ಪುಕ್ಕಟ್ಟೆ ಕೊಡುಗೆಗಳಿಂದ ಬಡತನ ನಿವಾರಣೆ ಅಸಾಧ್ಯ : ಇನ್ಫಿ ಎನ್‌.ಆರ್‌.ನಾರಾಯಣ ಮೂರ್ತಿ

Published : Mar 13, 2025, 06:24 AM IST
Narayana Murthy

ಸಾರಾಂಶ

ಕೇವಲ ಉಚಿತ ಕೊಡುಗೆಗಳನ್ನು ಕೊಡುವುದರಿಂದ ದೇಶದಲ್ಲಿನ ಬಡತನವು ನಿರ್ಮೂಲನೆ ಅಸಾಧ್ಯ. ಉದ್ಯೋಗ ಸೃಷ್ಟಿಯಿಂದ ಮಾತ್ರವೇ ಅಭಿವೃದ್ಧಿ ಹೊಂದಲು ಆಗುವುದು’ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌.ನಾರಾಯಣ ಮೂರ್ತಿ ಹೇಳಿದ್ದಾರೆ.

 ಮುಂಬೈ: ‘ಕೇವಲ ಉಚಿತ ಕೊಡುಗೆಗಳನ್ನು ಕೊಡುವುದರಿಂದ ದೇಶದಲ್ಲಿನ ಬಡತನವು ನಿರ್ಮೂಲನೆ ಅಸಾಧ್ಯ. ಉದ್ಯೋಗ ಸೃಷ್ಟಿಯಿಂದ ಮಾತ್ರವೇ ಅಭಿವೃದ್ಧಿ ಹೊಂದಲು ಆಗುವುದು’ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌.ನಾರಾಯಣ ಮೂರ್ತಿ ಹೇಳಿದ್ದಾರೆ. 

ಈ ಮೂಲಕ ಉಚಿತ ಕೊಡುಗೆಗಳ ವಿರುದ್ಧ ದನಿ ಎತ್ತಿದ್ದಾರೆ. ಇಲ್ಲಿ ನಡೆದ ಟೈಕೂನ್‌ ಮುಂಬೈ 2025 ಸಮಾವೇಶದಲ್ಲಿ ಮಾತನಾಡಿದ ಮೂರ್ತಿ, ‘ಜೊತೆಗೆ ಕೇವಲ ಉಚಿತ ಕೊಡುಗೆಗಳನ್ನು ಕೊಟ್ಟರೆ ಬಡತನ ಮಾಯವಾಗುತ್ತದೆ ಎಂದು ಅಂದುಕೊಂಡಿದ್ದರೆ, ಅದು ಅಸಾಧ್ಯ. ಇಲ್ಲಿವರೆಗೆ ಈ ರೀತಿ ಉಚಿತ ಕೊಡುಗೆಗಳನ್ನು ಕೊಟ್ಟಿರುವ ಯಾವ ದೇಶವೂ ಬಡತನದಿಂದ ಹೊರಬಂದಿಲ್ಲ’ ಎಂದರು. 

‘ಇದರ ಬದಲು, ನಾವು ಹೆಚ್ಚೆಚ್ಚು ಉದ್ಯಮಗಳನ್ನು ಶುರು ಮಾಡಬೇಕು. ಈ ಮೂಲಕ ಹೆಚ್ಚು ಉದ್ಯೋಗ ಸೃಷ್ಟಿಸಬೇಕು. ಹೀಗಾದಲ್ಲಿ ಬಡತನವು ಬೆಳಗಿನ ಇಬ್ಬನಿಯಂತೆ ಮಾಯವಾಗುತ್ತದೆ ಎಂದು ಅಭಿಪ್ರಾಯ ಹೊರಹಾಕಿದರು. ಇನ್ನು 200 ಯೂನಿಟ್‌ ಉಚಿತ ವಿದ್ಯುತ್‌ ಉದಾಹರಣೆ ನೀಡಿದ ಮೂರ್ತಿ, ಉಚಿತ ವಿದ್ಯುತ್‌ನಿಂದ ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಾಗಿದೆಯೇ ಅಥವಾ ಮಕ್ಕಳ ಮೇಲೆ ಪೋಷಕರ ಕಾಳಜಿ ಹೆಚ್ಚಿದೆಯೇ ಎಂಬುದನ್ನು ಅರಿಯಲು 6 ತಿಂಗಳಿಗೊಮ್ಮೆ ಸಮೀಕ್ಷೆ ನಡೆಸಬಹುದು ಎಂದು ಸಲಹೆ ನೀಡಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವ
ಅಭಿವೃದ್ಧಿ ಪಥದತ್ತ ದೇವನಹಳ್ಳಿ ತಾಲೂಕು