13ರಂದು ಕರ್ನಾಟಕ ಬಂದ್ ಫಿಕ್ಸ್, ವಾಪಸ್ ಮಾತೇ ಇಲ್ಲ: ವಾಟಾಳ್

Published : Aug 03, 2026, 09:05 AM IST
Vatal Nagaraj

ಸಾರಾಂಶ

ಆ.13ರಂದು ಕರ್ನಾಟಕ ಬಂದ್ ಫಿಕ್ಸ್, ಬಂದ್ ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಪರವಾಗಿ ಬಂದ್‌ಗೆ ಕರೆ ಕೊಟ್ಟಿದ್ದೇವೆ.

ಮೈಸೂರು: ಆ.13ರಂದು ಕರ್ನಾಟಕ ಬಂದ್ ಫಿಕ್ಸ್, ಬಂದ್ ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಪರವಾಗಿ ಬಂದ್‌ಗೆ ಕರೆ ಕೊಟ್ಟಿದ್ದೇವೆ. 

ಕಾವೇರಿ ನೀರು ಒಂದೇ ವಿಚಾರ ಅಲ್ಲ

 ಕಾವೇರಿ ನೀರು ಒಂದೇ ವಿಚಾರ ಅಲ್ಲ. ಗಡಿ ಸಮಸ್ಯೆ, ಯುವಕರಿಗೆ ಉದ್ಯೋಗ, ಮೈಸೂರಿನ ಸಮಗ್ರ ಅಭಿವೃದ್ಧಿ, ಕಾವೇರಿ ನೀರು ಹಂಚಿಕೆ ವಿಚಾರ, ಬೆಳಗಾವಿ ಎಂಇಎಸ್ ಪುಂಡಾಟ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಬಂದ್ ಕರೆ ಕೊಟ್ಟಿದ್ದೇವೆ ಎಂದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಂದ್ ವಾಪಸ್ ಪಡೆಯಿರಿ ಎಂದು ಮನವಿ ಮಾಡಿದ್ದಾರೆ. 

ನಾವು ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ

ನಾವು ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ. ಈಗಾಗಲೇ ದಿನಾಂಕವನ್ನೂ ನಿಗದಿ ಮಾಡಲಾಗಿದೆ. ಆ.13ರಂದು ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಅವರು ತಿಳಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಪೇದೆ ಪರೀಕ್ಷೆ ವೇಳೆ ಗೊಂದಲ : ಅಭ್ಯರ್ಥಿಗಳ ಧರಣಿ
ಕಾವೇರಿ ಸಂಕಷ್ಟ ಸೂತ್ರ ಸರ್ವಪಕ್ಷ ಸಭೆಯಲ್ಲಿ ಮಂತ್ರ