ದೀಪಾವಳಿಗೆ ಪ್ರಯಾಣಿಕ ದಟ್ಟಣೆ ನಿವಾರಿಸಲು ಕ್ರಮ : ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Published : Oct 10, 2025, 08:43 AM IST
Dirtiest train

ಸಾರಾಂಶ

ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಬೆಂಗಳೂರು : ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಕೆಎಸ್‌ಆರ್ ಬೆಂಗಳೂರು- ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ (06255) ಅ.18, 21 ಮತ್ತು 25ರಂದು ಬೆಳಗ್ಗೆ 8.05 ಗಂಟೆಗೆ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2.45 ಗಂಟೆಗೆ ಚೆನ್ನೈ ತಲುಪಲಿದೆ.

ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್‌ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (06256) ಅ. 18, 21 ಮತ್ತು 25 ರಂದು ಸಂಜೆ 4.30 ಗಂಟೆಗೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಟು, ಅದೇ ದಿನ ರಾತ್ರಿ 10.45 ಗಂಟೆಗೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟೆ ಕಾಟ್ಪಾಡಿ, ಅರಕ್ಕೋಣಂ ತಿರುವಳ್ಳೂರ್ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲ್ಲಲಿದೆ. 11 ಸಾಮಾನ್ಯ ದ್ವಿತೀಯ ದರ್ಜೆಯ ಕೋಚ್‌, 1 ಎಸಿ ಚೇರ್ ಕಾರ್, 1 ಎಸಿ 3-ಟೈರ್ ಕೋಚ್, 4 ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್‌ ಹಾಗೂ 2 ಎಸ್‌ಎಲ್‌ಆರ್‌ಡಿ ಕೋಚ್‌ ಹೊಂದಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌
ನಟ ಯಶ್‌ಗೆ ಜಾರಿಯಾಗಿದ್ದ ಆದಾಯ ತೆರಿಗೆ ನೋಟಿಸ್‌ ರದ್ದು