ಜೋಳ, ರಾಗಿ ಖರೀದಿ ಬಾಕಿ ಹಣ 357 ಕೋಟಿ ರು. ಇಂದು ಬಿಡುಗಡೆ

Published : Aug 06, 2026, 12:00 PM IST
MSP

ಸಾರಾಂಶ

ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಯೋಜನೆಯಡಿ ರಾಜ್ಯ ಸರ್ಕಾರ ರೈತರಿಂದ ಖರೀದಿಸಿದ್ದ ರಾಗಿ, ಜೋಳದ ಬಾಕಿಯಲ್ಲಿ ₹357.39 ಕೋಟಿಯನ್ನು ಗುರುವಾರ ಬಿಡುಗಡೆಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ.

  ಬೆಂಗಳೂರು :  ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಯೋಜನೆಯಡಿ ರಾಜ್ಯ ಸರ್ಕಾರ ರೈತರಿಂದ ಖರೀದಿಸಿದ್ದ ರಾಗಿ, ಜೋಳದ ಬಾಕಿಯಲ್ಲಿ ₹357.39 ಕೋಟಿಯನ್ನು ಗುರುವಾರ ಬಿಡುಗಡೆಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ.

2025-26ನೇ ಸಾಲಿನಲ್ಲಿ ಎಂಎಸ್‌ಪಿ ಅಡಿ ರೈತರಿಂದ ಖರೀದಿಸಿದ್ದ ರಾಗಿ, ಜೋಳದ ಬಾಬ್ತು ₹1128.13 ಕೋಟಿ ಬಾಕಿ ಉಳಿಸಿಕೊಳ್ಳಲಾಗಿತ್ತು. ಇದರಲ್ಲಿ ₹357.39 ಕೋಟಿಯನ್ನು ಬಿಡುಗಡೆ ಮಾಡಲು ಆಹಾರ ಇಲಾಖೆಯು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ಬುಧವಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಹಿರಿತನದ ಆಧಾರದಲ್ಲಿ ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯವಾಗಲಿದೆ.

ಈಗಾಗಲೇ ₹2487.69 ಕೋಟಿ ಪಾವತಿಸಲಾಗಿತ್ತು

ಎಂಎಸ್‌ಪಿ ಅಡಿ ಪ್ರಸಕ್ತ ಸಾಲಿನಲ್ಲಿ ರಾಗಿ, ಜೋಳ, ಭತ್ತ ಖರೀದಿಸಿದ ರೈತರಿಗೆ ಈಗಾಗಲೇ ₹2487.69 ಕೋಟಿ ಪಾವತಿಸಲಾಗಿತ್ತು. ಭತ್ತ ಮಾರಾಟ ಮಾಡಿದ್ದ ರೈತರಿಗೆ ಪೂರ್ಣ ಪ್ರಮಾಣದಲ್ಲಿ ಹಣ ಸಂದಾಯವಾಗಿದ್ದು ರಾಗಿ ಮತ್ತು ಜೋಳ ಮಾರಾಟ ಮಾಡಿದ್ದವರಿಗೆ ₹1,128.13 ಕೋಟಿ ಪಾವತಿಸಬೇಕಿತ್ತು. ಅದರಲ್ಲಿ ಈಗ ₹357.39 ಕೋಟಿ ಪಾವತಿಸಲಿದ್ದರೂ ಇನ್ನೂ ಸಹಸ್ರಾರು ರೈತರಿಗೆ ₹770.74 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ರೈತರಿಗೆ ಎಂಎಸ್‌ಪಿ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆ ‘ಕನ್ನಡಪ್ರಭ’ ವಿಶೇಷ ವರದಿಗಳನ್ನು ಪ್ರಕಟಿಸಿ ಸರ್ಕಾರದ ಗಮನ ಸೆಳೆದಿತ್ತು.

ಕನ್ನಡಪ್ರಭ ವರದಿ ಪರಿಣಾಮ

(ಜೂ.17ರಂದು ಕನ್ನಡಪ್ರಭ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ವರದಿ ಮಾಡಿತ್ತು)

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರಾಜ್ಯದ 20%, ಬೆಂಗ್ಳೂರಿನ 48% ಮತದಾರರ ಹೆಸರು ಡಿಲೀಟ್‌!
ಹೆಚ್ಚಿನ ಬೆಲೆಗೆ ಚಿನ್ನಾಭರಣ ಸೇಲ್‌ನೆಪದಲ್ಲಿ 5 ಕೋಟಿ ವಂಚನೆ : ಕೇಸ್‌