ರಾಜ್ಯಕ್ಕೆ ಮುಂಗಾರು ಪ್ರವೇಶ, ಮಳೆ ಶುರು

Nirupama ks | Updated : Jun 01 2024, 11:38 AM IST

ರಾಜ್ಯದ ಗಡಿ ಜಿಲ್ಲೆಗಳಿಗೆ ಈಗಾಗಲೇ ಮುಂಗಾರು ಪ್ರವೇಶಿಸಿದೆ. ಈ ಬಗ್ಗೆ ಒಂದೆರಡು ದಿನದಲ್ಲಿ ಹವಾಮಾನ ಇಲಾಖೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.

ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳಿಗೆ ಈಗಾಗಲೇ ಮುಂಗಾರು ಪ್ರವೇಶಿಸಿದೆ. ಈ ಬಗ್ಗೆ ಒಂದೆರಡು ದಿನದಲ್ಲಿ ಹವಾಮಾನ ಇಲಾಖೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.

 ನಿರೀಕ್ಷೆಗಿಂತ 2 ದಿನ ಮೊದಲೇ ಮುಂಗಾರು ರಾಜ್ಯಕ್ಕೆ ಕಾಲಿಟ್ಟಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶವಾಗಿದೆ. ನಿರೀಕ್ಷೆಗೂ  ಎರಡು ದಿನ ಮೊದಲೆ ಮಳೆ ಆರಂಭವಾಗಿದೆ. ಬರದಿಂದ ತತ್ತರಿಸಿದ್ದ ಜನತೆ ಮುಂಗಾರು ಆಗಮನದಿಂದ ನಿಟ್ಟುಸಿರು ಬಿಡುತ್ತಿದ್ದಾರೆ.