ಬೇಡ ಅಂದ್ರೂ ವಿಜಯೋತ್ಸವಕ್ಕೆ ಬಂದು ಕಾಲ್ತುಳಿತಕ್ಕೆ ಬಲಿಯಾದ್ಲು

Published : Jun 05, 2025, 05:58 AM IST
Crowd mismanagement at Chinnaswamy stadium

ಸಾರಾಂಶ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ದಿಢೀರ್‌ ಕಾಲ್ತುಳಿತದಲ್ಲಿ 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ದಿವ್ಯಾಂಶಿ(14) ಅಸುನೀಗಿದ್ದಾಳೆ

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ದಿಢೀರ್‌ ಕಾಲ್ತುಳಿತದಲ್ಲಿ 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ದಿವ್ಯಾಂಶಿ(14) ಅಸುನೀಗಿದ್ದಾಳೆ. ಸಾವಿನ ಸುದ್ದಿ ತಿಳಿದು ಬೌರಿಂಗ್‌ ಆಸ್ಪತ್ರೆಗೆ ದೌಡಾಯಿಸಿದ್ದ ತಾತ ಲಕ್ಷ್ಮೀನಾರಾಯಣ, ಮೊಮ್ಮಗಳನ್ನು ನೆನೆದು ರೋದಿಸಿದರು.

ಬೆಂಗಳೂರಿನ ಕನಕಶ್ರೀ ಲೇಔಟ್‌ನ ನಿವಾಸಿಗಳಾದ ಶಿವಕುಮಾರ್‌ ಮತ್ತು ಅಶ್ವಿನಿ ದಂಪತಿ ಪುತ್ರಿ ದಿವ್ಯಾಂಶಿ ಬುಧವಾರ ಮಧ್ಯಾಹ್ನ ತಾಯಿ, ಚಿಕ್ಕಮ್ಮ ಸೇರಿ ಕುಟುಂಬದ ಐವರು ಸದಸ್ಯರೊಂದಿಗೆ ಆರ್‌ಸಿಬಿ ವಿಜಯೋತ್ಸವ ನೋಡಲು ಸ್ಟೇಡಿಯಂ ಬಳಿ ಬಂದಿದ್ದಳು. 

ಈ ವೇಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟಿದ್ದಾಳೆ. ರಾತ್ರಿ ಮನೆಯಲ್ಲೇ ಪಂದ್ಯ ವೀಕ್ಷಿಸಿದ್ದಳು. ಮಧ್ಯಾಹ್ನ ಕರೆ ಮಾಡಿದ್ದಾಗ ವಿಜಯೋತ್ಸವಕ್ಕೆ ಹೋಗುವುದು ಬೇಡ ಎಂದಿದ್ದೆ. ಆದರೂ ಕುಟುಂಬದ ಜತೆಗೆ ಬಂದಿದ್ದಳು. ಇದೀಗ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾಳೆ ಎಂದು ಮೊಮ್ಮಗಳನ್ನು ನೆನೆದು ಲಕ್ಷ್ಮೀನಾರಾಯಣ ಕಣ್ಣೀರಿಟ್ಟರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಆಹಿಂಸೆ, ಶಾಂತಿಧೂತ ಗಾಂಧೀಜಿ ಸ್ಮರಣೆ ನಿರಂತರವಾಗಿರಲಿ
ವಿಕಲಚೇತನರ ಸವಲತ್ತುಗಳ ಸಮರ್ಪಕ ನಿರ್ವಹಣೆಗೆ ಒತ್ತು