ಸಮೀಕ್ಷಾ ವರದಿ ಆಧರಿಸಿ ಬರಗಾಲ ಘೋಷಣೆ; ಡಿಕೆಶಿ

Published : Jul 07, 2026, 10:03 AM IST
DK Shivakumar

ಸಾರಾಂಶ

ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿಯಲ್ಲಿ ವಿಭಾಗ ಮಟ್ಟದ ಸಭೆ ಕರೆದಿದ್ದು, ಬರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆಸುತ್ತೇವೆ

 ಬಸವಕಲ್ಯಾಣ :  ರಾಜ್ಯದ ಹಲವೆಡೆ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿಯಲ್ಲಿ ವಿಭಾಗ ಮಟ್ಟದ ಸಭೆ ಕರೆದಿದ್ದು, ಬರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆಸುತ್ತೇವೆ. ಅಲ್ಲದೆ, ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಂಡು, ಪರಿಶೀಲನೆ ನಡೆಸಿದ ಬಳಿಕ ‘ಬರಗಾಲ ಘೋಷಣೆ’ ಮಾಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಅನುಭವ ಮಂಟಪಕ್ಕೆ ಭೇಟಿ

ಬೀದರ್‌ ಜಿಲ್ಲೆ ಬಸವಕಲ್ಯಾಣದಲ್ಲಿ ನಿರ್ಮಾಣ ಮಾಡುತ್ತಿರುವ ನೂತನ ಅನುಭವ ಮಂಟಪಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬರ ಘೋಷಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮಳೆ ಕೊರತೆಯ ಆತಂಕ ಎದುರಾಗಿದ್ದರೂ ಬರ ಘೋಷಣೆ ಮಾಡುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. 

ಒಂದೇ ದಿನದಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ

 ಒಂದೇ ದಿನದಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯದ ಮಾರ್ಗಸೂಚಿಗಳ ಪ್ರಕಾರ ಸಮೀಕ್ಷೆ ನಡೆಸಿ, ಬೆಳೆ ಹಾನಿ ಹಾಗೂ ನೀರಿನ ಕೊರತೆಯ ವರದಿ ಆಧರಿಸಿ ಬರ ಘೋಷಣೆ ಮಾಡಬೇಕಾಗುತ್ತದೆ. ಅದಕ್ಕೆ ಕಾಲಾವಕಾಶ ಬೇಕು. ಉತ್ತರ ಕರ್ನಾಟಕ ಭಾಗದ ಬರ ಕುರಿತಂತೆ ಕಲಬುರಗಿಯಲ್ಲಿ ಮಂಗಳವಾರ ನಡೆಯುವ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆಯುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

 

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕೈಕೊಟ್ಟ ಮಳೆ: ಬಿತ್ತನೆಗೆ ಭಾರೀ ಪ್ರಮಾಣದ ‘ಬರ’
ಬೆಂಕಿಯಂತಹ ಬರಗಾಲದಲ್ಲೂ ರಾಜ್ಯದಲ್ಲಿ ಮಾಯದಂಥ ಮಳೆ ಬಂತಣ್ಣ!