ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ

Published : Dec 20, 2025, 06:48 AM IST
Aindrita Ray about Garbage Problem

ಸಾರಾಂಶ

ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ಕಸಕ್ಕೆ ಬೆಂಕಿ ಹಾಕಿ ಸುಡಲಾಗುತ್ತಿದ್ದು, ಇದರಿಂದ ಬರುತ್ತಿರುವ ಹೊಗೆಯಿಂದ ಮನೆಯಲ್ಲಿ ಉಸಿರಾಡುವುದಕ್ಕೆ ಆಗುತ್ತಿಲ್ಲ ಎಂದು ಚಿತ್ರ ನಟಿ ಐಂದ್ರಿತಾ ರೇ ಆಸಮಾಧಾನ ವ್ಯಕ್ತಪಡಿಸಿದ್ದಾರೆ.

  ಬೆಂಗಳೂರು :  ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ಕಸಕ್ಕೆ ಬೆಂಕಿ ಹಾಕಿ ಸುಡಲಾಗುತ್ತಿದ್ದು, ಇದರಿಂದ ಬರುತ್ತಿರುವ ಹೊಗೆಯಿಂದ ಮನೆಯಲ್ಲಿ ಉಸಿರಾಡುವುದಕ್ಕೆ ಆಗುತ್ತಿಲ್ಲ ಎಂದು ಚಿತ್ರ ನಟಿ ಐಂದ್ರಿತಾ ರೇ ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ನಟಿ

ಈ ಕುರಿತು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ರಾಜರಾಜೇಶ್ವರಿ ನಗರ ಪ್ರದೇಶದಲ್ಲಿ ಮೂರು ದಿನಗಳಿಂದ ಕಸ ಸುಡುತ್ತಿದ್ದಾರೆ. ಏನಿದು ಸಮಸ್ಯೆ ಎಂದು ನೋಡಿದಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಿಬ್ಬಂದಿಯೇ ಕಸ ಸುಡುತ್ತಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ಉಸಿರಾಡುವುದಕ್ಕೂ ಆಗುತ್ತಿಲ್ಲ ಎಂದು ನಟಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿದರೂ ಸಂಪರ್ಕ ಆಗುತ್ತಿಲ್ಲ

ಈ ವಿಚಾರವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಾಯವಾಣಿಗೆ ಕರೆ ಮಾಡಿದರೂ ಸಂಪರ್ಕ ಆಗುತ್ತಿಲ್ಲ ಎಂದು ಹೇಳಿರುವ ಅವರು, ಕಸ ಸುಡುತ್ತಿರುವ ವಿಡಿಯೋ ಸಹ ಹಂಚಿಕೊಂಡಿದ್ದು, ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ‌ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಸದ ಬೆಂಕಿಗೆ ನೀರು: ಸುಮನಹಳ್ಳಿಯ ಸತ್ವ ಅಪಾರ್ಟ್ಮೆಂಟ್ ಪಕ್ಕದ ಜಾಗದಲ್ಲಿಯೂ ಶುಕ್ರವಾರ ಕಸ ಸುರಿದು ಬೆಂಕಿ ಹಾಕಲಾಗಿದ್ದು, ಈ ಕುರಿತು ಸ್ಥಳೀಯರು ದೂರು ನೀಡಿದ ಬಳಿಕ ಅಧಿಕಾರಿಗಳು ಕಸದ ಬೆಂಕಿಗೆ ನೀರು ಹಾಕಿ ನಂದಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ
ಬೆಂಗಳೂರು : ನಗರದಲ್ಲಿ ನ್ಯಾಯರಥ-ಸಂಚಾರಿ ಕಾನೂನು ಸೇವಾ ಕ್ಲಿನಿಕ್‌