ರನ್ಯಾಗೆ ಗಿಫ್ಟ್‌ ಕೊಟ್ಟಿದ್ದೀನಾ? ಇಲ್ವಾ? ಅಂತ ಡಿಕೆಶೀನೇ ಕೇಳಿ : ಪರಂ ಗರಂ

Published : May 27, 2025, 11:57 AM IST
Dr G Parameshwar

ಸಾರಾಂಶ

ಚಿನ್ನದ ಕಳ್ಳಸಾಗಣೆ ಆರೋಪದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ವಿವಾಹದ ಸಂದರ್ಭದಲ್ಲಿ ಪರಮೇಶ್ವರ್ ‘ಗಿಫ್ಟ್‌’ ನೀಡಿರಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

 ಬೆಂಗಳೂರು : ಚಿನ್ನದ ಕಳ್ಳಸಾಗಣೆ ಆರೋಪದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ವಿವಾಹದ ಸಂದರ್ಭದಲ್ಲಿ ಪರಮೇಶ್ವರ್ ‘ಗಿಫ್ಟ್‌’ ನೀಡಿರಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

‘ರನ್ಯಾ ರಾವ್‌ಗೆ ಪರಮೇಶ್ವರ್‌ ಗಿಫ್ಟ್‌ ನೀಡಿದ್ದಾರೆ’ ಎಂದು ಶಿವಕುಮಾರ್‌ ಹೇಳಿದ್ದಾರಲ್ಲಾ ಎಂದು ಸೋಮವಾರ ಸುದ್ದಿಗಾರರು ಪ್ರಶ್ನಿಸಿದಾಗ, ಸಿಟ್ಟಾದ ಪರಮೇಶ್ವರ್‌, ‘ನೋ ಕಾಮೆಂಟ್ಸ್‌. ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಇಲ್ಲ ಮಾತನಾಡುವುದಿಲ್ಲ. ಈ ಬಗ್ಗೆ ಹೋಗಿ ಅವರನ್ನೇ(ಶಿವಕುಮಾರ್‌) ಕೇಳಿ’ ಎಂದು ಪ್ರತಿಕ್ರಿಯಿಸಿದರು.

ಸರ್ಕಾರದ ವಿರುದ್ಧ ಬಿಜೆಪಿಯವರು ಜಾಹೀರಾತು ನೀಡಿದ್ದಕ್ಕಾಗಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕಾನೂನು ಹೋರಾಟಕ್ಕೆ ಮುಂದಾಗಿದ್ದೀರಲ್ಲಾ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ‘ಅದು ಏನು ಎಂದು ನಾನು ನೋಡಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರಾಜಕ್ಕೆ ಕೇಂದ್ರ ಬಜೆಟ್ಟಲ್ಲಿ ಚೊಂಬು : ಸಿಎಂ ಸಿಡಿಮಿಡಿ
ದ್ವೇಷ ಭಾಷಣದ ವ್ಯಾಖ್ಯಾನವೇ ಅಸ್ಪಷ್ಟ : 29 ಕಾರಣಗಳ ಹಿನ್ನೆಲೆ ನೀಡಿದ ರಾಜ್ಯಪಾಲ