಂಟೆಯ ಮಬ್ಬುಗತ್ತಲಿನಿಂದಲೇ ಹೋರಾಟ ಶುರುವಾಗಿತ್ತು. ಬಂದ್ ವೇಳೆ ಒತ್ತಾಯಪೂರ್ವಕವಾಗಿ ಅಂಗಡಿ ಮುಂಗ್ಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದರು. ಇಲ್ಲಿನ ಅಕ್ಕ ಮಹಾದೇವಿ ರಸ್ತೆಯಲ್ಲಿ ಅಂಗಡಿ ಮುಚ್ಚಿಸಲು ಯತ್ನಿಸಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು ಇತರರನ್ನು ಪೊಲೀಸರು ವಶಕ್ಕೆ ಪಡೆದರು.
ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಹೊರಟ ಎಂ.ಪಿ.ರೇಣುಕಾಚಾರ್ಯ ಇತರರನ್ನು ಪೊಲೀಸರು ತಡೆದ ವೇಳೆ ತೀವ್ರ ವಾಗ್ವಾದ, ಮಾತಿನ ಚಕಮಕಿ, ತಳ್ಳಾಟ ನಡೆಯಿತು. ರೇಣುಕಾಚಾರ್ಯ, ಲೋಕಿಕೆರೆ ನಾಗರಾಜ, ಬಿ.ಜಿ.ಅಜಯಕುಮಾರ, ಬಿ.ಎಸ್.ಜಗದೀಶ, ಮೆಳ್ಳೆಕಟ್ಟೆ ಎ.ಇ.ನಾಗರಾಜ ಸೇರಿದಂತೆ ಅನೇಕರು ಪಿಜೆ ಬಡಾವಣೆಯಲ್ಲಿ ತೆರೆದ ವಾಹನದಲ್ಲಿ ಪ್ರತಿಭಟನೆಯಲ್ಲಿ ಸಾಗುತ್ತಿದ್ದನ್ನು ತಡೆದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮುಖಂಡರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಪೊಲೀಸ್ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಪ್ರತಿಭಟನೆಯ ನೇತೃತ್ವದ ವಹಿಸಿದ್ದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು, ಪೊಲೀಸ್ ಕವಾಯಿತು ಮೈದಾನಕ್ಕೆ ಕರೆದೊಯ್ದು, ಮಧ್ಯಾಹ್ನದ ನಂತರ ಬಿಡುಗಡೆ ಮಾಡಿದರು.
- - -(ಬಾಕ್ಸ್)
* ಬಂದ್ ವೇಳೆ ನೂಕಾಟ: ಹಲವರಿಗೆ ಗಾಯದಾವಣಗೆರೆ: ದಾವಣಗೆರೆ ಬಂದ್ ವೇಳೆ ಪೊಲೀಸರು ವಶಕ್ಕೆ ಪಡೆಯುವ ವೇಳೆ ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎರಡೂ ಕೈಗಳಿಗೆ ತರಚು ಗಾಯಗಳಾಗಿದ್ದು, ರೇಣುಕಾಚಾರ್ಯ ಸೇರಿದಂತೆ 45ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದರು.ನಂತರ ಪೊಲೀಸ್ ಕವಾಯಿತು ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಮುಖಂಡರು, ಕಾರ್ಯಕರ್ತರು ಹಾಗೂ ತಮ್ಮ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಶಾಂತಿಯುತ ಹೋರಾಟ ನಡೆಸಿದ್ದವರ ಮೇಲೆ ದೌರ್ಜನ್ಯ ಎಸಗುವುದೇನಿತ್ತು ಎಂದರು.
ಮಾನವೀಯತೆಯನ್ನೇ ಮರೆತು ಪೊಲೀಸರು ಮೃಗದ ರೀತಿ ವರ್ತಿಸಿದ್ದಾರೆ. ಬಹಳಷ್ಟು ಜನರಿಗೆ ಸಣ್ಣಪುಟ್ಟ ಗಾಯಗಳು, ತರಚು ಗಾಯಗಳಾಗಿವೆ. ರೈತರ ಪರವಾಗಿ ಹೋರಾಟ ಮಾಡುತ್ತಿದ್ದರೆ ಅನಗತ್ಯವಾಗಿ ಪೊಲೀಸರು ಪ್ರಚೋದನೆ ಮಾಡುವ ಉದ್ದೇಶ ಏನಿತ್ತು? ನಮ್ಮನ್ನು ಕೆರಳಿಸಿದ್ದೀರಿ. ನಮ್ಮ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಮಾಡಿಸಿದ್ದೀರಿ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಬಂದೇ ಬರುತ್ತದೆ. ಇವತ್ತು ದೌರ್ಜನ್ಯ ಎಸಗಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಹೆಸರನ್ನು ಪಟ್ಟಿ ಮಾಡಿಟ್ಟುಕೊಂಡಿದ್ದೇವೆ ಎಂದು ಗುಟುರು ಹಾಕಿದರು.ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸೋಮವಾರ ನನಗೆ ಕರೆ ಮಾಡಿದ್ದರು. ಕಾರಜೋಳ ಅವರಿಗೂ ಹೇಳಿ, ಮನವರಿಕೆ ಮಾಡಿಕೊಟ್ಟಿದ್ದೇನೆ. ತುಂಗಾ ನದಿಯಿಂದ ಭದ್ರಾ ಡ್ಯಾಂಗೆ 17.41 ಟಿಎಂಸಿ ನೀರು ತುಂಬಿಸಿ, ಭದ್ರಾ ಮೇಲ್ದಂಡೆಗೆ ನೀರು ಒಯ್ಯಲಿ ಎಂಬುದನ್ನು ವಿವರಿಸಿದ್ದೇನೆ ಎಂದು ಅವರು ಹೇಳಿದರು.ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಬಿಡುವ ಬಗ್ಗೆ ಇರುವ ಷರತ್ತನ್ನು ಉಲ್ಲಂಘಿಸಿದ್ದಾರೆ. ತುಂಗಾ ನದಿ, ಡ್ಯಾಂನಿಂದ 17.41 ಟಿಎಂಸಿ ನೀರನ್ನು ಭದ್ರಾ ಡ್ಯಾಂಗೆ ಲಿಫ್ಟ್ ಮಾಡಬೇಕೆಂಬ ಷರತ್ತು ಇದೆ. ಅದನ್ನು ಉಲ್ಲಂಘಿಸಿ, ರಾಜ್ಯ ಸರ್ಕಾರ ಹಿರಿಯೂರು ಉಪ ಚುನಾವಣೆ ಗಮನದಲ್ಲಿಟ್ಟುಕೊಂಡು, 3 ಟಿಎಂಸಿ ನೀರನ್ನು ಭದ್ರಾ ಮೇಲ್ದಂಡೆಗೆ ಹರಿಸಲು ಆದೇಶಿಸಿದ್ದು ಸರಿಯಲ್ಲ. ಗುಟ್ಕಾ ನಿಷೇಧಿಸಲು ಮುಂದಾಗಿದ್ದೂ ಸರಿಯಲ್ಲ. ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನಾವು ಹೋರಾಟ ಮಾಡಿದ್ದೇವೆ ಎಂದು ರೇಣುಕಾಚಾರ್ಯ ಹೇಳಿದರು.ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಮಾತನಾಡಿ, ಗುಟ್ಕಾ ಬ್ಯಾನ್ ಗೊಂದಲದಿಂದಾಗಿ ಅಡಕೆ ಬೆಳೆಗಾರರಿಗೆ ನಷ್ಟವಾಗುತ್ತಿದೆ. ಅಡಕೆ ಬೆಲೆ ದಿಢೀರನೇ ಕುಸಿಯುತ್ತಿದೆ. ರಾಜ್ಯ ಸರ್ಕಾರದ ಇಂತಹ ರೈತವಿರೋಧಿ ನೀತಿ ವಿರುದ್ಧ ನಮ್ಮ ಹೋರಾಟ ನಡೆಸಿದ್ದೇವೆ. ತುಂಗಾ ಡ್ಯಾಂನಿಂದ 17.41 ಟಿಎಂಸಿ ನೀರನ್ನು ಭದ್ರಾ ಡ್ಯಾಂಗೆ ನೀರು ಲಿಫ್ಟ್ ಮಾಡಬೇಕೆಂಬ ಷರತ್ತು ಇದೆ. ಅಂತಹ ಷರತ್ತನ್ನೇ ಉಲ್ಲಂಘಿಸಿ, ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಬಿಡುಗಡೆ ಆದೇಶದ ವಿರುದ್ಧ ನಮ್ಮ ಹೋರಾಟ ನಡೆದಿದೆ. ಭದ್ರಾ ಅಚ್ಚುಕಟ್ಟು ರೈತರಿಗೆ ಅನ್ಯಾಯ ಆಗುತ್ತೆ. ಇಂತಹ ಆದೇಶ ಹಿಂಪಡೆಯದಿದ್ದರೆ ಮತ್ತಷ್ಟು ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
- - -(-ಫೋಟೋ ಇದೆ.)- - -
(** ಫೋಟೋಗಳಿವೆ)