ವೆಸ್ಟ್‌ನೈಲ್‌ ಸೋಂಕು: ಗಡಿಯಲ್ಲಿ ಕಟ್ಟೆಚ್ಚರ

Published : May 20, 2024, 08:38 AM IST
home remedies for dengue fever

ಸಾರಾಂಶ

ನೆರೆಯ ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರದ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಾದ ಮೂಲೆಹೊಳೆ ಚೆಕ್‌ ಪೋಸ್ಟ್‌ನಲ್ಲಿ ತಾಲೂಕು ಆರೋಗ್ಯ ಇಲಾಖೆ ಕಟ್ಟೆಚ್ಚರ

ಗುಂಡ್ಲುಪೇಟೆ: ನೆರೆಯ ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರದ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಾದ ಮೂಲೆಹೊಳೆ ಚೆಕ್‌ ಪೋಸ್ಟ್‌ನಲ್ಲಿ ತಾಲೂಕು ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಬಳಿಯ ಕಾಡಂಚಿನ ಗ್ರಾಮಗಳ ಜನರಿಗೆ ವೆಸ್ಟ್‌ನೈಲ್‌ ಬಗ್ಗೆ ಆರೋಗ್ಯ ಸಿಬ್ಬಂದಿ ಅರಿವು ಮೂಡಿಸುತ್ತಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಂಚಿನ ತಾಲೂಕಿನ ಮದ್ದೂರು, ಮದ್ದೂರು ಕಾಲೋನಿ, ಕಗ್ಗಳದಹುಂಡಿ, ಬೇರಂಬಾಡಿ, ಬೀಚನಹಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ತಂಡ ಮನೆ ಮನೆಗೆ ತೆರಳಿ ವೆಸ್ಟ್ ನೈಲ್ ಸೋಂಕು ಜ್ವರದ ಬಗ್ಗೆ ತಪಾಸಣೆ ನಡೆಸಿ, ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಟಾಂ ಟಾಂ ಶಬ್ದ: ವೆಸ್ಟ್ ನೈಲ್ ಸೋಂಕು ಜ್ವರ ವೈರಾಣುವಿನಿಂದ ಬರುವ ರೋಗವಾಗಿದ್ದು, ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಅಧಿಕ ಜ್ವರ, ತಲೆನೋವು, ಮೈಕೈ ನೋವು, ಕೀಲು ನೋವು, ಕುತ್ತಿಗೆ ಬಿಗಿತ, ನಡುಕ, ಸೆಳೆತ ಮತ್ತು ಸ್ನಾಯು ದೌರ್ಬಲ್ಯ ಉಂಟಾದವರು ಕೂಡಲೇ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಕಾಡಂಚಿನ ಹಳ್ಳಿಗಳಲ್ಲಿ ಟಾಂ ಟಾಂ ಮೂಲಕ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುತ್ತಿದೆ. ವೆಸ್ಟ್ ನೈಲ್ ಸೋಂಕಿನ ಬಗ್ಗೆ ಗ್ರಾಮಸ್ಥರು ಆತಂಕ ಪಡಬಾರದು. ಮುಂಜಾಗ್ರತಾ ಕ್ರಮಗಳಿಂದ ರೋಗವನ್ನು ತಡೆಗಟ್ಟಲು ಸಾಧ್ಯ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

ಎಲ್ಲೆಡೆ ಜಾಗೃತಿ: ಕೇರಳದಲ್ಲಿ ವೆಸ್ಟ್ ನೈಲ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೋಂಕು ನಿಲ್ಲುವ ತನಕ ಕಾಡಂಚಿನ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಶ ಹೇಳಿದರು. 

 ಕನ್ನಡಪ್ರಭದೊಂದಿಗೆ ಮಾತನಾಡಿ, ವೆಸ್ಟ್‌ ನೈಲ್‌ ಸೋಂಕು ಇಲ್ಲಿಯ ತನಕ ಕಂಡು ಬಂದಿಲ್ಲ. ಬರೋದು ಕೂಡ ಡೌಟು. ಆದರೆ ಸೋಂಕಿನ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದರು. 

ಹಂಗಳ, ಕಗ್ಗಳದಹುಂಡಿ, ಬರಗಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಜನರಲ್ಲಿ ಜ್ವರ ಬಂದರೆ ತಪಾಸಣೆ ಮಾಡಿಸಿಕೊಳ್ಳಿ ಎಂದು ಆರೋಗ್ಯ ಸಿಬ್ಬಂದಿ ತಂಡ ಮನವಿ ಮಾಡುತ್ತಿದ್ದಾರೆ ಎಂದರು 

 ವೆಸ್ಟ್‌ ನೈಲ್‌ ಸೋಂಕಿನ ಬಗ್ಗೆ ಜನರಲ್ಲಿ ಭಯ ಬೇಡ, ಜನರ ಜೊತೆಗೆ ಆರೋಗ್ಯ ಇಲಾಖೆ ಸದಾ ನಿಮ್ಮೊಂದಿಗೆ ಇರಲಿದೆ. ಸೋಂಕು ಎದುರಿಸಲು ಆರೋಗ್ಯ ಇಲಾಖೆ ಸಜ್ಜುಗೊಂಡಿದೆ ಎಂದು ಅವರು ಹೇಳಿದರು 

ರಾಜ್ಯದಲ್ಲಿ ವೆಸ್ಟ್‌ನೈಲ್‌ ಸೋಂಕು ಇಲ್ಲಿಯ ತನಕ ಕಂಡು ಬಂದಿಲ್ಲ. ಬರೋದು ಕೂಡ ಡೌಟು. ಆದರೆ ಸೋಂಕಿನ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

- ಡಾ.ಅಲೀಂ ಪಾಶಾ, ತಾಲೂಕು ಆರೋಗ್ಯಾಧಿಕಾರಿ, ಗುಂಡ್ಲುಪೇಟೆ

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ