ಕೆಪಿಎಸ್ಸಿ ಅಕ್ರಮಕ್ಕೆ ಎನ್‌ಡಿಎ ಕೂಟವೇ ಪಿತಾಮಹ: ಡಿಕೆಶಿ

Published : Sep 03, 2026, 05:51 AM IST
Dk Shivakumar

ಸಾರಾಂಶ

ಕೆಪಿಎಸ್ಸಿ ಹಗರಣಗಳ ಪಿತಾಮಹನೇ ಎನ್‌ಡಿಎ ಆಗಿದ್ದು, ಈ ಹಗರಣ ಸಂಬಂಧ ಬಿಜೆಪಿ ಹಾಗೂ ಎನ್‌ಡಿಎ ಮುಖಂಡರ ವಿರುದ್ಧ ಗೃಹ ಸಚಿವರ ಬಳಿ ಇರುವ ಮಾಹಿತಿಯನ್ನು ಶೀಘ್ರ ಬಹಿರಂಗಪಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು : ಕೆಪಿಎಸ್ಸಿ ಹಗರಣಗಳ ಪಿತಾಮಹನೇ ಎನ್‌ಡಿಎ ಆಗಿದ್ದು, ಈ ಹಗರಣ ಸಂಬಂಧ ಬಿಜೆಪಿ ಹಾಗೂ ಎನ್‌ಡಿಎ ಮುಖಂಡರ ವಿರುದ್ಧ ಗೃಹ ಸಚಿವರ ಬಳಿ ಇರುವ ಮಾಹಿತಿಯನ್ನು ಶೀಘ್ರ ಬಹಿರಂಗಪಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬುಧವಾರ ಎಫ್‌ಕೆಸಿಸಿಐ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟನೆ ಸಮಾರಂಭದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಕೆಪಿಎಸ್ಸಿ ಅಕ್ರಮದಲ್ಲಿ ಬಿಜೆಪಿ ನಾಯಕರ ಸಂಪರ್ಕ

ಕೆಪಿಎಸ್ಸಿ ಅಕ್ರಮದಲ್ಲಿ ಬಿಜೆಪಿ ನಾಯಕರ ಸಂಪರ್ಕದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಕುರಿತು ಗೃಹ ಸಚಿವರು ಹಾಗೂ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಲಾಗಿದೆ. ತನಿಖೆಯ ಸಂಪೂರ್ಣ ವರದಿ ಇನ್ನೂ ಕೈಗೆ ಬಂದಿಲ್ಲ. ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿಯಷ್ಟೇ ತಮಗೆ ತಿಳಿದಿದೆ ಎಂದರು.

ಕೆಪಿಎಸ್ಸಿ ಹಗರಣಗಳ ಪಿತಾಮಹ ಎನ್‌ಡಿಎ

ಕೆಪಿಎಸ್ಸಿ ಹಗರಣಗಳ ಪಿತಾಮಹ ಎನ್‌ಡಿಎ. ಇಲ್ಲಿನ ಅಕ್ರಮಗಳ ಹಿಂದೆ ಯಾರ ಸಂಪರ್ಕವಿದೆ ಎಂಬುದು ತನಿಖೆಯಿಂದ ಹೊರಬರಲಿದೆ. ಕೆಪಿಎಸ್ಸಿ ಅಧ್ಯಕ್ಷರನ್ನು ನೇಮಿಸಿದವರು ಯಾರು? ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದವರು ಯಾರೆಂಬುದು ಕೂಡ ಪರಿಶೀಲನೆಯಾಗಬೇಕು ಎಂದ ಅವರು, ಕೆಪಿಎಸ್ಸಿ ಅಧ್ಯಕ್ಷರನ್ನು ನೇಮಿಸಿದ್ದೇ ಬಿಜೆಪಿ ಎಂದು ಹೇಳಿದರು.

ರಾಜ್ಯಪಾಲರಿಂದ ಬಂದಿರುವ ವರದಿ ಹಾಗೂ ತನಿಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮೋದನೆ ನೀಡಲಾಗಿದೆ. ತನಿಖೆ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿಯವರ ಪಾದಯಾತ್ರೆ ನಿಜವಾದ ಹೋರಾಟವಲ್ಲ. ಬಿಜೆಪಿ ಸಂಘಟನೆಯೊಳಗಿನ ಬಿಕ್ಕಟ್ಟನ್ನು ಮುಚ್ಚಿಕೊಳ್ಳುವ ಪ್ರಯತ್ನ ಅಷ್ಟೆ. ಅವರು ಹೇಳಿದ್ದನ್ನು ಕೇಳಿಕೊಂಡು, ಅವರಿಗೆ ನೀಡಬೇಕಾದ ಗೌರವ ನೀಡುತ್ತಲೇ ಬಂದಿದ್ದೇವೆ. ಆದರೆ, ನಮ್ಮ ಗೌರವವನ್ನು ಸ್ವೀಕರಿಸಲು ಅವರು ಸಿದ್ಧರಿಲ್ಲ ಎಂದಾದರೆ, ಅವರ ರಾಜಕಾರಣ ಅವರು ಮಾಡಲಿ, ನಮ್ಮ ರಾಜಕಾರಣ ನಾವು ಮಾಡುತ್ತೇವೆ. ಅವರು ಪಾದಯಾತ್ರೆ ಮಾಡಲಿ. ಅದಕ್ಕೆ ನನ್ನ ಯಾತ್ರೆ ಏನೆಂಬುದನ್ನು ಸದ್ಯ ಹೇಳುವುದಿಲ್ಲ. ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದರು.

ಕೆಪಿಎಸ್ಸಿ ಅಧ್ಯಕ್ಷರನ್ನು ಅಮಾನತು ಮಾಡಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೇ ಹಿಂದೆ ಪತ್ರ ಬರೆದಿದ್ದರು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಮಯ ವ್ಯರ್ಥ ಮಾಡಲ್ಲ:

ಬಡವರು, ರೈತರು, ಕಾರ್ಮಿಕರು ಹಾಗೂ ಬರಗಾಲದಿಂದ ಸಂಕಷ್ಟಕ್ಕೊಳಗಾದ ಜನರಿಗೆ ನೆರವಾಗುವುದು ನಮ್ಮ ಜವಾಬ್ದಾರಿ. ಅಭಿವೃದ್ಧಿ ಕೆಲಸಗಳನ್ನು ಬದಿಗೊತ್ತಿ ರಾಜಕೀಯ ಆರೋಪ, ಪ್ರತ್ಯಾರೋಪಗಳಲ್ಲಿ ಸಮಯ ವ್ಯರ್ಥ ಮಾಡಲು ನಾವು ಸಿದ್ಧರಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿ ಅವರು ಪ್ರತಿಯೊಬ್ಬರಿಗೂ ಮಾತನಾಡುವ ಹಕ್ಕು, ಧ್ವನಿ ಎತ್ತುವ ಹಕ್ಕು ಮತ್ತು ಸಮಾಜದ ಎಲ್ಲ ವರ್ಗಗಳ ಪರ ನಿಲ್ಲುವ ಹಕ್ಕಿದೆ ಎಂಬ ಸಂದೇಶ ನೀಡುತ್ತಿದ್ದಾರೆ. ಇಂತಹ ಮನೋಭಾವವೇ ಪ್ರಜಾಪ್ರಭುತ್ವದ ಮೂಲ ಆಶಯ ಬಲಪಡಿಸುತ್ತದೆ ಎಂದು ಹೇಳಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕೆಪಿಎಸ್ಸಿ ಪ್ರಶ್ನೆಗಳನ್ನು ಖರೀದಿಸಿ ಮರುಬಿಕರಿ ಮಾಡಿದ್ದ ಅಭ್ಯರ್ಥಿಗಳು!
ಪಾರ್ಕ್‌ ಬಿಲ್‌ ವಿರೋಧಿಸಿ ಸೆ.5, 6ಕ್ಕೆ ಬಿಜೆಪಿ ಪ್ರತಿಭಟನೆ