ಕನ್ನಡಪ್ರಭ ವಾರ್ತೆ ಮಡಿಕೇರಿ
ಅವರು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ಕೊಡಗು ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಆಶ್ರಯದಲ್ಲಿ ತಾಲೂಕು ಸಂಘಗಳ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕೊಡಗು ಜಿಲ್ಲೆಯ ಸೌಂದರ್ಯ ತಜ್ಞರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು ಒಗ್ಗಟ್ಟಿನ ಮೂಲಕ ತಮ್ಮ ಸಮಸ್ಯೆಗಳ ಪರಿಹಾರ ಸಾಧ್ಯ ಎಂದರು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ನಗರಸಭಾ ಸದಸ್ಯರಾದ ಸವಿತಾ ರಾಕೇಶ್ ಮಾತನಾಡಿ ಕಟ್ಟುಪಾಡುಗಳನ್ನು ಬಿಟ್ಟು ಸಮಾಜದಲ್ಲಿ ಸ್ವಾವಲಂಬಿ ಬದುಕು ಕಾಣುವ ಮಹಿಳೆಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೂಲಕ ಕುಟುಂಬದಲ್ಲಿ ಆರ್ಥಿಕ ಸಬಲೀಕರಣ ಸಾಧ್ಯ. ಪ್ರತಿ ಮನೆಗಳು ಯಶಸ್ಸು ಕಂಡಲ್ಲಿ ಮಾತ್ರ ಸಮಾಜದ ಅಭಿವೃದ್ಧಿ ಏಳಿಗೆ ಕಾಣಬಹುದು ಎಂದರು.
ಜಿಲ್ಲಾ ಬ್ಯುಟಿಷಿಯನ್ ಅಸೋಸಿಯೇಷನ್ ಗೌರವಾಧ್ಯಕ್ಷೆ ವನಿತಾ ಚಂದ್ರಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧಡೆಯಲ್ಲಿ ಸಂಕಷ್ಟದಲ್ಲಿರುವ ಸೌಂದರ್ಯ ತಜ್ಞರ ಕ್ಷೇಮಾಭಿವೃದ್ಧಿ ಸಲುವಾಗಿ ಸರ್ಕಾರದಿಂದ ಅನುದಾನದ ಅಗತ್ಯತೆ ಇದೆ. ಈ ಸಂಬಂಧ ಕ್ಷೇತ್ರ ಶಾಸಕರ ಮೂಲಕ ಜಿಲ್ಲೆಯಿಂದ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸುವ ಚಿಂತನೆ ಹೊಂದಿರುವುದಾಗಿ ತಿಳಿಸಿದರು.
ಜಿಲ್ಲಾ ಸಂಘದ ಉಪಾಧ್ಯಕ್ಷೆ ಮಿನಾಸ್ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಪವಿತ್ರ, ಖಜಾಂಚಿ ವೈಭವಿ
ಕ್ರೀಡಾಕೂಟದಲ್ಲಿ ತ್ರೋಬಾಲ್, ಚಮಚದಲ್ಲಿ ನಿಂಬೆಹಣ್ಣು ಓಟ, ಹಗ್ಗ ಜಗ್ಗಾಟ, ಶಾರ್ಟ್ ಪುಟ್, ಓಟದ ಸ್ಪರ್ಧೆ, ಗ್ಲಾಸ್ ಪಿರಮಿಡ್ , ಬಾಲ್ ಪಾಸಿಂಗ್ ಬೇಸಿಕಲ್ ಚೆಯರ್ ಮತ್ತಿತರ ಸ್ಪರ್ಧೆಗಳು ಜರುಗಿದವು. ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಸೇರಿದಂತೆ ಜಿಲ್ಲೆಯ ನಾಲ್ಕು ತಂಡಗಳ 100 ಕ್ಕೂ ಅಧಿಕ ಸೌಂದರ್ಯ ತಜ್ಞರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.