ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌

Published : May 16, 2025, 11:19 AM IST
colonel sofia qureshi biography operation sindoor indian army woman hero

ಸಾರಾಂಶ

ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್‌ ಶಾ ವಿರುದ್ಧ ಕರ್ನಾಟಕದಲ್ಲೂ ಎಫ್‌ಐಆರ್‌ ದಾಖಲು ಮಾಡಲಾಗುವುದು.

ಬೆಂಗಳೂರು: ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್‌ ಶಾ ವಿರುದ್ಧ ಕರ್ನಾಟಕದಲ್ಲೂ ಎಫ್‌ಐಆರ್‌ ದಾಖಲು ಮಾಡಲಾಗುವುದು. ಈ ಸಂಬಂಧ ಕಾನೂನು ಪ್ರಕ್ರಿಯೆ ಪರಿಶೀಲಿಸಲಾಗುವುದು ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ತಿಳಿಸಿದರು. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವನ ವಿರುದ್ಧ ಎಫ್‌ಐಆರ್ ದಾಖಲಿಸಿ, ಕ್ರಮ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ಅವರಿಗೆ ಸೂಚಿಸಿದ್ದೇನೆ.

 ಬಿಜೆಪಿ ಮುಖಂಡನ ಹೇಳಿಕೆ ಕರ್ನಲ್ ಖುರೇಷಿ ಅವರಿಗಷ್ಟೇ ಅಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ. ಇಂಥ ಕೀಳು ಮನಸ್ಸು ಯಾರಿಗೂ ಬರಬಾರದು‌ ಎಂದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಕಾಸರಗೋಡು ಕನ್ನಡಿಗರ ಮೇಲೆ ನಾವು ಮಲಯಾಳಂ ಹೇರುತ್ತಿಲ್ಲ : ಕೇರಳ ಸಿಎಂ
2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ