ಬೆಂಗಳೂರಿನ ಹುಡುಗಿಗೆ 2ನೇ ಪ್ರಯತ್ನದಲ್ಲೇ ಯುಪಿಎಸ್ಸಿಯಲ್ಲಿ ಯಶಸ್ಸು

KannadaprabhaNewsNetwork |  
Published : Apr 17, 2024, 02:05 AM IST
ಹಂಸಶ್ರೀ (866ನೇ ರ‍್ಯಾಂಕ್‌) | Kannada Prabha

ಸಾರಾಂಶ

ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಉತ್ತೀರ್ಣರಾಗಿರುವ ಹಂಸಶ್ರೀ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ಸು ಕಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ತಮ್ಮ ಎರಡನೇ ಪ್ರಯತ್ನದಲ್ಲೇ ಬೆಂಗಳೂರಿನ ಹಂಸಶ್ರೀ ಅವರು 866ನೇ ರ್ಯಾಂಕ್‌ ಪಡೆದಿದ್ದಾರೆ.

ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಉತ್ತೀರ್ಣರಾಗಿರುವ ಹಂಸಶ್ರೀ ತಂದೆ-ತಾಯಿ ಕಾಲೇಜು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಚಿಕ್ಕ ವಯಸ್ಸಿನಿಂದಲೇ ಐಎಎಸ್ ಮಾಡಬೇಕು ಪಾಲಕರು ಹುರಿದುಂಬಿಸುತ್ತಿದ್ದರು. ಎಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಯುಪಿಎಸ್‌ಸಿ ಬಗ್ಗೆ ಆಸಕ್ತಿ ಬಂತು. ಮೊದಲ ಪ್ರಯತ್ನದಲ್ಲಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನಕ್ಕೆ ಅರ್ಹತೆ ಸಿಗಲಿಲ್ಲ. ಆದರೆ, ಪರೀಕ್ಷೆಯ ಸ್ವರೂಪ ಅರ್ಥವಾಯಿತು. ನಂತರ ಎರಡು ವರ್ಷಗಳಿಂದ ಕೋಚಿಂಗ್ ಕ್ಲಾಸ್‌ಗಳ ಜೊತೆಗೆ ದಿನಕ್ಕೆ 8 ರಿಂದ ಗರಿಷ್ಠ 12 ತಾಸು ಓದುತ್ತಿದ್ದೆ. ದೇಶ ಪ್ರಗತಿ, ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಸಮಾಜ ಸೇವೆ ಮಾಡಬೇಕು ಎಂಬ ಆಸಕ್ತಿಯಿಂದ ಯುಪಿಎಸ್‌ಸಿ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೆ ಎಂದು ಹಂಸಶ್ರೀ ‘ಕನ್ನಡಪ್ರಭ’ಕ್ಕೆ ತಿಳಿಸಿದರು.

ದೊಡ್ಡ ಸಂಖ್ಯೆಯಲ್ಲಿ ಜನ ಪರೀಕ್ಷೆ ಬರೆಯುತ್ತಾರೆ. ಆದರೆ, ಪರೀಕ್ಷೆ ತೆಗೆದುಕೊಳ್ಳುವವರು ಅಧ್ಯಯನದ ಜೊತೆಗೆ ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ತಾನು ಓದಿನ ಜೊತೆಗೆ ಸಂಗೀತ ನೃತ್ಯದಲ್ಲಿ ತೊಡಗಿಸಿಕೊಳ್ಳುತ್ತಿದೆ ಎಂದು ಹಂಸಶ್ರೀ ಹೇಳಿದರು.

866ನೇ ರ‍್ಯಾಂಕ್‌ ಬಂದಿದ್ದರೂ ಐಎಎಸ್‌ಗಾಗಿ ಮತ್ತಷ್ಟು ಪ್ರಯತ್ನಗಳನ್ನು ಮಾಡುತ್ತೇನೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!