ಮಹಿಳೆಯರಿಗೂ ಪುರುಷರಷ್ಟೇ ಸಮಾನ ಹಕ್ಕು ಇವೆ - ಲಿಂಗ ತಾರತಮ್ಯ ಇಲ್ಲದ ಸಮಾಜ ಅಗತ್ಯ: ಹೈಕೋರ್ಟ್‌

Published : Jan 23, 2025, 06:18 AM IST
Highcourt

ಸಾರಾಂಶ

ಸಾಂವಿಧಾನಿಕವಾಗಿ ಪುರುಷರಷ್ಟೇ ಸಮಾನ ಹಕ್ಕುಗಳು ಮಹಿಳೆಯರಿಗೆ ಇವೆ. ಆದರೆ ವಾಸ್ತವವಾಗಿ ಪತಿ-ಪತ್ನಿ ನಡುವಿನ ವ್ಯಾಜ್ಯದಲ್ಲಿ ಪತ್ನಿಯಲ್ಲದೆ ಪತಿಯೂ ಹಾನಿಗೊಳಗಾಗುತ್ತಾರೆ. ಹಾಗಾಗಿ, ಸದ್ಯ ಲಿಂಗ ತಾರತಮ್ಯವಿಲ್ಲದ ಸಮಾಜದ ಅಗತ್ಯ ತುರ್ತಾಗಿದೆ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

  ಬೆಂಗಳೂರು : ಸಾಂವಿಧಾನಿಕವಾಗಿ ಪುರುಷರಷ್ಟೇ ಸಮಾನ ಹಕ್ಕುಗಳು ಮಹಿಳೆಯರಿಗೆ ಇವೆ. ಆದರೆ ವಾಸ್ತವವಾಗಿ ಪತಿ-ಪತ್ನಿ ನಡುವಿನ ವ್ಯಾಜ್ಯದಲ್ಲಿ ಪತ್ನಿಯಲ್ಲದೆ ಪತಿಯೂ ಹಾನಿಗೊಳಗಾಗುತ್ತಾರೆ. ಹಾಗಾಗಿ, ಸದ್ಯ ಲಿಂಗ ತಾರತಮ್ಯವಿಲ್ಲದ ಸಮಾಜದ ಅಗತ್ಯ ತುರ್ತಾಗಿದೆ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದ ಹಿರಿಯ ಸಿವಿಲ್‌ ನ್ಯಾಯಾಲಯದ ಮುಂದೆ ನಡೆಯುತ್ತಿದೆ. ಈ ನ್ಯಾಯಾಲಯ ಶಿವಮೊಗ್ಗದ ಹೊಸನಗರದಲ್ಲಿರುವ ತನ್ನ ಮನೆಯಿಂದ 130 ಕಿ.ಮೀ ದೂರದಲ್ಲಿದೆ. ನರಸಿಂಹರಾಜಪುರದ ನ್ಯಾಯಾಲಯದ ವಿಚಾರಣೆಗೆ ಹೋಗಿಬರಲು ಕಷ್ಟವಾಗುತ್ತದೆ. ಹೀಗಾಗಿ, ಶಿವಮೊಗ್ಗದ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಬೇಕು ಎಂದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ಡಾ. ಚಿಲ್ಲಾಕುರ್‌ ಸುಮಲತಾ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಚಿಕ್ಕಮಗಳೂರಿಗೆ ತೆರಳಲು ತನಗೆ ಸಮಸ್ಯೆಯಾಗುತ್ತದೆ ಎಂದು ಅರ್ಜಿದಾರೆ ಹೇಳುತ್ತಿದ್ದಾರೆ. ಆದರೆ, ಪ್ರಕರಣದ ವಿಚಾರಣೆಯನ್ನು ಶಿವಮೊಗ್ಗಕ್ಕೆ ವರ್ಗಾಯಿಸಿದರೆ, ಇಬ್ಬರು ಅಪ್ರಾಪ್ತ ಮಕ್ಕಳನ್ನು (ಅರ್ಜಿದಾರೆ ಜೊತೆಗಿನ ವಿವಾಹ ಸಂಬಂಧದಿಂದ ಜನಿಸಿರುವ) ನೋಡಿಕೊಳ್ಳುತ್ತಿರುವ ಪತಿಗೆ ಮತ್ತಷ್ಟು ತೊಂದರೆಯಾಗಲಿದೆ ಎಂದು ಪೀಠ ಹೇಳಿದೆ.

ವಿಚಾರಣೆ ವೇಳೆ ಪತಿಯ ಪರ ವಕೀಲ, ಅರ್ಜಿದಾರೆಯ ಜೊತೆಗಿನ ವಿವಾಹದಿಂದ ಜನಿಸಿರುವ ಏಳು ಮತ್ತು ಒಂಬತ್ತು ವರ್ಷದ ಎರಡು ಮಕ್ಕಳನ್ನು ಪತಿ ನೋಡಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಊಟ ತಯಾರಿಸಿ ಉಣಬಡಿಸುವ, ಶಾಲೆಗೆ ಕಳುಹಿಸುವುದು ಸೇರಿ ಇತ್ಯಾದಿ ಕೆಲಸಗಳನ್ನು ಪತಿ ನೋಡಿಕೊಳ್ಳುತ್ತಿದ್ದಾರೆ. ಹೀಗಾಗಿ, ಪ್ರಕರಣದ ವಿಚಾರಣೆಯನ್ನು ಶಿವಮೊಗ್ಗಕ್ಕೆ ವರ್ಗಾಯಿಸಿದರೆ ಅಲ್ಲಿಗೆ ತೆರಳಲು ಅವರು ಸಾಕಷ್ಟು ಓಡಾಟ ಮಾಡಬೇಕಾಗುತ್ತದೆ. ಇದು ಸಾಕಷ್ಟು ಸಮಸ್ಯೆ ಉಂಟು ಮಾಡಲಿದೆ ಎಂದು ವಿವರಿಸಿದರು.

ಈ ವಾದ ಪರಿಗಣಿಸಿದ ನ್ಯಾಯಪೀಠ, ಮಹಿಳೆಯ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ
4 ರಿಂದ 7 ಲಕ್ಷಕ್ಕೆ ಒತ್ತುವರಿ ಸೈಟ್ ಖರೀದಿಸಿದ್ದ ಕೋಗಿಲು ಸಂತ್ರಸ್ತರು