ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ

Published : Oct 08, 2025, 09:59 AM IST
 Minister Satish Jarkiholi's Key Statement on Cabinet Reshuffle in Raichur

ಸಾರಾಂಶ

ಮಹರ್ಷಿ ವಾಲ್ಮೀಕಿ ಶೋಷಿತ ಸಮುದಾಯದಲ್ಲಿ ಹುಟ್ಟಿ ಬದುಕನ್ನು ಬದಲಿಸುವಂತಹ ಮಹಾಕಾವ್ಯವನ್ನು ರೂಪಿಸಿದರು. ಅವರ ಮೌಲ್ಯಗಳು, ಅವರ ರಚನೆಗಳನ್ನು ಜನರಿಗೆ ತಿಳಿಸಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಮೂಲಕ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕೇಂದ್ರ ಸ್ಥಾಪನೆ ಮಾಡಲಾಗುವುದು.

  ಬೆಂಗಳೂರು :  ಮಹರ್ಷಿ ವಾಲ್ಮೀಕಿ ಶೋಷಿತ ಸಮುದಾಯದಲ್ಲಿ ಹುಟ್ಟಿ ಬದುಕನ್ನು ಬದಲಿಸುವಂತಹ ಮಹಾಕಾವ್ಯವನ್ನು ರೂಪಿಸಿದರು. ಅವರ ಮೌಲ್ಯಗಳು, ಅವರ ರಚನೆಗಳನ್ನು ಜನರಿಗೆ ತಿಳಿಸಲು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಮೂಲಕ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕೇಂದ್ರ ಸ್ಥಾಪನೆ ಮಾಡಲಾಗುವುದು. ಅದಕ್ಕಾಗಿ 40 ಕೋಟಿ ರು. ಮೀಸಲಿಡಲಾಗಿದೆ.  

ಇದು ಎಸ್ಸಿ/ಎಸ್ಟಿ ಸಮುದಾಯದ 500 ವಿದ್ಯಾರ್ಥಿಗಳಿಗೆ ಒಮ್ಮೆಗೆ ತರಬೇತಿ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದ ಅವರು, ರಾಜ್ಯದ 10 ಜಿಲ್ಲೆಗಳಲ್ಲಿ ಹೊಸದಾಗಿ ಭೂಮಿ ಖರೀದಿಸಿ ಎಸ್ಸಿ/ಎಸ್ಟಿ ಕಾಲೋನಿ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಅದಕ್ಕೆ ಮಹರ್ಷಿ ವಾಲ್ಮೀಕಿ ಅಥವಾ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಹೆಸರಿಡಲಾಗುವುದು. ಉಳಿದಂತೆ ಬೆಂಗಳೂರಿನಲ್ಲಿ ವಾಲ್ಮೀಕಿ ಸೌಧ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಜತೆಗೆ ಮುಂದಿನ ವರ್ಷದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ವಿವರಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!
70 ಸಾವಿರ ಬೆಲೆಯ ಕಾರಿಗೆ 1.11 ಲಕ್ಷ ರು. ದಂಡ ಕಟ್ಟಿದ ಮಾಲೀಕ