- ಚನ್ನಗಿರಿಯಲ್ಲಿ ವಿವಿಧ ಇಲಾಖೆ, ಸಂಘ-ಸಂಸ್ಥೆಗಳಿಂದ ವಿಶ್ವ ಯೋಗ ದಿನ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಶುಕ್ರವಾರ ಬೆಳಗ್ಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಪತಂಜಲಿ ಯೋಗ ಸೇವಾ ಕೇಂದ್ರ, ಚನ್ನಮ್ಮಾಜಿ ಯೋಗ ಕೇಂದ್ರ, ಲಯನ್ಸ್ ಕ್ಲಬ್, ಶ್ರೀ ದೈವ ಸಂಸ್ಕೃತಿ ಪ್ರತಿಷ್ಠಾನ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಜನರು ಪ್ರತಿದಿನ ಬೆಳಗ್ಗೆ ಯೋಗ, ವ್ಯಾಯಾಮ, ಧ್ಯಾನಗಳನ್ನು ಮಾಡಬೇಕು. ಇದರಿಂದ ಮನಸ್ಸು ಚಂಚಲತೆಯಿಂದ ಏಕಾಗ್ರತೆಯತ್ತ ಬರುವುದಲ್ಲದೇ, ಉತ್ತಮವಾದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಒತ್ತಡಗಳ ಕೆಲಸದಿಂದ ಮಾನಸಿಕ ನೆಮ್ಮದಿ ಕೆಡಿಸಿಕೊಳ್ಳುತ್ತಿದ್ದಾರೆ. ಪ್ರತಿಯೊಬ್ಬ ನಾಗರೀಕನು ಯೋಗ, ವ್ಯಾಯಾಮ ಧ್ಯಾನಗಳನ್ನು ಮಾಡುತ್ತ ಕಾಯಿಲೆಗಳಿಂದಲೂ ದೂರ ಇರಬಹುದಾಗಿದೆ ಎಂದು ಹೇಳಿದರು.ಪ್ರಧಾನ ಸಿವಿಲ್ ನ್ಯಾಯಾಧೀಶ ಸಿದ್ದಲಿಂಗಯ್ಯ ಗಂಗಾಧರ ಮಠ್ ಮಾತನಾಡಿ ಪ್ರತಿದಿನ ಬೆಳಗಿನ ಸಮಯ ಮತ್ತು ಸಂಜೆಯ ಸಮಯದಲ್ಲಿ ಯೋಗಭ್ಯಾಸ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
- - - -21ಕೆಸಿಎನ್ಜಿ1: ವಿಶ್ವ ಯೋಗ ದಿನ ಕಾರ್ಯಕ್ರಮ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ನೆರವೇರಿಸಿದರು. -21ಕೆಸಿಎನ್ಜಿ2: ಚನ್ನಗಿರಿ ಪಟ್ಟಣದಲ್ಲಿ ವಿಶ್ವ ಯೋಗ ದಿನ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಯೋಗಭ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಾಸನ ಮಾಡಿದರು.