ಸಿಎಂ ಕಾರಿಂದ ಸಂಚಾರ ನಿಯಮ ಉಲ್ಲಂಘನೆ: ₹2,000 ದಂಡ ಬಾಕಿ?

Published : Sep 06, 2025, 08:05 AM IST
siddaramaiah

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಸರ್ಕಾರಿ ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಬಾಕಿ ಉಳಿದಿದೆ ಎಂಬ ಮಾಹಿತಿ ಬೆಳಕಿಗೆ

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಸರ್ಕಾರಿ ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಬಾಕಿ ಉಳಿದಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಎಕ್ಸ್ ತಾಣದಲ್ಲಿ ‘ಆರ್‌ಸಿ ಬೆಂಗಳೂರು’ ಹೆಸರಿನ ಖಾತೆಯಲ್ಲಿ ಮುಖ್ಯಮಂತ್ರಿ ಅವರ ಕಾರಿನ ಫೋಟೋ ಹಾಕಿ ಪೋಸ್ಟ್ ಹಾಕಲಾಗಿದೆ. 

ಮುಖ್ಯಮಂತ್ರಿಗಳ ಸರ್ಕಾರಿ ಕಾರು ಕೆಎ-05, ಜಿಎ-2023 ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಏಳು ಪ್ರಕರಣಗಳು ಬಾಕಿ ಇದ್ದು, ಎರಡು ಸಾವಿರ ರು. ದಂಡ ಪಾವತಿಸಬೇಕಿದೆ. ಈಗ ಸಂಚಾರ ಪ್ರಕರಣಗಳ ದಂಡ ಪಾವತಿಗೆ ರಿಯಾಯ್ತಿ ಕೊಟ್ಟಿರುವ ಆಫರ್‌ ಬಳಸಿಕೊಂಡು ಮುಖ್ಯಮಂತ್ರಿ ಅವರ ಕಾರಿನ ದಂಡ ಪಾವತಿಸಲಿ ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ