ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

Published : Jun 26, 2025, 10:56 AM IST
Vidhan soudha

ಸಾರಾಂಶ

ರಾಜ್ಯ ಸರ್ಕಾರ ಕಲಾವಿದರ ಬಹು ವರ್ಷಗಳ ಬೇಡಿಕೆ ಈಡೇರಿಸಿದ್ದು ಹಿರಿಯ ಕಲಾವಿದರ ಮಾಸಾಶನವನ್ನು 2500 ರು.ಗಳಿಗೆ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ.

  ಬೆಂಗಳೂರು :  ರಾಜ್ಯ ಸರ್ಕಾರ ಕಲಾವಿದರ ಬಹು ವರ್ಷಗಳ ಬೇಡಿಕೆ ಈಡೇರಿಸಿದ್ದು ಹಿರಿಯ ಕಲಾವಿದರ ಮಾಸಾಶನವನ್ನು 2500 ರು.ಗಳಿಗೆ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿದೆ.

2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2 ಸಾವಿರ ರು.ಗಳಿಂದ 2500 ರು.ಗಳಿಗೆ ಹೆಚ್ಚಿಸಿ, ಮಾಸಾಶನಕ್ಕೆ ಬೇಕಾಗುವ ಒಟ್ಟು ಮೊತ್ತ 32.94 ಕೋಟಿ ರು.ಅನ್ನು ಮಂಜೂರು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಆದೇಶಿಸಿದೆ. ಇದರಿಂದಾಗಿ 60 ವರ್ಷ ಮೇಲ್ಪಟ್ಟ 12000ಕ್ಕೂ ಹೆಚ್ಚು ಮಂದಿ ಹಿರಿಯ ಕಲಾವಿದರ ಇದರ ಲಾಭ ಪಡೆಯಲಿದ್ದಾರೆ.

ಕಲಾವಿದರು ಹಲವು ವರ್ಷಗಳಿಂದ ಮಾಸಾಶನ ಹೆಚ್ಚಿಸುವಂತೆ ಮನವಿ ಮಾಡುತ್ತಲೇ ಬಂದಿದ್ದರು. ಕಳೆದ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಸಾಶನ ಹೆಚ್ಚಿಸುವ ಭರವಸೆ ನೀಡಿದ್ದರು. ಅಂತೆಯೇ ಈ ಬಾರಿಯ ಬಜೆಟ್‌ನಲ್ಲಿ ಮಾಸಾಶನ ಹೆಚ್ಚಿಸುವುದಾಗಿ ಹೇಳಿದ್ದರು. ಇದೀಗ ನುಡಿದಂತೆ ನಡೆದಿದ್ದು, ಜೂ. 25ರಿಂದಲೇ ಪರಿಷ್ಕೃತ ಮಾಸಾಶನ ಜಾರಿಗೆ ಬರಲಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬೆಂಗ್ಳೂರು 5 ಪಾಲಿಕೆಗೆ ಎಲೆಕ್ಷನ್‌ ನಡೆಸುವುದಕ್ಕೆ ಜೂ.30 ಡೆಡ್ಲೈನ್‌
ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌