ದಸರಾ ಪರೇಡ್‌ಗೆ ಸೇನೆ, ಚಲನಚಿತ್ರ ನಟರ ಹೆಜ್ಜೆ! - ವಿಭಿನ್ನ ದಸರಾ, ಮೆರವಣಿಗೆಯ ರೂಪ ಬದಲು

Published : Aug 30, 2026, 08:04 AM IST
Mysuru Dasara 2026

ಸಾರಾಂಶ

ಈ ಬಾರಿ ವಿಭಿನ್ನವಾದ ದಸರಾ ಮಾಡುತ್ತೇವೆ‌. ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ. ಸೇನಾಪಡೆಯ ಯೋಧರು ಕೂಡ ಈ ಬಾರಿಯ ಜಂಬೂಸವಾರಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮೈಸೂರು: ಈ ಬಾರಿ ವಿಭಿನ್ನವಾದ ದಸರಾ ಮಾಡುತ್ತೇವೆ‌. ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ. ಸೇನಾಪಡೆಯ ಯೋಧರು ಕೂಡ ಈ ಬಾರಿಯ ಜಂಬೂಸವಾರಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಮತ್ತು ಬಹಳ ವಿಭಿನ್ನವಾಗಿ ಆಚರಿಸುತ್ತೇವೆ. ಒಂದೇ ಪ್ರಕಾರದ ಐದು ಜನಪದ ಕಲಾವಿದರಿಗೆ ಈ ಬಾರಿ ಅವಕಾಶ ಇಲ್ಲ. ಬದಲಾದ ಕಾಲಕ್ಕೆ ತಕ್ಕಂತೆ ಮೆರವಣಿಗೆಯ ರೂಪವನ್ನು ಬದಲಾಯಿಸುತ್ತೇವೆ. ಸೇನಾಪಡೆಯ ಯೋಧರು ಕೂಡ ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ, ಕನ್ನಡ ಚಿತ್ರರಂಗದ ನಟ-ನಟಿಯರು ಕೂಡ ಮೆರವಣಿಗೆಯಲ್ಲಿ ಸಾಗಲಿದ್ದಾರೆ ಎಂದು ಹೇಳಿದರು.

ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಪ್ರತಿಕ್ರಿಯಿಸಿ, ಕಂಬಳವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ದಸರಾದಲ್ಲಿ ಕಂಬಳ ಆಯೋಜಿಸುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಕಂಬಳದಿಂದ ಪರಿಸರ ಹಾನಿ, ನೀರು ಪೋಲು ಎಂಬುದೆಲ್ಲಾ ಸುಮ್ಮನೆ ನೆಪ. ಯಾವ ಪರಿಸರ ಹಾನಿಯೂ ಆಗುವುದಿಲ್ಲ. ನೀರು ಕೂಡ ಹೆಚ್ಚಾಗಿ ಬೇಕಾಗಿಲ್ಲ. ಸುಮ್ಮನೆ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದರು.

ದಸರಾ ಉದ್ಘಾಟಕರ ವಿಚಾರ‌ದಲ್ಲಿ ಹಲವರ ಜೊತೆ ಚರ್ಚೆ ಮಾಡಿದ್ದೇನೆ. ಅಂತಿಮ ನಿರ್ಣಯವನ್ನು ಇನ್ನೂ ತೆಗೆದುಕೊಂಡಿಲ್ಲ ಎಂದರು.

ಬರದ ನೆಪದಲ್ಲಿ ದಸರಾವನ್ನು ಸರಳವಾಗಿ ಆಚರಿಸಲು ಸಾಧ್ಯವಿಲ್ಲ. ಈ ಕುರಿತ ನನ್ನ ನಿಲುವಿನಲ್ಲಿ ಯಾವ ಬದಲಾವಣೆಯೂ ಇಲ್ಲ. ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಮಾಡುತ್ತೇನೆ. ಅದರಲ್ಲಿ ಬದಲಾವಣೆ ಪ್ರಶ್ನೆ ಇಲ್ಲ. ದಸರಾದ ಮೇಲೆ ಇಡೀ ಪ್ರವಾಸೋದ್ಯಮ ನಿಂತಿದೆ.

- ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ.

- ಕಂಬಳ ಆಯೋಜನೆ ಇನ್ನೂ ಅಂತಿಮ ನಿರ್ಧಾರ ಇಲ್ಲ

- ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆಯಾದರೂ ಅದೇ ಕಾರಣದಿಂದ ಸರಳ ದಸರಾ ಇಲ್ಲ

- ಈ ಬಾರಿಯೂ ಅದ್ಧೂರಿ ಮತ್ತು ವಿಭಿನ್ನ ದಸರಾ ಆಚರಣೆಗೆ ಸರ್ಕಾರ ಸಿದ್ಧತೆ ನಡೆಸಿದೆ

- ಬದಲಾದ ಕಾಲಕ್ಕೆ ತಕ್ಕಂತೆ ವಿಶ್ವಪ್ರಸಿದ್ಧ ಮೈಸೂರು ದಸರಕ್ಕೂ ಹೊಸ ರೂಪ ಖಚಿತ

- ಉದ್ಘಾಟಕರು ಯಾರೆಂದು ಹಲವರ ಜತೆ ಚರ್ಚೆ ನಡೆದಿದೆ. ಅಂತಿಮ ನಿರ್ಧಾರ ಆಗಿಲ್ಲ

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

25000 ರೈತರಿಗೆ ಇನ್ನೂ ಬರಬೇಕು ‘ರಾಗಿ ಬಾಕಿ’
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕ ಅಕ್ರಮದಲ್ಲಿ ಪ್ರಮುಖ ಬೇಟೆ - ಐಎಎಸ್‌ ಜ್ಞಾನೇಂದ್ರ ಬಂಧನ