ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣ : ಜಿಂದಾಲ್‌ಗೆ ₹20 ಕೋಟಿಗೆ ಜಾಗ ದೊಡ್ಡ ಗೋಲ್ಮಾಲ್‌: ಬೆಲ್ಲದ್‌

Nirupama ks | Published : Aug 25, 2024 8:01 AM

ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್‌ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್‌ ಟೀಕಿಸಿದ್ದಾರೆ.

ಬೆಂಗಳೂರು :  ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿದ್ದು, ಇದೀಗ ಜಿಂದಾಲ್‌ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ ನೀಡುವ ಮೂಲಕ ಮತ್ತೊಂದು ಹಗರಣ ಮಾಡಿದೆ ಎಂದು ಶಾಸಕ ಅರವಿಂದ ಬೆಲ್ಲದ್‌ ಟೀಕಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಖನಿಜಭರಿತ ಜಾಗ ಇರುವ ಸಂಡೂರಿನಲ್ಲಿ ಸುಮಾರು 3,667 ಎಕರೆಯ ಪೈಕಿ 2 ಸಾವಿರ ಎಕರೆಯನ್ನು ಪ್ರತಿ ಎಕರೆಗೆ 1.20 ಲಕ್ಷ ರು.ಗೆ ಮತ್ತು 1,667 ಎಕರೆಯನ್ನು 1.50 ಲಕ್ಷ ರು.ಗೆ ಕೊಡುವ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಕೇವಲ 20 ಕೋಟಿ ರು.ಗೆ ಜೆಎಸ್‌ಡಬ್ಲ್ಯೂ ಕಂಪನಿಗೆ ಕೊಡಲಾಗುತ್ತಿದೆ. ಇದರ ಹಿಂದೆ ಬಹಳ ದೊಡ್ಡ ಗೋಲ್ಮಾಲ್ ಇದೆ ಎಂದು ಆರೋಪಿಸಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಮನೆ ಬಾಗಿಲಿಗೆ ಹಗರಣದ ತನಿಖೆ ಬಂದಿದೆ. ಮುಖ್ಯಮಂತ್ರಿಗಳ ಬಗ್ಗೆ ಇಡೀ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿಗಳು ಬಹಳ ಬೇಗನೆ ಮನೆಗೆ ಹೋಗುವ ಸಂದರ್ಭ ಬಂದಂತಿದೆ. ಸಿದ್ದರಾಮಯ್ಯನವರಿಗೆ ಕುರ್ಚಿ ಹೋಗುವ ಬಗ್ಗೆ ತಿಳಿದಿದೆ. ಈ ಸಂದರ್ಭದಲ್ಲಿ ಅವರು ಮತ್ತೊಂದು ದೊಡ್ಡ ಹಗರಣವನ್ನು ತಮ್ಮ ಮೇಲೆ ಎಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಕೇವಲ 15 ತಿಂಗಳಲ್ಲಿ ಅತ್ಯಂತ ಭ್ರಷ್ಟ ಎಂದು ಜನರಿಂದ ಬಿಂಬಿತವಾಗಿದೆ ಎಂದು ಕಿಡಿಕಾರಿದರು.