ಕೆ.ಆರ್‌. ಪುರ ಸಮೀಪ ರೈಲ್ವೆ ಪರ್ಯಾಯ ರಸ್ತೆಯಲ್ಲಿ 3 ತಿಂಗಳು ಸಂಚಾರ ನಿರ್ಬಂಧ

Published : Jun 15, 2025, 06:14 AM IST
Bengaluru traffic

ಸಾರಾಂಶ

ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಕೆ.ಆರ್‌. ಪುರದ ಸಮೀಪ ರೈಲ್ವೆ ಪರ್ಯಾಯ ರಸ್ತೆಯಲ್ಲಿ 3 ತಿಂಗಳು ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.

ಬೆಂಗಳೂರು : ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಕೆ.ಆರ್‌. ಪುರದ ಸಮೀಪ ರೈಲ್ವೆ ಪರ್ಯಾಯ ರಸ್ತೆಯಲ್ಲಿ 3 ತಿಂಗಳು ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.

*ವಾಹನ ಸಂಚಾರ ನಿರ್ಬಂಧಿಸಿ ರಸ್ತೆ*

-ಬೆನ್ನಿಗಾನಹಳ್ಳಿ (ಸದಾನಂದನಗರ ಬ್ರಿಡ್ಜ್) ಕಡೆಯಿಂದ ಹಳೆ ಮದ್ರಾಸ್ ರಸ್ತೆಗೆ ಸೇರುವ ಕೊಕೊ ಕೋಲಾ ಗೋಡಾನ್ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

*ಪರ್ಯಾಯ ಮಾರ್ಗಗಳು*

-ಹಳೆ ಮದ್ರಾಸ್ ರಸ್ತೆ ಬೆನ್ನಿಗಾನಹಳ್ಳಿ ರೈಲ್ವೆ ಬ್ರಿಡ್ಜ್ ಕಡೆಯಿಂದ ಕಸ್ತೂರಿನಗರ ಕಡೆಗೆ ಹೋಗುವ ವಾಹನ ಸವಾರರು ಡಿಓಟಿ (DOT) ಬೈಪಾಸ್ ಹೆಬ್ಬಾಳ ಮೂಲಕ ಕಸ್ತೂರಿನಗರ ಕಡೆಗೆ ಸಂಚರಿಸುವುದು.

-ಕಸ್ತೂರಿನಗರ ಕಡೆಯಿಂದ ಹಳೆ ಮದ್ರಾಸ್ ರಸ್ತೆ ಕಡೆಗೆ ತೆರಳುವ ವಾಹನ ಸವಾರರು ಸಂಚರಿಸಬಹುದು. ಸದಾನಂದನಗರ ಕಡೆಯಿಂದ ಎನ್.ಜಿ.ಇ.ಎಫ್ ಸಿಗ್ನಲ್ ಮೂಲಕ ಹಳೆ ಮದ್ರಾಸ್ ರಸ್ತೆ ಕಡೆಗೆ ಸಾಗಬೇಕಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''