ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಪಟ್ಟಣದ ತಾಲೂಕು ಪಂಚಾಯತಿ ಕಟ್ಟಡದಲ್ಲಿ ಜಿಪಂ, ತಾಪಂ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀಮಂತರು ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರೆ. ಬಡವರು, ಮಧ್ಯಮ ವರ್ಗದವರು ಪಡೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲ ಜನರು ಉತ್ತಮ ಜೀವನ ನಡೆಸಬೇಕೆಂಬ ಸಂವಿಧಾನದ ಆಶಯದಂತೆ ನಮ್ಮ ಸರ್ಕಾರ ಈ ಯೋಜನೆಗಳನ್ನು ಜಾರಿ ತರುವ ಮೂಲಕ ರಾಜ್ಯದ ಮಹಿಳೆಯರಿಗೆ, ನಿರುದ್ಯೋಗ ಯುವಕರಿಗೆ ಆರ್ಥಿಕ ಸಹಾಯ ಮಾಡಿದೆ. ಸಮಿತಿಯ ಅಧ್ಯಕ್ಷರು, ಸದಸ್ಯರು ಜನರಿಗೆ ಈ ಯೋಜನೆಗಳು ಮುಟ್ಟುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮೊದಲ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ತಂದ ಕೀರ್ತಿ ತಮಿಳುನಾಡಿಗೆ ಸಲ್ಲುತ್ತದೆ. ನಮ್ಮದು ಎರಡನೇ ರಾಜ್ಯ. ಈ ಯೋಜನೆಗಳು ದುರುಪಯೋಗವಾಗಬಾರದು ಎಂದು ಹೇಳಿದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಇಲಿಯಾಸ್ ಅಹ್ಮದ ಬೊರಮನಿ ಮಾತನಾಡಿ, ಈ ಯೋಜನೆಗಳಿಂದ ಜಿಲ್ಲೆಗೆ ₹ 1800 ಕೋಟಿ ಬಂದಿದೆ. ಈ ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಒಟ್ಟು 41,134 ಅರ್ಜಿಗಳು ಬಂದಿದ್ದು, ಇದರಲ್ಲಿ 3,200 ಅರ್ಜಿಗಳು ತಾಂತ್ರಿಕ ತೊಂದರೆಯಿಂದ ಉಳಿದುಕೊಂಡಿವೆ. ಮುಂದಿನ ದಿನಗಳಲ್ಲಿ ಇವರಿಗೂ ಅನುಕೂಲವಾಗುವಂತೆ ತಾಲೂಕು ಸಮಿತಿ ಕ್ರಮ ತೆಗೆದುಕೊಳ್ಳಬೇಕೆಂದರು.
ಡಿಸಿಸಿ ಬಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ಮುಖಂಡರಾದ ಸಂಗಮೇಶ ಓಲೇಕಾರ, ಶಂಕರಗೌಡ ಬಿರಾದಾರ, ಮಹಿಳಾ ಬ್ಲಾಕ್ ಅಧ್ಯಕ್ಷೆ ರುಕ್ಮಿಣಿ ರಾಠೋಡ ಮಾತನಾಡಿದರು.
ಪೋಟೋ: ಬಸವನಬಾಗೇವಾಡಿ ತಾಲೂಕು ಪಂಚಾಯತಿಯ ಕಟ್ಟಡದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಕಾರ್ಯಾಲಯ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ ಮಾತನಾಡಿದರು.-----------
ರಾಜ್ಯದ ಎಲ್ಲ ಜನರಿಗೂ ಪಂಚ ಗ್ಯಾರಂಟಿ ಯೋಜನೆಗಳು ತಲುಪುವಂತೆ ಮಾಡುತ್ತಿದೆ. ಕೆಲವರು ವಿನಾಕಾರಣ ಟೀಕೆ ಮಾಡುತ್ತಾರೆ. ಅವರು ಟೀಕೆ ಮಾಡಿದರೂ ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ಎಲ್ಲ ಯೋಜನೆಗಳು ವ್ಯವಸ್ಥೆ ನಿರ್ವಹಣೆ ಮಾಡಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ರಾಜ್ಯ ಸಮಿತಿ ರಾಜ್ಯ, ಜಿಲ್ಲಾ, ತಾಲೂಕು ಹಂತಗಳಲ್ಲಿ ಕಾರ್ಯನಿರ್ವಸುತ್ತಿವೆ.