ಪೀಣ್ಯದಲ್ಲಿ ರಸ್ತೆ ಗುಂಡಿ ಮುಚ್ಚಲು ಪ್ರಧಾನಿಗೆ ಪತ್ರ

KannadaprabhaNewsNetwork |  
Published : Sep 14, 2026, 02:15 AM IST
ಪೀಣ್ಯ ಕೈಗಾರಿಕಾ ಪ್ರದೇಶದಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗಾಳಾಗಿರುವುದು. | Kannada Prabha

ಸಾರಾಂಶ

ನಗರದ ಪೀಣ್ಯ ಪ್ರದೇಶದಲ್ಲಿನ ಹದಗೆಟ್ಟಿರುವ, ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವಂತೆ ಕೋರಿ ದೀಪಕ್ ಎಂಬುವರು ಪ್ರಧಾನಮಂತ್ರಿ ಅವರ ಕಾರ್ಯಾಲಯಕ್ಕೆ ಪತ್ರ ಬರೆದಿದ್ದಾರೆ. ನಗರದ ಪ್ರಮುಖ ಕೈಗಾರಿಕೆ ಪ್ರದೇಶವಾಗಿರುವ ಪೀಣ್ಯದಲ್ಲಿ ವಿಶಾಲ ರಸ್ತೆಗಳಿವೆ. ಆದರೆ, ಬಹುತೇಕ ಎಲ್ಲಾ ರಸ್ತೆಗಳಲ್ಲೂ ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಿವೆ. ಅನೇಕ ವರ್ಷಗಳಿಂದ ರಸ್ತೆ ಗುಂಡಿಗಳು ಬಿದ್ದಿವೆ. ಈ ಕುರಿತು ಸ್ಥಳೀಯ ಜನಪ್ರತಿನಿಧಿಗಳಿಗೆ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ಹೀಗಾಗಿ, ಪ್ರಧಾನಿ ಕಚೇರಿ ಮಧ್ಯಪ್ರವೇಶಿಸಬೇಕೆಂದು ಪತ್ರದಲ್ಲಿ ಕೋರಲಾಗಿದೆ.

-ದೂರು ನೀಡಿದ್ರೂ ಅಧಿಕಾರಿಗಳ ನಿರ್ಲಕ್ಷ್ಯ। ನಗರದ ನಿವಾಸಿಯಿಂದ ಪತ್ರ ಬರೆದು ಮನವಿ

-ಚಂದ್ರನ ಕುಳಿ ಹೇಗಿರುತ್ತವೆ ಎಂದು ನೋಡಲು ಪೀಣ್ಯ ರಸ್ತೆಗಳನ್ನ ನೋಡಿ: ಮುರುಳಿ ವ್ಯಂಗ್ಯ

--

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದ ಪೀಣ್ಯ ಪ್ರದೇಶದಲ್ಲಿನ ಹದಗೆಟ್ಟಿರುವ, ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವಂತೆ ಕೋರಿ ದೀಪಕ್ ಎಂಬುವರು ಪ್ರಧಾನಮಂತ್ರಿ ಅವರ ಕಾರ್ಯಾಲಯಕ್ಕೆ ಪತ್ರ ಬರೆದಿದ್ದಾರೆ. ನಗರದ ಪ್ರಮುಖ ಕೈಗಾರಿಕೆ ಪ್ರದೇಶವಾಗಿರುವ ಪೀಣ್ಯದಲ್ಲಿ ವಿಶಾಲ ರಸ್ತೆಗಳಿವೆ. ಆದರೆ, ಬಹುತೇಕ ಎಲ್ಲಾ ರಸ್ತೆಗಳಲ್ಲೂ ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಿವೆ. ಅನೇಕ ವರ್ಷಗಳಿಂದ ರಸ್ತೆ ಗುಂಡಿಗಳು ಬಿದ್ದಿವೆ. ಈ ಕುರಿತು ಸ್ಥಳೀಯ ಜನಪ್ರತಿನಿಧಿಗಳಿಗೆ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ಹೀಗಾಗಿ, ಪ್ರಧಾನಿ ಕಚೇರಿ ಮಧ್ಯಪ್ರವೇಶಿಸಬೇಕೆಂದು ಪತ್ರದಲ್ಲಿ ಕೋರಲಾಗಿದೆ.

ನಿತ್ಯ ಸಾವಿರಾರು ಟ್ರಕ್, ಬಸ್, ಕಾರು, ಆಟೋ, ವಿದ್ಯಾರ್ಥಿಗಳು, ಉದ್ಯೋಗಿಗಳು ಸಂಚರಿಸುತ್ತಾರೆ. ಭಾರಿ ಸಂಖ್ಯೆಯ ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ನಾವು ವ್ಯವಸ್ಥೆಯ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದೇವೆ. ಪ್ರಧಾನಿ ಕಾರ್ಯಾಲಯವು ಈ ಕೂಡಲೇ ಮಧ್ಯಪ್ರವೇಶಿಸಿ, ಈ ರಸ್ತೆಯ ಎರಡೂ ಬದಿಯ ಕಾಮಗಾರಿಯನ್ನು ಅತ್ಯಂತ ತ್ವರಿತವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕು ದೀಪಕ್ ಕೋರಿದ್ದಾರೆ.

ಪೀಣ್ಯದ ಟಿವಿಎಸ್ ಕ್ರಾಸ್‌ನಿಂದ ರಿಂಗ್ ರಸ್ತೆಗೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆ ಮಾತ್ರವಲ್ಲದೇ, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿನ ಬಹುತೇಕ ರಸ್ತೆಗಳು ಹಾಳಾಗಿವೆ. ಆದರೆ, ರಸ್ತೆಗಳನ್ನು ಸರಿಪಡಿಸುವ ಪ್ರಯತ್ನವನ್ನು ಪಾಲಿಕೆ ಅಧಿಕಾರಿಗಳು ಮಾಡುತ್ತಿಲ್ಲ ಎಂದು ದೀಪಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಲತಾಣಗಲ್ಲಿ ವಿಡಿಯೋ ಹಾಕಿದಾಗ ಕಾಟಾಚಾರಕ್ಕೆ ಎಂಬಂತೆ ಗುಂಡಿ ಮುಚ್ಚುತ್ತಾರೆ. ಅದು ಕೆಲವೇ ದಿನಗಳಲ್ಲಿ ಕಿತ್ತು ಬರುತ್ತದೆ ಎಂದು ದೀಪಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರಿಗೂ ಮನವಿ:

ಪೀಣ್ಯ 100 ಅಡಿ ರಸ್ತೆ, ಪೀಣ್ಯ ಕೈಗಾರಿಕಾ ಪ್ರದೇಶ ಮತ್ತು ಸಂಪರ್ಕ ರಸ್ತೆಗಳ ಗುಂಡಿ ಮುಚ್ಚುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮುರುಳಿ ಶ್ರೀನಿವಾಸ ಎಂಬುವರು ಮನವಿ ಮಾಡಿದ್ದಾರೆ. ಎಕ್ಸ್‌ನಲ್ಲಿ ರಸ್ತೆಯ ದುಸ್ಥಿತಿಯನ್ನು ವಿವರಿಸಿರುವ ಅವರು, ಪೀಣ್ಯ-ರಾಜಾಜಿನಗರ ನಡುವಿನ ಮಾರ್ಗದಲ್ಲಿಯು ಭಾರಿ ಪ್ರಮಾಣದ ಗುಂಡಿಗಳು ಸೃಷ್ಟಿಯಾಗಿವೆ. ಚಂದ್ರನ ಮೇಲಿನ ಕುಳಿಗಳು ಹೇಗಿರುತ್ತವೆ ಎಂದು ಅರಿಯಲು ಮಕ್ಕಳನ್ನು ಈ ರಸ್ತೆಗೆ ಕರೆತರಬೇಕು ಎಂದು ಮುರುಳಿ ಶ್ರೀನಿವಾಸ ವ್ಯಂಗ್ಯವಾಡಿದ್ದಾರೆ.

ಪೀಣ್ಯದ ಎನ್‌ಟಿಟಿಎಫ್‌ ಕಾಲೇಜು ರಸ್ತೆಯೊಂದರಲ್ಲೇ ಸುಮಾರು 8-10 ಸಾವಿರ ಜನ ಕೆಲಸ ಮಾಡುತ್ತಿದ್ದಾರೆ. ಯುರೋಫಿನ್ಸ್, ಸಿಯಂಟ್, ಗೋಕುಲದಾಸ್, ಮಿನೇಬಿ ಸೇರಿದಂತೆ ಅನೇಕ ಕಂಪನಿಗಳಿಗೆ. ಪೀಣ್ಯ ಕೈಗಾರಿಕೆಗಳು ಅತಿ ಹೆಚ್ಚು ತೆರಿಗೆ ಪಾವತಿಸುತ್ತಿವೆ. ಆದರೂ, ವಾಹನಗಳು ಸರಿಯಾಗಿ ಸಂಚರಿಸಲು ಯೋಗ್ಯವಾದ ರಸ್ತೆಗಳು ಇಲ್ಲ ಎಂದು ಮುರುಳಿ ಶ್ರೀನಿವಾಸ್ ದೂರಿದ್ದಾರೆ.ಬಾಕ್ಸ್...ಓಕಳಿಪುರಂ ಜಂಕ್ಷನ್ ಬಳಿಯು ಗುಂಡಿಗಳು!

ನಗರದ ಕೇಂದ್ರ ಭಾಗವಾಗಿರುವ ಮೆಜೆಸ್ಟಿಕ್ ಬಳಿಯ ಓಕಳಿಪುರ ಜಂಕ್ಷನ್ ಬಳಿ ಗುಂಡಿಗಳಿಂದ ವಾಹನ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್ ಕಡೆಯಿಂದ ಓಕಳಿಪುರ ಜಂಕ್ಷನ್ ಮಾರ್ಗವಾಗಿ ಮಾಗಡಿ ರಸ್ತೆಯ ಕಡೆ ತೆರಳುವ ಓಕಳಿಪುರ ಬಸ್ ನಿಲ್ದಾಣ ಬಳಿ ರಸ್ತೆಯಲ್ಲಿ ಹಲವು ಗುಂಡಿಗಳು ಬಿದ್ದಿವೆ. ದಿನದ 24 ಗಂಟೆಯು ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿನ ಗುಂಡಿಗಳಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತವೆ. ಇದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧವೇಕೆ
ಗಜಮುಖನ ಸ್ವಾಗತಕ್ಕೆ ಹುಬ್ಬಳ್ಳಿ ಸಜ್ಜು!