ಅಕ್ಷರ ದಾಸೋಹ ನಿರ್ದೇಶಕರಿಗೆ ಮನವಿ
ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ 26 ಸಾವಿರ ರು. ವೇತನ ಕೊಡಬೇಕು. ಬಿಸಿಯೂಟ ನೌಕರರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಜಾರಿಗೆ ತರಲು ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ ಎಂದು ಸಿಐಟಿಯು ಹೇಳಿದೆ.
60 ವರ್ಷ ವಯಸ್ಸು ದಾಟಿದವರಿಗೆ ಹಿಡಿ ಗಂಟು ನೀಡಬೇಕು. ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು. ಅಕ್ಷರ ದಾಸೋಹ ಯೋಜನೆ ಶಿಕ್ಷಣ ಇಲಾಖೆಯಲ್ಲಿಯೇ ನಡೆಯಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರು. ಪರಿಹಾರ ಕೊಡಬೇಕು. ಈ ಯೋಜನೆ ದೇಶದ ಮಹತ್ವದ ಯೊಜನೆಯಾಗಿ ದೇಶದಾದ್ಯಂತ ಮುಂದುವರಿದಿದೆ. ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅನುದಾನಗಳನ್ನು ನಿರಂತರ ಕಡಿಮೆ ಮಾಡುತ್ತಿದೆ. ಇತರ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದೆ.ಸಂಘದ ಸಂಘದ ಗೌರವಾಧ್ಯಕ್ಷೆ ಸುನಂದ ಹಿರೇಮಠ, ಖಜಾಂಚಿ ಮಂಜುಳಾ ಹೊಸಮನಿ, ಉಪಾಧ್ಯಕ್ಷೆ ಲಾಲಬಿ, ಜಯಶ್ರೀ ಇದ್ದರು.