ಇಂದಿನಿಂದ 3 ದಿನ ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ

Published : Jun 23, 2026, 12:22 PM IST
Rain

ಸಾರಾಂಶ

ರಾಜ್ಯದೆಲ್ಲೆಡೆ ಮುಂಗಾರು ಮಳೆಯ ತೀವ್ರ ಕೊರತೆಯಿದೆ. ಈ ನಡುವೆ ಮೂರು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯ ‘ಯೆಲ್ಲೋ ಅಲರ್ಟ್’ ಅನ್ನು ಹವಾಮಾನ ಇಲಾಖೆ ನೀಡಿದೆ.

 ಬೆಂಗಳೂರು : ರಾಜ್ಯದೆಲ್ಲೆಡೆ ಮುಂಗಾರು ಮಳೆಯ ತೀವ್ರ ಕೊರತೆಯಿದೆ. ಈ ನಡುವೆ ಮೂರು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯ ‘ಯೆಲ್ಲೋ ಅಲರ್ಟ್’ ಅನ್ನು ಹವಾಮಾನ ಇಲಾಖೆ ನೀಡಿದೆ.

ಜೂ.23ರಿಂದ ಜೂ.25ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜೂ.23ರಿಂದ ಜೂ.25ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂ.27ರಂದು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.

ಜೂ.22ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದೆ. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಪ್ರದೇಶಗಳು, ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆ ಮಾತ್ರ ಮಳೆಯಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ 8 ಸೆಂ.ಮೀ. ಮಳೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ 8 ಸೆಂ.ಮೀ. ಮಳೆಯಾಗಿದೆ. ಮತ್ತೊಂದೆಡೆ ಮಳೆಗಾಲದಲ್ಲೂ ಕಲಬುರಗಿಯಲ್ಲಿ ಬೇಸಿಗೆ ಕಾಲದಂತೆ ಗರಿಷ್ಠ 39.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಸಂತ್ರಸ್ತೆ ಬೇರೆ ಮದುವೆ ಆದರೂ ಪೋಕ್ಸೋ ಕೇಸ್‌ ರದ್ದಿಲ್ಲ : ಕೋರ್ಟ್‌
ಅಡ್ಡಮತದಾನ ಮಾಡಿದ 6-7 ಶಂಕಿತ ಶಾಸಕರ ಪಟ್ಟಿ ಇಂದು ವರಿಷ್ಠರಿಗೆ?