ಪ್ರಜ್ವಲ್‌ ಕೇಸ್‌: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ-ವಿಜಯೇಂದ್ರ

Published : Apr 30, 2024, 10:13 AM IST
Vijayendra

ಸಾರಾಂಶ

ಏನೇ ಆದರೂ ಬಿಜೆಪಿ ಮೇಲೆ ಹಾಕುವುದು ಕಾಂಗ್ರೆಸ್‌ನವರ ಚಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ನಗರದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಹುಬ್ಬಳ್ಳಿ: ಏನೇ ಆದರೂ ಬಿಜೆಪಿ ಮೇಲೆ ಹಾಕುವುದು ಕಾಂಗ್ರೆಸ್‌ನವರ ಚಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ನಗರದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. 

ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದರು. ಬಿಜೆಪಿ, ಮೋದಿಯನ್ನು ಹೊಣೆ ಮಾಡುವುದು ಕಾಂಗ್ರೆಸ್‌ನವರ ಚಟ. 

ಪ್ರಜ್ಚಲ್‌ ವಿಚಾರದಲ್ಲಿ ಬಿಜೆಪಿ, ಮೋದಿ ಮೇಲೆ ಆರೋಪ ಮಾಡುವುದು ಸರಿ‌ಯಲ್ಲ. ಕಾಂಗ್ರೆಸ್‌ನವರಿಗೆ ಇದು ಶೋಭೆ ತರುವುದಿಲ್ಲ. ಇದರಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌