ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದ ಬಹುತೇಕ ಬಡಾವಣೆಗಳಲ್ಲಿ ಪ್ರತಿಷ್ಠಾಪನೆ ಪ್ರಯುಕ್ತ ಒಂದಲ್ಲಾ ಒಂದು ಬಗೆಯ ಕಾರ್ಯಕ್ರಮ ಏರ್ಪಾಡಾಗಿದೆ. ದೇವಸ್ಥಾನಗಳಲ್ಲಿ ರಾಮನಾಮ ಸಂಕೀರ್ತನೆ ಸೇರಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಬೆಳಗ್ಗೆ 9ರಿಂದಲೇ ಪ್ರಾಣ ಪ್ರತಿಷ್ಠಾಪನೆ ನೇರ ಪ್ರಸಾರ ವೀಕ್ಷಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಸಾಮೂಹಿಕ ಶ್ರೀರಾಮ ತಾರಕ ಮಂತ್ರ ಪಠಣ, ಪ್ರವಚನ ಆಲಿಕೆ, ಕರಸೇವೆಯ ಹೋರಾಟದ ಮೆಲುಕು, ಅನ್ನಪ್ರಸಾದ ವಿತರಣೆ, ದೀಪೋತ್ಸವ ನಡೆಯಲಿದೆ. ಶ್ರೀರಾಮ ವೇಷಭೂಷಣ ತೊಟ್ಟ ಮಕ್ಕಳ ಮೆರವಣಿಗೆ ಸಹ ಕೆಲವು ಕಡೆ ಏರ್ಪಡಿಸಲಾಗಿದೆ.
ಶ್ರೀರಾಮ, ಆಂಜನೇಯ ದೇವಸ್ಥಾನದಲ್ಲಿ ಪೂಜೆ:ವಿಲ್ಸನ್ ಗಾರ್ಡನ್ನಲ್ಲಿರುವ ಶ್ರೀರಾಮ ದೇವಸ್ಥಾನ, ರಾಜಾಜಿನಗರದ 6ನೇ ಬ್ಲಾಕ್ನಲ್ಲಿರುವ ರಾಮಮಂದಿರ, ಬಸವನಗುಡಿಯ ಮಾಡೆಲ್ ಹೌಸ್ ಸ್ಟ್ರೀಟ್ನಲ್ಲಿರುವ ಶ್ರೀರಾಮ ದೇವಸ್ಥಾನ, ಜೆ.ಪಿ.ನಗರ 33ನೇ ಮುಖ್ಯ ರಸ್ತೆಯಲ್ಲಿರುವ ಶ್ರೀರಾಮ ದೇವಸ್ಥಾನ, ಇಂದಿರಾನಗರದ ಧೂಪನಹಳ್ಳಿಯ ಶ್ರೀ ಕೋದಂಡರಾಮ, ಈಜಿಪುರದ ಶ್ರೀರಾಮ ದೇವಸ್ಥಾನ, ವಿದ್ಯಾರಣ್ಯಪುರ ಎಚ್ಎಂಟಿ ಲೇಔಟ್ನ ಶ್ರೀರಾಮ ಮಂದಿರ, ಕೋರಮಂಗಲದ ಶಶಿಕಲಾ ಅಪಾರ್ಟ್ಮೆಂಟ್ ಬಳಿಯಿರುವ ಶ್ರೀರಾಮ ದೇವಸ್ಥಾನ, ಸಿಬಿಐ ಸಮೀಪದಲ್ಲಿರುವ ಆಂಜನೇಯ ದೇವಾಲಯ, ಜಯನಗರ 9ನೇ ಬ್ಲಾಕ್ನ ಆಂಜನೇಯ ಸೇರಿದಂತೆ ಬಹುತೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ.ಶ್ರೀರಾಮತಾರಕ ಮಹಾಯಾಗ
ಶೇಷಾದ್ರಿಪುರ ಕಾಲೇಜಿನಲ್ಲಿ ಯದುಗಿರಿ ಯತಿರಾಜ ಮಠದಿಂದ ‘ಶ್ರೀರಾಮ ಭಕ್ತಿ ಸಾಮ್ರಾಜ್ಯಮ್’ ವಿಶೇಷ ಪೂಜೆ ನೆರವೇರಿತು. ರಾಮಾನುಜ ನಾರಾಯಣ ಜೀಯರ್ ಸ್ವಾಮೀಜಿ ನೇತೃತ್ವದಲ್ಲಿ ಸೀತಾರಾಮ ಕಲ್ಯಾಣ, ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ ಜರುಗಿಸಲಾಯಿತು. ಕಬ್ಬನ್ಪೇಟೆ ಮುಖ್ಯ ರಸ್ತೆಯಲ್ಲಿ ಗಾಣಿಗರಪೇಟೆ ರಾಮ ಭಕ್ತ ಮಂಡಳಿಯಿಂದ ರಾಮ ವಿಗ್ರಹ ಮೆರವಣಿಗೆ ನಡೆಯಿತು.ಮೆರವಣಿಗೆ
ಗಿರಿನಗರದ ವಾಸವಿ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಮಂದಿರದ ಪ್ರತಿಕೃತಿ ಅನಾವರಣ ಮಾಡಲಾಗಿದೆ. ರಾಮಭಕ್ತರು ಇಲ್ಲಿಯೇ ರಾಮಮಂದಿರದ ಭವ್ಯತೆ ದರ್ಶಿಸಿ, ರಾಮನನ್ನು ಕಣ್ತುಂಬಿಸಿಕೊಂಡು ಧನ್ಯರಾಗಬಹುದು. ಈ ಅಯೋಧ್ಯೆ ರಾಮಮಂದಿರದ ಪ್ರತಿಕೃತಿಯನ್ನು ವಾಸವಿ ದೇಗುಲದ ಅಳತೆಗೆ ತಕ್ಕಂತೆ ರೂಪಿಸಲಾಗಿದೆ. 24 ಅಡಿ ಉದ್ದ, 18 ಅಡಿ ಅಗಲದ ರಾಮಮಂದಿರದ ಗೋಪುರ 16 ಅಡಿಯಿದೆ. ಜ.22ರಂದು ರಾಮನಿಗೆ ಅಭಿಷೇಕ, ಪೂಜೆ, ಭಜನೆಗಳು ಇಡೀ ದಿನ ನಡೆಯಲಿದ್ದು, ಇದರ ನೇರ ಪ್ರಸಾರದ ಆಯೋಜನೆಯಾಗಿದೆ. ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರು ಉದ್ಘಾಟಿಸುವರು. ಜ.30ರವರೆಗೆ ಜನತೆ ವೀಕ್ಷಿಸಬಹುದು.ಮುಜರಾಯಿ ಇಲಾಖೆಯಿಂದ ಪೂಜೆ
ವಿಶ್ವ ಹಿಂದೂ ಪರಿಷತ್ನಿಂದ ನಗರದ ಒಂದು ಸಾವಿರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ. ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾಪನೆಯ ನೇರಪ್ರಸಾರವನ್ನು ಏರ್ಪಡಿಸಲಾಗುತ್ತಿದೆ. ಜತೆಗೆ ಭಜನೆ, ರಾಮತಾರಕ ಮಂತ್ರ ಪಠಣ ನಡೆಯಲಿದೆ. ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುವುದು. ಸಂಜೆ ಎಲ್ಲೆಡೆ ದೀಪೋತ್ಸವ ಏರ್ಪಡಿಸಲಾಗುವುದು ಎಂದು ವಿಹಿಂಪ ತಿಳಿಸಿದೆ. ಅದೇ ರೀತಿ ಶ್ರೀರಾಮ ಸೇವಾ ಮಂಡಳಿ, ಹಿಂದೂ ಜನಜಾಗೃತಿ ವೇದಿಕೆ ಸೇರಿ ಹಲವು ಹಿಂದೂ ಸಂಘಟನೆಗಳು ದೇವಸ್ಥಾನದಲ್ಲಿ ಪೂಜೆ ಏರ್ಪಡಿಸಿವೆ.ಕರಸೇವಕರಿಗೆ ಸನ್ಮಾನ
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಾಫಿ ಕನೆಕ್ಷನ್ಸ್ ಓವನ್ ಫ್ರೆಷ್ ಕಾಫಿ ಶಾಪ್ನಲ್ಲಿ ಕಪ್ ಕಾಫಿಯಲ್ಲಿ ರಾಮ ಮಂದಿರ ಚಿತ್ರಿಸಿ ಪ್ರದರ್ಶನಕ್ಕೆ ಇಡಲಾಗಿದೆ. ಇದಕ್ಕೆ ಹದಿನೈದು ದಿನಗಳಿಂದ ಪೂರ್ವಸಿದ್ಧತೆಯೂ ನಡೆದಿದೆ. ರಾತ್ರಿ ಅದನ್ನು ಶುದ್ಧ ಸ್ಥಳದಲ್ಲಿ ಹಾಕಿ ಅಲ್ಲಿ ಸಸಿ ನೆಡಲಾಗುತ್ತಿದೆ ಎಂದು ಕಾಫಿ ಶಾಪ್ ಮಾಲೀಕ ಜೆ.ಕೆ.ಪ್ರಮೋದ್ ತಿಳಿಸಿದರು.ಇಂದು ವಿವಿಧೆಡೆ ಕಾರ್ಯಕ್ರಮ
ಗೋವಿಂದರಾಜನಗರದ ಮಾರುತಿ ಮಂದಿರದಲ್ಲಿ ಬಿಜೆಪಿಯ ಅರುಣ್ ಸೋಮಣ್ಣ ನೇತೃತ್ವದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ನೇರಪ್ರಸಾರ ಏರ್ಪಡಿಸಲಾಗಿದೆ. ಬೆಳಗ್ಗೆ 9ರಿಂದಲೇ ನೇರ ಪ್ರಸಾರ ಇರಲಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಪ್ರಸಾದ ವಿನಿಯೋಗ ನಡೆಸಲಾಗುತ್ತಿದೆ.