ದೇಶದ ಮೊದಲ ಪ್ರತ್ಯೇಕ ಸೈಬರ್‌ ತನಿಖಾ ಘಟಕ ರಾಜ್ಯದಲ್ಲಿ ಶುರು - ಭೂಷನ್‌ ಡಿಐಜಿ, ಮೊಹಂತಿಗೆ ಘಟಕ ಮುಖ್ಯಸ್ಥ ಹೊಣೆ

Published : Apr 08, 2025, 12:08 PM IST
Cyber ​​Fraud

ಸಾರಾಂಶ

ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ಆ ಪ್ರಕರಣಗಳ ತನಿಖೆ ಸಲುವಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

  ಬೆಂಗಳೂರು : ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ಆ ಪ್ರಕರಣಗಳ ತನಿಖೆ ಸಲುವಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಈ ಘಟಕದ ಡಿಐಜಿಯಾಗಿ ಭೂಷಣ್ ಬೊರೆಸೆ ಅವರು ನೇಮಕಗೊಂಡಿದ್ದು, ಹಂತ ಹಂತವಾಗಿ ಐಜಿಪಿ ಹಾಗೂ ಎಸ್ಪಿ ಸೇರಿದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಘಟಕದ ಮುಖ್ಯಸ್ಥರಾಗಿ ಪ್ರಣವ್ ಮೊಹಂತಿ ಅವರಿಗೆ ಹೊಣೆಗಾರಿಕೆ ನೀಡಲಾಗಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬೀಳಬೇಕಿದೆ.

ಸೈಬರ್ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅವುಗಳ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪಿಸುವಂತೆ ಸರ್ಕಾರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಘಟಕದ ವ್ಯಾಪ್ತಿಗೆ ರಾಜ್ಯದ ಎಲ್ಲ ಸಿಇಎನ್ ಠಾಣೆಗಳು ಬರಲಿದ್ದು, ಐಜಿಪಿ ವಲಯಕ್ಕೆ ಓರ್ವ ಎಸ್ಪಿ ನೇಮಕವಾಗಲಿದ್ದಾರೆ. ಈಗಾಗಲೇ ಸಿಇಎನ್‌ ಠಾಣೆಗಳಿಗೆ ಡಿವೈಎಸ್ಪಿ ಮುಖ್ಯಸ್ಥರಾಗಿದ್ದು, ಸೈಬರ್ ಪ್ರಕರಣಗಳ ತನಿಖೆಗೆ ತ್ವರಿತವಾಗಿ ಮುಗಿಸಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ.

₹72 ಕೋಟಿ ಅನುದಾನ ಕೋರಿಕೆ

ಸೈಬರ್ ತನಿಖಾ ಘಟಕಕ್ಕೆ ಸ್ಥಾಪನೆಗೆ ₹72 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪೊಲೀಸ್ ಇಲಾಖೆ ಕೋರಿಕೆ ಸಲ್ಲಿಸಿದೆ. ಆದರೆ ಮೊದಲ ಹಂತದಲ್ಲಿ ಘಟಕಕ್ಕೆ ಕೇವಲ ₹5 ಕೋಟಿ ಮಾತ್ರ ಬಿಡುಗಡೆಗೆ ಸರ್ಕಾರ ಸಮ್ಮಿತಿಸಿದೆ. ಸೈಬರ್ ಲ್ಯಾಬ್‌, ತಾಂತ್ರಿಕ ಉಪಕರಣಗಳ ಖರೀದಿ ಹಾಗೂ ಕಚೇರಿ ಸ್ಥಾಪನೆ ಹೀಗೆ ಮೂಲಭೂತ ಸೌಲಭ್ಯಕ್ಕಾಗಿ ₹72 ಕೋಟಿ ಆರ್ಥಿಕ ನೆರವು ಕೋರಿದೆ ಎಂದು ತಿಳಿದು ಬಂದಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಕೃತಕ ಬುದ್ದಿಮತ್ತೆ ಯುಗದಲ್ಲಿ ಕೌಶಲ್ಯಕ್ಕೆ ಮನ್ನಣೆ
ಟೌನ್ ಬ್ಯಾಂಕ್ ನೂತನ ಸದಸ್ಯರಿಗೆ ಶಾಸಕ ಶರತ್‌ ಅಭಿನಂದನೆ