ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ, ಅದರ ಮುಖ್ಯಸ್ಥರು ಹಾಗೂ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಎಂ.ಡಿ.ಸಮೀರ್ ಅವರಿಂದ 10 ಕೋಟಿ ರು. ಪರಿಹಾರ ಕೊಡಿಸಲು ಕೋರಿ ಸಿವಿಲ್ ಕೋರ್ಟ್ಗೆ ದಾವೆ ಸಲ್ಲಿಸಲಾಗಿದೆ.
ಬೆಂಗಳೂರು: ನ್ಯಾಯಾಲಯ ಮಧ್ಯಂತರ ಆದೇಶ ಉಲ್ಲಂಘಿಸಿ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನ, ಅದರ ಮುಖ್ಯಸ್ಥರು ಹಾಗೂ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಎಂ.ಡಿ.ಸಮೀರ್ ಅವರಿಂದ 10 ಕೋಟಿ ರು. ಪರಿಹಾರ ಕೊಡಿಸಲು ಕೋರಿ ಸಿವಿಲ್ ಕೋರ್ಟ್ಗೆ ದಾವೆ ಸಲ್ಲಿಸಲಾಗಿದೆ.
ಈ ಕುರಿತು ಡಿ.ನಿಶ್ಚಲ್ ಮತ್ತು ಡಿ.ಹರ್ಷೇಂದ್ರ ಕುಮಾರ್ ಅವರು ಮೂಲ ದಾವೆ ಸಲ್ಲಿಸಿದ್ದಾರೆ. ದಾವೆಯ ವಿಚಾರಣೆ ನಡೆಸಿದ ನಗರದ 4ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎಸ್.ನಟರಾಜ್ ಅವರು, ಯೂಟ್ಯೂಬರ್ ಎಂ.ಡಿ. ಸಮೀರ್, ದೂತ ಯೂಟ್ಯೂಬ್ ಚಾನೆಲ್ ಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ಅಲ್ಲದೆ, ವಿವಾದಿತ ವಿಡಿಯೊವನ್ನು ಯೂಟ್ಯೂಬ್ ಚಾನೆಲ್ಯಿಂದ ತೆಗೆದುಹಾಕುವಂತೆ ಸಮೀರ್ಗೆ ಸೂಚನೆ ನೀಡಿ ದಾವೆಯ ವಿಚಾರಣೆಯನ್ನು ಜೂ.9ಕ್ಕೆ ಮುಂದೂಡಿದೆ.