‘ರಾಜ್ಯದ ಗಣತಿ ಹಿಂದುಗಳನ್ನು ಮತಾಂತರಕ್ಕೆ ಪ್ರೋತ್ಸಾಹಿಸುತ್ತೆ’ : ಜೋಶಿ

Published : Oct 03, 2025, 08:56 AM IST
Prahlad Joshi

ಸಾರಾಂಶ

ಸಾಮಾಜಿಕ ಹಾಗೂ ಆರ್ಥಿಕ ಗಣತಿ ಹೆಸರಿನಲ್ಲಿ ರಾಜ್ಯದಲ್ಲಿ ಹಿಂದೂಗಳನ್ನು ಮತಾಂತರ ಮಾಡಲು ಪ್ರೋತ್ಸಾಹಿಸುವಂತೆ ಗಣತಿ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಕೇಂದ್ರವೇ ಜಾತಿ ಗಣತಿ ಮಾಡಲು ನಿರ್ಧರಿಸಿದೆ. ಹೀಗಾಗಿ ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ ಎಂದರು.

 ಧಾರವಾಡ :  ಸಾಮಾಜಿಕ ಹಾಗೂ ಆರ್ಥಿಕ ಗಣತಿ ಹೆಸರಿನಲ್ಲಿ ರಾಜ್ಯದಲ್ಲಿ ಹಿಂದೂಗಳನ್ನು ಮತಾಂತರ ಮಾಡಲು ಪ್ರೋತ್ಸಾಹಿಸುವಂತೆ ಗಣತಿ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರವೇ ಜಾತಿ ಗಣತಿ ಮಾಡಲು ನಿರ್ಧರಿಸಿದೆ. ಹೀಗಾಗಿ ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಆದರೆ, ಇದೀಗ ನಡೆಯುತ್ತಿರುವ ಗಣತಿಯಲ್ಲಿ ವೈಯಕ್ತಿಕ ಪ್ರಶ್ನೆಗಳನ್ನು ಸೇರಿಸಲಾಗಿದೆ. ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಬ್ರಾಹ್ಮಣ ಅಂದರೇನು ಅರ್ಥ? ನೀವು ಯಾವುದಾದರೂ ಸಾಮಾಜಿಕ ಸಂಘಟನೆಗೆ ಸೇರಿದ್ದೀರಾ ಎನ್ನುವ ಪ್ರಶ್ನೆಗಳು ಬೇಕಿತ್ತಾ ಎಂದು ಪ್ರಶ್ನಿಸಿದರು.

ಜಾತಿಗೆ ಸಂಬಂಧಿಸಿದ ಮಾಹಿತಿ ನೀಡಲು ತಕರಾರಿಲ್ಲ. ಆದರೆ, ಅನಾವಶ್ಯಕ ಪ್ರಶ್ನೆಗಳಿಗೆ ನಮ್ಮ ತಕರಾರಿದೆ. ಹೀಗಾಗಿ ಅಂತಹ ಪ್ರಶ್ನೆಗಳಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಇಬ್ಭಾಗ ಮಾಡಬೇಕೆನ್ನುವ ಪ್ರಯತ್ನದಲ್ಲಿ ಜಾತಿ ಗಣತಿ ಎಂದು ಮತ್ತೊಮ್ಮೆ ಬೇಸರ ವ್ಯಕ್ತಪಡಿಸಿದರು.

ಸಿಎಂ ತಮ್ಮ ಸೀಟು ಉಳಿಸಿಕೊಳ್ಳಲು ಈ ಗಣತಿ ಮಾಡುತ್ತಿದ್ದಾರೆ. ಆದರೆ, ನಮಗೆ ಗಣತಿ ವಿರೋಧಿಗಳು ಎಂದು ಹೇಳುತ್ತಿದ್ದಾರೆ. ಒಕ್ಕಲಿಗ ಸ್ವಾಮಿಗಳು, ಡಿಕೆಶಿ ಇದ್ದ ಸಭೆಯಲ್ಲಿ ಗಣತಿ ಮುಂದೂಡಬೇಕೆಂದು ಹೇಳಿದರಲ್ಲವೇ? ಇದರ ಅರ್ಥವೇನು? ಹಾಗಾದರೆ ಡಿಕೆಶಿ ಗಣತಿ ವಿರೋಧಿ ಅಲ್ಲದೇ ಇನ್ನೇನು ಎಂದರು.

ನಾನೇ ಐದು ವರ್ಷ ಮುಖ್ಯಮಂತ್ರಿ ಎನ್ನುವ ಸಿದ್ದರಾಮಯ್ಯ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಡಿಸಿಎಂ ಡಿ.ಕೆ.ಶಿವಕುಮಾರ್‌ರ ಬೆಂಬಲಿಗರು ಮುಂದಿನ ತಿಂಗಳು ಸಿಎಂ ಬದಲಾವಣೆ ಎಂದು ಹೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಇಲ್ಲ ಎನ್ನುತ್ತಿದ್ದಾರೆ.

ಸಿಎಂ ಕುರ್ಚಿ ಹೋಗಲಿದೆ ಎನ್ನುವ ಭಯಕ್ಕೆ ಹಾಗೂ ರಾಹುಲ್ ಗಾಂಧಿ, ಸೋನಿಯಾ ಹಾಗೂ ಪ್ರಿಯಾಂಕಾರನ್ನು ಮೆಚ್ಚಿಸಲು ಜಾತಿ ಗಣತಿ ಮಾಡಲಾಗುತ್ತಿದೆ ಎಂದೂ ಜೋಶಿ ಆರೋಪಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕಾಸರಗೋಡು ಕನ್ನಡಿಗರ ಮೇಲೆ ನಾವು ಮಲಯಾಳಂ ಹೇರುತ್ತಿಲ್ಲ : ಕೇರಳ ಸಿಎಂ
2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ