ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌

Published : Dec 07, 2025, 09:33 AM IST
Zaid Khan

ಸಾರಾಂಶ

ಕಲ್ಟ್ ಸಿನಿಮಾ ರಿಲೀಸ್ ಒಳಗಡೆ ನಟ ದರ್ಶನ್‌ ಜೈಲಿಂದ ಹೊರಗೆ ಬರಲಿದ್ದಾರೆ ಎಂಬ ನಿರೀಕ್ಷೆ ಇದೆ ಎಂದು ನಟ ಜೈದ್‌ ಖಾನ್‌ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನಟ ದರ್ಶನ್‌ ಅಣ್ಣ ಆದಷ್ಟು ಬೇಗ ಜೈಲಿಂದ ಹೊರಗೆ ಬರಲಿ ಎಂದು ಪ್ರತಿದಿನ ಪ್ರಾರ್ಥಿಸುತ್ತಿರುವೆ.

  ಹೊಸಪೇಟೆ :  ಕಲ್ಟ್ ಸಿನಿಮಾ ರಿಲೀಸ್ ಒಳಗಡೆ ನಟ ದರ್ಶನ್‌ ಜೈಲಿಂದ ಹೊರಗೆ ಬರಲಿದ್ದಾರೆ ಎಂಬ ನಿರೀಕ್ಷೆ ಇದೆ ಎಂದು ನಟ ಜೈದ್‌ ಖಾನ್‌ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನಟ ದರ್ಶನ್‌ ಅಣ್ಣ ಆದಷ್ಟು ಬೇಗ ಜೈಲಿಂದ ಹೊರಗೆ ಬರಲಿ ಎಂದು ಪ್ರತಿದಿನ ಪ್ರಾರ್ಥಿಸುತ್ತಿರುವೆ. ದರ್ಶನ್‌ರನ್ನು ನಾನು ಕೇವಲ ಬಾಯಿ ಮಾತಿನಿಂದ ಅಣ್ಣ ಎಂದು ಕರೆಯುವುದಿಲ್ಲ, ನಿಜ ಜೀವನದಲ್ಲಿ ನನಗೆ ಅಣ್ಣ ಯಾರೂ ಇಲ್ಲ. ಆ ಜಾಗ ದರ್ಶನ್‌ ಅವರು ತುಂಬಿ ಕರ್ತವ್ಯ ನಿರ್ವಹಿಸಿದರು. 

ಅವರು ಈಗ ಜೈಲಲ್ಲಿ ಇರುವುದು ಬೇಜಾರಾಗುತ್ತೆ

ಅವರು ಈಗ ಜೈಲಲ್ಲಿ ಇರುವುದು ಬೇಜಾರಾಗುತ್ತೆ. ನನ್ನ ಮೊದಲ ಸಿನಿಮಾಕ್ಕೆ ನನಗೆ ಅಣ್ಣನ ಹಾಗೇ ದರ್ಶನ್‌ ಬೆನ್ನೆಲುಬಾಗಿದ್ದರು. ಈಗ ಎರಡನೇ ಸಿನಿಮಾ ವೇಳೆ ಅವರು ಇದ್ದಿದ್ದರೆ ನನಗೆ ಶಕ್ತಿ ಜಾಸ್ತಿ ಆಗಿರುತ್ತಿತ್ತು. ಇಲ್ಲಿಯವರೆಗೂ ನಾನು ದರ್ಶನ್‌ ಅವರನ್ನು ಜೈಲಿಗೆ ಹೋಗಿ ಭೇಟಿ ಆಗಿಲ್ಲ. 

ಸಿನಿಮಾ ರಿಲೀಸ್ ಒಳಗೆ ದರ್ಶನ್‌ ಅವರು ಹೊರಗೆ ಬರುತ್ತಾರೆ ಎಂಬ ನಿರೀಕ್ಷೆ

ಸಿನಿಮಾ ರಿಲೀಸ್ ಒಳಗೆ ದರ್ಶನ್‌ ಅವರು ಹೊರಗೆ ಬರುತ್ತಾರೆ ಎಂಬ ನಿರೀಕ್ಷೆ ಇದೆ. ಜೈಲಿನಿಂದ ಬರಲಿಲ್ಲ ಎಂದರೆ, ನಾನು ಅನುಮತಿ ಪಡೆದುಕೊಂಡು ಜೈಲಿಗೆ ಹೋಗುವೆ. ದರ್ಶನ್‌ ಅವರನ್ನು ಭೇಟಿ ಆಗಿ ಆಶೀರ್ವಾದ ತೆಗೆದುಕೊಂಡು ಕಲ್ಟ್ ಸಿನಿಮಾ ರಿಲೀಸ್ ಮಾಡುವೆ ಎಂದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ನಟ ಯಶ್‌ಗೆ ಜಾರಿಯಾಗಿದ್ದ ಆದಾಯ ತೆರಿಗೆ ನೋಟಿಸ್‌ ರದ್ದು
ಡ್ರಗ್ಸ್‌ಗಾಗಿ ಜೈಲರ್, ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ!