ಉಚಿತ ವಿದ್ಯುತ್‌, ₹2000ಕ್ಕೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ?

Published : May 26, 2026, 07:09 AM IST
  Grihalakshmi

ಸಾರಾಂಶ

ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಎರಡು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ

 ಬೆಂಗಳೂರು :  ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಎರಡು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ.

ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಸಲಹೆ

ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. 

 ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ ಯೋಜನೆ ಲಾಭ ಪಡೆಯುತ್ತಿದ್ದಾರೆ. ಈ ದುರ್ಬಳಕೆಯಿಂದಾಗಿ ಸರ್ಕಾರಕ್ಕೆ ಮಾಸಿಕ 100 ಕೋಟಿ ರು.ಗೂ ಹೆಚ್ಚಿನ ಸೋರಿಕೆಯಾಗುತ್ತಿದೆ. ಇದನ್ನು ತಪ್ಪಿಸಲು ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಪಡೆಯುವ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಶೀಘ್ರದಲ್ಲಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಗಳಿವೆ.

ಇದಕ್ಕೆ ಸಂಬಂಧಿಸಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಅಗತ್ಯವಿದ್ದು, ಈ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಕೆಲ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರ ಖಾತೆಗೆ ಹೋಗಿ ದುರ್ಬಳಕೆಯಾಗುತ್ತಿದೆ. ಇನ್ನು ದೂರವಾಣಿ ಸಂಖ್ಯೆ ಬದಲಿಸಲಾಗಿದ್ದು, ಅದರಿಂದ ನೈಜ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿಲ್ಲ ಎಂಬ ದೂರುಗಳಿವೆ. ಈ ದುರ್ಬಳಕೆ ತಡೆಯಲು ಗ್ಯಾರಂಟಿ ಫಲಾನುಭವಿಗಳ ದಾಖಲೆ ಸಂಗ್ರಹಿಸುವ ಬಗ್ಗೆ ಸಲಹೆಗಳು ಬಂದಿವೆ. ಪ್ರತಿ ತಾಲೂಕಿನಲ್ಲೂ ಅದನ್ನು ಪರಿಶೀಲಿಸಲಾಗುತ್ತಿದೆ ಎಂದು ವಿವರಿಸಿದರು.

ಸುಮಾರು 100 ಕೋಟಿ ರು. ದುರ್ಬಳಕೆ ಆಗ್ತಿದೆ

ಗ್ಯಾರಂಟಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಅಗತ್ಯವಿದ್ದು, ಈ ಕುರಿತು ಪರಿಶೀಲನೆ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಕೆಲ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರ ಖಾತೆಗೆ ಹೋಗಿ ದುರ್ಬಳಕೆಯಾಗುತ್ತಿದೆ.

- ಡಿ.ಕೆ. ಶಿವಕುಮಾರ್‌, ಡಿಸಿಎಂ

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕರ್ನಾಟಕ ವಿದ್ಯುತ್‌ ವಿತರಣೆ ಖಾಸಗಿಗೆ?
ಕೊಲೆ ಕೇಸಲ್ಲಿ ಮಹಿಳೆ ಎಂಬ ಕಾರಣಕ್ಕೆ ಮಾತ್ರ ಬೇಲ್‌ ನೀಡಲಾಗುವುದಿಲ್ಲ: ಹೈಕೋರ್ಟ್‌