ಪಿಯು ಉಪನ್ಯಾಸಕ ಹುದ್ದೆ ಬಡ್ತಿಗೆ 100 ಅಂಕಗಳ ಅರ್ಹತಾ ಪರೀಕ್ಷೆ

Published : Nov 29, 2025, 10:05 AM IST
Exam

ಸಾರಾಂಶ

ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡಲು ಇದೇ ಮೊದಲ ಬಾರಿಗೆ ಅರ್ಹತಾ ಪರೀಕ್ಷೆ ನಡೆಸಲು ನಿರ್ಧರಿಸಿದ್ದ ಶಾಲಾ ಶಿಕ್ಷಣ ಇಲಾಖೆಯು, ಇದೀಗ ಈ ಪರೀಕ್ಷೆಯನ್ನು 100 ಅಂಕಗಳಿಗೆ ನಿಗದಿಪಡಿಸಿದೆ. ಉತ್ತೀರ್ಣರಾಗಲು 50 ಅಂಕ ಪಡೆಯುವುದು ಕಡ್ಡಾಯ 

 ಬೆಂಗಳೂರು :  ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡಲು ಇದೇ ಮೊದಲ ಬಾರಿಗೆ ಅರ್ಹತಾ ಪರೀಕ್ಷೆ ನಡೆಸಲು ನಿರ್ಧರಿಸಿದ್ದ ಶಾಲಾ ಶಿಕ್ಷಣ ಇಲಾಖೆಯು, ಇದೀಗ ಈ ಪರೀಕ್ಷೆಯನ್ನು 100 ಅಂಕಗಳಿಗೆ ನಿಗದಿಪಡಿಸಿದೆ. ಉತ್ತೀರ್ಣರಾಗಲು 50 ಅಂಕ ಪಡೆಯುವುದು ಕಡ್ಡಾಯ ಎಂದು ತಿಳಿಸಿದೆ.

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ನಡಾವಳಿ

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ನಡಾವಳಿ ಪ್ರಕಟಿಸಿದ್ದು, ಪಿಯು ಉಪನ್ಯಾಸಕ ಹುದ್ದೆಗಳಿಗೆ ಶೇ.75 ಸ್ಥಾನ ನೇರ ನೇಮಕಾತಿಯಡಿ ಉಳಿದ ಶೇ.25 ಹುದ್ದೆಯನ್ನು ಪ್ರೌಢಶಾಲಾ ಶಿಕ್ಷಕರಿಂದ ಪದೋನ್ನತಿ ಹೊಂದಿದವರನ್ನು ನೇಮಿಸಲು 2014ರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ತರಲಾಗಿದೆ.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪಠ್ಯವಿಷಯದಿಂದ ತಲಾ 40 ಮತ್ತು ಅಭ್ಯರ್ಥಿಯ ಸ್ನಾತಕೊತ್ತರ ಪದವಿ ವಿಷಯದ ಪಠ್ಯದಿಂದ ಶೇ.20ರಷ್ಟು ಪ್ರಶ್ನೆಗಳನ್ನು ವರ್ಗೀಕರಣ ಮಾಡಲಾಗಿದೆ. ಉತ್ತೀರ್ಣಕ್ಕೆ 50 ಅಂಕ ಪಡೆಯುವುದು ಕಡ್ಡಾಯಗೊಳಿಸಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆಇಲಾಖೆ ಒಪ್ಪಿಗೆ ನೀಡಿದ್ದು ಅನುಪಾಲನೆಗೆ ಆದೇಶ ಹೊರಡಿಸಲಾಗಿದೆ.

ಅರ್ಹತಾ ಪರೀಕ್ಷೆಗೆ ಯಾರು ಅರ್ಹರು?:

ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರಾಗಿ 10 ವರ್ಷ ಸೇವಾ ಅನುಭವ ಪೂರ್ಣಗೊಳಿಸಿರಬೇಕು. ಅಂಥ ಶಿಕ್ಷಕರು ಲಭ್ಯವಿಲ್ಲದಿದ್ದಲ್ಲಿ 7 ವರ್ಷ ಸೇವಾ ಅವಧಿ ಪೂರ್ಣಗೊಳಿಸಿರುವ ಮತ್ತು ಬಿಇಡಿ ಪದವಿ ಹೊಂದಿರುವ, ತಾವು ಪ್ರಸ್ತುತ ಬೋಧಿಸುತ್ತಿರುವ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ಶೇ.50 ಅಥವಾ ಪದವಿ ಹಂತದಲ್ಲಿ ಅಧ್ಯಯನ ಮಾಡಿದ ಯಾವುದಾದರೂ ಐಚ್ಛಿಕ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ಶೇ.50 ಅಂಕ ಪಡೆದಿರುವ ಶಿಕ್ಷಕರು ಮುಂಬಡ್ತಿಗೆ ಅರ್ಹತಾ ಪರೀಕ್ಷೆ ಬರೆಯಬಹುದು.

ಪದೋನ್ನತಿ ನೀಡಲು ಅರ್ಹತಾ ಪರೀಕ್ಷೆ ನಡೆಸಲು ನಿರ್ಧರಿಸಿ 2024ರ ಅಕ್ಟೋಬರ್‌ನಲ್ಲಿ ಆದೇಶ ಮಾಡಲಾಗಿತ್ತು. ಎಷ್ಟು ಅಂಕಗಳಿಗೆ ಅರ್ಹತಾ ಪರೀಕ್ಷೆ ನಡೆಸಬೇಕು, ಉತ್ತೀರ್ಣಕ್ಕೆ ಎಷ್ಟು ಅಂಕ ನಿಗದಿಪಡಿಸಬೇಕೆಂದು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಪದವಿ ಪೂರ್ವ ನಿರ್ದೇಶಕರಿಗೆ ಸೂಚಿಸಲಾಗಿತ್ತು.

ಅದರಂತೆ ನಿರ್ದೇಶಕರು ಆಯಾ ವಿಷಯಗಳಿಗೆ ಅರ್ಹತಾ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸುವುದು, ಈ ಪೈಕಿ

ಅರ್ಹತಾ ಪರೀಕ್ಷೆಯನ್ನು ನಡೆಸಲು ಕೇಂದ್ರಿಯ ದಾಖಲಾತಿ ಘಟಕವನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸಲಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಪುಸ್ತಕಗಳಲ್ಲಿ ಬೆಂಗಳೂರು ನಗರಕ್ಕೆ ಬರೋಬ್ಬರಿ ₹38 ಕೋಟಿ ಡ್ರಗ್ಸ್‌ ಸಾಗಾಟ
ಸರ್ಕಾರದಿಂದ ಗೋಬ್ಯಾಕ್‌ ಗೌರ್ನರ್‌ ಅಭಿಯಾನ ಚಿಂತನೆ