ರಾಜಧಾನಿ ಬೆಂಗಳೂರು ಸೇರಿ ಇಂದು 11 ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ, ಇತರೆಡೆ ಒಣಹವೆ

Published : Jan 19, 2025, 11:31 AM IST
Rain

ಸಾರಾಂಶ

ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಕೆಲವಡೆ ಸೋಮವಾರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಕೆಲವಡೆ ಸೋಮವಾರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಹೀಗಾಗಿ, ದಕ್ಷಿಣ ಒಳನಾಡಿನ ಹಲವು ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಮಂಜು ಮುಸುಕಿನ ವಾತಾವರಣ ಇರಲಿದೆ. ಮಂಗಳವಾರದಿಂದ ಬಹುತೇಕ ರಾಜ್ಯದಲ್ಲಿ ಒಣ ಹವೆ ಇರಲಿದೆ. ರಾಜ್ಯದ ಒಳನಾಡಿನ ಕೆಲವಡೆ ಮಂಜು ಮುಸುಕಿನ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ದೊಡ್ಡನಲ್ಲೂರಹಳ್ಳಿಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಭೂಮಿಪೂಜೆ
ಸರ್ಕಾರಿ ಶಾಲೆ ಮೇಲೆ ಅಪಪ್ರಚಾರ ಸಲ್ಲದು: ಸೈಯದ್ ಎಕ್ಬಾಲ್