ಮೇಕೆದಾಟಿಗೆ ತಮಿಳರು ಅಡ್ಡಿ ಮಾಡದಂತೆ ಮೋದಿಗೆ ದೇವೇಗೌಡ ಮನವಿ

Published : Apr 22, 2024, 08:21 AM ISTUpdated : Apr 22, 2024, 08:23 AM IST
HDD Modi

ಸಾರಾಂಶ

 ಮೇಕೆದಾಟು ಯೋಜನೆಯ ಅಗತ್ಯವಿದೆ. ಈ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡಿನವರು ಅಡ್ಡಿಪಡಿಸಬಾರದು. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ತಾವು ಮನವಿ ಮಾಡಿದ್ದಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಹಾಸನ :  ರಾಜ್ಯದಲ್ಲಿ ತೀವ್ರ ನೀರಿನ ಸಮಸ್ಯೆ ಇದೆ. ಹೀಗಾಗಿ, ಕಾವೇರಿ ನೀರಿನ ಹೆಚ್ಚುವರಿ ಬಳಕೆಗೆ ಮೇಕೆದಾಟು ಯೋಜನೆಯ ಅಗತ್ಯವಿದೆ. ಈ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡಿನವರು ಅಡ್ಡಿಪಡಿಸಬಾರದು. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ತಾವು ಮನವಿ ಮಾಡಿದ್ದಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಹೊಳೆನರಸೀಪುರ ತಾಲೂಕಿನ ನಗರನಹಳ್ಳಿಯಲ್ಲಿ ಮಾತನಾಡಿ, ಮೋದಿಯವರ ರಾಜ್ಯ ಭೇಟಿ ವೇಳೆ ಕಾವೇರಿ ವಿಚಾರವಾಗಿ ಚರ್ಚಿಸಿದ್ದೇನೆ. ಮೋದಿ ಕಾರ್ಯಕ್ರಮದ ವೇದಿಕೆಯಲ್ಲೇ ಈ ಬಗ್ಗೆ ಮಾತನಾಡಿದ್ದೇನೆ. ತಮಗೆ ಕಾವೇರಿ ನೀರಿನ ಸಮಸ್ಯೆ ಅರ್ಥವಾಗಿದೆ. ಈ ಬಗ್ಗೆ ಏನಾದರೂ ಮಾಡುತ್ತೇನೆ ಎಂದು ಮೋದಿಯವರು ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ನಾವು 28ಕ್ಕೆ 28 ಸ್ಥಾನಗಳನ್ನೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದೇನೆ. ಮೈತ್ರಿಕೂಟದ 28 ಸಂಸದರನ್ನು ಗೆಲ್ಲಿಸಿಕೊಂಡು ಮೋದಿ ಬಳಿ ಹೋಗೋಣ. ಕಾವೇರಿ ಸಮಸ್ಯೆಗೊಂದು ಪರಿಹಾರ ಹುಡುಕೋಣ. ನಾನು ಬದುಕಿರುವಾಗಲೇ ಈ ಯೋಜನೆ ಆಗಬೇಕು ಎಂದರು.

ನಾನು ರಾಜ್ಯದ ಎಲ್ಲಾ ಕಡೆ ಪ್ರಚಾರ ನಡೆಸಿ, ಹೋರಾಟ ಮಾಡುತ್ತಾ ಇದ್ದೇನೆ. ಮೋದಿ ಬಿಟ್ಟರೆ ಪ್ರಧಾನಿ ಆಗಲು ಬೇರೆ ಯಾರಿಗೂ ಈ ದೇಶದಲ್ಲಿ ಯೋಗ್ಯತೆ ಇಲ್ಲ ಎಂದು ಅವರು ಪ್ರತಿಪಾದಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ
ಕೋಗಿಲು ಶೆಡ್ ತೆರವಿನಲ್ಲಿ ಕೆಂಗಣ್ಣಿಗೆ ಗುರಿಯಾದ ಕರಿಗೌಡ