‘ಒರಿಜಿನಲ್‌ ಚಾಯ್ಸ್‌ ಬ್ಯಾಡ್‌ ಚಾಯ್ಸ್‌. ಸೆಲ್ಲಿಂಗ್ ವಿಸ್ಕಿ ಈಸ್‌ ರಿಸ್ಕಿ’ : ಜಡ್ಜ್‌

Published : Feb 23, 2026, 09:44 AM IST
Court

ಸಾರಾಂಶ

 ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರು ವಿಚಾರಣೆ ವೇಳೆ ಹೀಗೆಂದು ನುಡಿಯುವ ಮೂಲಕ ಹಾಸ್ಯ ಚಟಾಕಿ ಹಾರಿಸಿದರು. ನ್ಯಾಯಮೂರ್ತಿಗಳ ಈ ಮಾತು ಕೇಳಿ; ನ್ಯಾಯಾಲಯದಲ್ಲಿ ನೆರೆದಿದ್ದ ವಕೀಲರು, ಅಧಿಕಾರಿಗಳು ಮತ್ತು ಸಿಬ್ಬಂದಿ ನಗೆಗಡಲಲ್ಲಿ ತೇಲಿದರು.

 ಬೆಂಗಳೂರು :  ‘ಒರಿಜಿನಲ್‌ ಚಾಯ್ಸ್‌ ಬ್ಯಾಡ್‌ ಚಾಯ್ಸ್‌. ಸೆಲ್ಲಿಂಗ್ ವಿಸ್ಕಿ ಈಸ್‌ ರಿಸ್ಕಿ..!’

ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರು ವಿಚಾರಣೆ ವೇಳೆ ಹೀಗೆಂದು ನುಡಿಯುವ ಮೂಲಕ ಹಾಸ್ಯ ಚಟಾಕಿ ಹಾರಿಸಿದರು. ನ್ಯಾಯಮೂರ್ತಿಗಳ ಈ ಮಾತು ಕೇಳಿ; ನ್ಯಾಯಾಲಯದಲ್ಲಿ ನೆರೆದಿದ್ದ ವಕೀಲರು, ಅಧಿಕಾರಿಗಳು ಮತ್ತು ಸಿಬ್ಬಂದಿ ನಗೆಗಡಲಲ್ಲಿ ತೇಲಿದರು.

ವ್ಯಕ್ತಿಯೊಬ್ಬರು ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಪ್ರಕರಣ

ವ್ಯಕ್ತಿಯೊಬ್ಬರು ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಪ್ರಕರಣದಲ್ಲಿ ತಮ್ಮ ವಿರುದ್ಧ ಪೊಲೀಸರು ದಾಖಲಿಸಿದ ಎಫ್‌ಐಆರ್‌ ರದ್ದು ಕೋರಿ ಮದ್ಯ ಮಾರಾಟದ ಸನ್ನದ್ದುದಾರುರು ಸಲ್ಲಿಸಿದ್ದ ವಿಚಾರಣೆ ವೇಳೆ ಈ ಪ್ರಸಂಗ ನಡೆಯಿತು.

ಮದ್ಯ ಮಾರಾಟ ಸನ್ನದ್ದುದಾರರ ಪರ ವಕೀಲರು ಹಾಜರಾಗಿ, ಸ್ವಾಮಿ ಈ ಪ್ರಕರಣದಲ್ಲಿ ವ್ಯಕ್ತಿಯೊಬ್ಬರು ನಮ್ಮ ಮದ್ಯದಂಡಗಡಿಯಿಂದ 90 ಎಂ.ಎಲ್‌ ಪ್ರಮಾಣ ಮದ್ಯದ 96 ಟೆಟ್ರಾ ಪ್ಯಾಕ್‌ಟ್‌ಗಳನ್ನು ಖರೀದಿಸಿದ್ದರು. ನಂತರ ಆ ಪ್ಯಾಕೆಟ್‌ಗಳನ್ನು ಗ್ರಾಮದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರು ವಿಚಾರಿಸಿದಾಗ, ಬಂಧಿತನು, ‘ನಾನು ಅರ್ಜಿದಾರರ ಮದ್ಯದಂಗಡಿಯಲ್ಲಿ ಕಡಿಮೆ ಬೆಲೆಗೆ ಮದ್ಯ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದೇನೆ’ ಎಂದು ಹೇಳಿಕೆ ನೀಡಿದ್ದರು. ಅದನ್ನು ಆಧರಿಸಿ ಅರ್ಜಿದಾರರ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ವಿವರಿಸಿದರು.

ಅಲ್ಲದೆ, ಅರ್ಜಿದಾರರು ಕಾನೂನುಬದ್ಧವಾಗಿ ಸನ್ನದ್ದು ಪಡೆದು ಮದ್ಯ ಮಾರಾಟ ಮಾಡುತ್ತಿದ್ಧಾರೆ. ಮಾರಾಟ ಮಾಡಿರುವುದಕ್ಕೆ ಬಿಲ್‌ ಸಹ ಇಟ್ಟುಕೊಂಡಿದ್ದಾರೆ. ಪೊಲೀಸರು ಸುಖಾ ಸುಮ್ಮನೆ ಪ್ರಕರಣ ದಾಖಲಿಸಿದ್ದಾರೆ. ಕಾನೂನು ಪ್ರಕಾರ ಇಂತಹ ಪ್ರಕರಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮ ಜರುಗಿಸಬೇಕು. ಪೊಲೀಸರಿಗೆ ಕ್ರಮ ಜರುಗಿಸುವ ಅಧಿಕಾರವಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಆಗ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಏನನ್ನು ಮಾರಾಟ ಮಾಡಲಾಗುತ್ತಿತ್ತು? ವಿಸ್ಕಿನಾ ಎಂದು ಪ್ರಶ್ನಿಸಿದರು. ಅರ್ಜಿದಾರರ ಪರ ವಕೀಲರು, ಒರಿಜಿನಲ್‌ ಚಾಯ್ಸ್‌ ಎಂದರು.

ಒರಿಜಿಲ್‌ ಚಾಯ್ಸ್‌; ಬ್ಯಾಡ್‌ ಚಾಯ್ಸ್‌

ಆಗ ನ್ಯಾಯಮೂರ್ತಿಗಳು, ಒರಿಜಿಲ್‌ ಚಾಯ್ಸ್‌; ಬ್ಯಾಡ್‌ ಚಾಯ್ಸ್‌. ಸೆಲ್ಲಿಂಗ್‌ ವಿಸ್ಕಿ ಈಸ್‌ ರಿಸ್ಕಿ ಎಂದು ಹೇಳಿ ಹಾಸ್ಯ ಚಟಾಕಿ ಹಾರಿಸಿದರು. ಜೊತೆಗೆ, ಇದು ಒರಿಜಿನಲ್‌ ಚಾಯ್ಸಾ? ಆಫೀಸರ್ಸ್‌ ಚಾಯ್ಸಾ? ಎಂದು ಕೇಳಿದರಲ್ಲದೆ, ಆಫೀಸರ್ಸ್‌ ಚಾಯ್ಸ್‌ ಆಗಿದ್ದರೆ, ಆರೋಪಿಯನ್ನು ಪೊಲೀಸರು ಬಿಟ್ಟು ಬಿಡುತ್ತಿದ್ದರು. ಇದು ಒರಿಜಿನಲ್‌ ಚಾಯ್ಸ್‌ ಆಗಿರುವುದರಿಂದ ಬಿಟ್ಟಿಲ್ಲ ಎಂದು ನುಡಿದರು. ನ್ಯಾಯಮೂರ್ತಿಗಳ ಈ ಮಾತು ಕೇಳಿ ಕೋರ್ಟ್‌ ಹಾಲ್‌ನಲ್ಲಿ ನೆರದವರು ಗೊಲ್‌ ಎಂದು ನಕ್ಕರು.

ನಂತರ ಪ್ರಕರಣದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳ ಬದಲಿಗೆ ಪೊಲೀಸರು ದೂರು ದಾಖಲಿಸಿರುವ ಮತ್ತು ಅರ್ಜಿದಾರರು ಮದ್ಯವನ್ನು ಹೆಚ್ಚಿನ ಬೆಲೆ ಮಾರಾಟ ಮಾಡದಿರುವ ಅಂಶವನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಅರ್ಜಿದಾರರ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಿದರು.

ಕೊನೆಯೆಲ್ಲಿ ಪೊಲೀಸರು ಸುಮ್ಮನೆ ಪ್ರಕರಣ ದಾಖಲಿಸಿದ್ದಾರೆ. ಇಂತಹ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸುವ ಅಧಿಕಾರ ಪೊಲೀಸರಿಗೆ ಎಲ್ಲಿದೆ? ಅಬಕಾರಿ ಇಲಾಖೆಯ ಅಧಿಕಾರಿಗಳು ಕ್ರಮ ಜರುಗಿಸಬೇಕಿದೆ ಎಂದು ನ್ಯಾಯಮೂರ್ತಿಗಳು, ಸರ್ಕಾರ ಅಭಿಯೋಜಕರನ್ನು ಉದ್ದೇಶಿಸಿ ಖಾರವಾಗಿಯೇ ಹೇಳಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ನಟಿ ಉಮಾಶ್ರೀ ಎಚ್ಚರಿಕೆಗೆ ಹಿರಿಯ ರಂಗಕರ್ಮಿ ಪೆಚ್ಚು
ಚಕ್ರಭಾವಿ ವಿಎಸ್ಎಸ್ಎನ್ ಸೊಸೈಟಿ ಕೈ ವಶ