ಕನ್ನಡಪ್ರಭವಾರ್ತೆ ಸೋಮವಾರಪೇಟೆ
ದಾನಿಗಳಾದ ಕಿರಗಂದೂರು ಎ.ಎನ್.ಪದ್ಮನಾಭ, ಯುವ ವೇದಿಕೆ ಅಧ್ಯಕ್ಷ ಸುರೇಶ್ ಚಕ್ರವರ್ತಿ, ಗೌರವಾಧ್ಯಕ್ಷ ಬಿ.ಜೆ.ದೀಪಕ್, ರಾಜ್ಯ ಅಮೇಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬಿ.ಸಿ.ಸುರೇಶ್, ಹಿರಿಯ ಕಬಡ್ಡಿ ಆಟಗಾರ ಮಂಜೂರು ತಮ್ಮಣಿ, ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ಎಸಿಎಫ್ ಗಾನಶ್ರೀ, ಯುವ ವೇದಿಕೆಯ ಪದಾಧಿಕಾರಿಗಳು ಬಹುಮಾನ ವಿತರಿಸಿದರು.ಬೆಸ್ಟ್ ರೈಡರ್ ಕಾಸರಗೋಡು ತಂಡದ ವಿಶ್ವರಾಜ್, ಬೆಸ್ಟ್ ಡಿಫೆಂಡರ್ ರೈಸಿಂಗ್ ಬುಲ್ಸ್ ತಂಡದ ದೀಪಕ್, ಬೆಸ್ಟ್ ಆಲ್ರೌಂಡರ್ ಬುಲ್ಸ್ ತಂಡದ ಆಶಿಶ್ ಮಲ್ಲಿಕ್, ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಸ್ಟ್ ರೈಡರ್ ಬೆಳೆಗಾವಿ ಜಿಲ್ಲೆಯ ಜೈ ಮಹಾಕಾಳಿ ತಂಡದ ಅಮೂಲ್ಯ ಪಾಟೀಲ್, ಬೆಸ್ಟ್ ಕ್ಯಾಚರ್ ದಕ್ಷಿಣ ಕನ್ನಡ ತಂಡದ ಮಹಾಲಕ್ಷೀ ಪಡೆದರು.ರಾಜ್ಯ ಮಟ್ಟದ ಮಹಿಳಾ ಕಬಡ್ಡಿ ಪ್ರಶಸ್ತಿಯನ್ನು ಬೆಳಗಾವಿ ಜೈ ಮಹಾಕಾಳಿ ತಂಡ ಪಡೆಯಿತು. ದ್ವಿತೀಯ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲಾ ತಂಡ ಪಡೆಯಿತು.ಭಾನುವಾರ ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೆಮಿಫೈನಲ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಮಡಿಕೇರಿ ಶಾಸಕ ಡಾ.ಮಂತರ್ಗೌಡ, ಜೆಡಿಎಸ್ ಮುಖಂಡ ನಿಖಿಲ್ ಕುಮಾರ ಸ್ವಾಮಿ. ಹುಣಸೂರು ಶಾಸಕ ಹರೀಶ್ ಗೌಡ ಶುಭಕೋರಿದರು. ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನದ ಹಾಸನ ಶಾಖ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ದಾನಿಗಳಾದ ಹರಪಳ್ಳಿ ರವೀಂದ್ರ, ಹಿರಿಯ ವಕೀಲ ಚಂದ್ರಮೌಳಿ, ವಿ.ಎಂ.ವಿಜಯ ಮತ್ತಿತರ ಗಣ್ಯರು ಇದ್ದರು. ಯುವ ವೇದಿಕೆಯ ಪದಾಧಿಕಾರಿಗಳು, ತೀರ್ಪುಗಾರರು, ದಾನಿಗಳು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕೂತಿ ದಿವಾಕರ್, ಗುರುರಾಜ್ ಶಿರಸಿ, ಶೇಖರ್ ಮೂರ್ತಿ ಬೆಂಗಳೂರು ನಿರೂಪಿಸಿದರು.