ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸ್ಥಿತಿ ಇನ್ನೂ ಗಂಭೀರ

Published : Jun 18, 2025, 08:50 AM IST
road accidnet

ಸಾರಾಂಶ

ನಗರದ ಹನುಮಂತನಗರದಲ್ಲಿ ಮರದ ಬೃಹತ್ ಕೊಂಬೆ ಬಿದ್ದು ಗಾಯಗೊಂಡಿರುವ ದ್ವಿಚಕ್ರ ವಾಹನ ಸವಾರ ಅಕ್ಷಯ್ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

  ಬೆಂಗಳೂರು :  ನಗರದ ಹನುಮಂತನಗರದಲ್ಲಿ ಮರದ ಬೃಹತ್ ಕೊಂಬೆ ಬಿದ್ದು ಗಾಯಗೊಂಡಿರುವ ದ್ವಿಚಕ್ರ ವಾಹನ ಸವಾರ ಅಕ್ಷಯ್ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಶ್ರೀದತ್, ಗಾಯಾಳು ಅಕ್ಷಯ್ ಅವರನ್ನು ಸಿಟಿ ಸ್ಕ್ಯಾನ್‌ ಪರೀಕ್ಷೆಗೆ ಒಳಪಡಿಸಲಾಗಿದ್ದು, ತಲೆ, ಮೆದುಳಿಗೆ ತೀವ್ರ ಪೆಟ್ಟಾಗಿರುವುದು ಕಂಡು ಬಂದಿದೆ. ಹೀಗಾಗಿ, ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ವೆಂಟಿಲೇಟರ್‌ ನೆರವಿನಲ್ಲಿ ತೀವ್ರ ನಿಗಾ ಘಟಕದಲ್ಲಿರುವ ಅವರ ಸ್ಥಿತಿ ಗಂಭೀರವಾಗಿದೆ. ಅಗತ್ಯ ಔಷದೋಪಚಾರ ಮಾಡಲಾಗುತ್ತಿದ್ದು, ಸಾಧ್ಯವಾದ ಅತ್ಯುತ್ತಮ ಚಿಕಿತ್ಸೆಯನ್ನು ನೀಡುತ್ತಿದ್ದೇವೆ. ಈಗಲೇ ಏನನ್ನೂ ಹೇಳಲಾಗದು ಎಂದರು.

ಆರಂಭದಲ್ಲಿ ನಾವೇ ಅಕ್ಷಯ್ ಚಿಕಿತ್ಸಾ ವೆಚ್ಚ ಭರಿಸಿದ್ದೇವೆ. ಅದಾದ ನಂತರ ಬಿಬಿಎಂಪಿಯಿಂದ ವೈದ್ಯಕೀಯ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಲಾಗಿತ್ತು. ಸೋಮವಾರ ರಾತ್ರಿ ಬಿಬಿಎಂಪಿಯವರು ಬಂದು ಶುಲ್ಕ ಪಾವತಿಸುತ್ತೇವೆ ಎಂದು ಹೇಳಿದ್ದರು. ಆದರೆ, ಈವರೆಗೂ ಯಾವುದೇ ರೀತಿಯಿಂದ ನೆರವು ಸಿಕ್ಕಿಲ್ಲ ಎಂದು ಅಕ್ಷಯ್ ಸಹೋದರ ಬೆನಕರಾಜ್ ಹೇಳಿದ್ದಾರೆ.

ಶ್ರೀನಿವಾಸ ನಗರ ನಿವಾಸಿ ಅಕ್ಷಯ್ ಅವರು ಭಾನುವಾರ ಹೊರಗೆ ಹೋಗಿದ್ದು, ವಾಪಸ್ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಮರದ ಕೊಂಬೆ ಅಕ್ಷಯ್ ಮೇಲೆ ಬೀಳುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''