ನಿರಂತರ ಕಲಿಕೆಯಿಂದ ಉತ್ತಮ ಸ್ಥಾನಮಾನ: ಇಸ್ರೋ ವಿಜ್ಞಾನಿ ಬೀರೇಶ್

KannadaprabhaNewsNetwork |  
Published : May 19, 2025, 12:26 AM IST
ಪೊಟೋ: 17ಎಸ್‌ಎಂಜಿಕೆಪಿ02ರಿಪ್ಪನಪೇಟೆ ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗವು ಪ್ರಸಕ್ತ ಸಮಾಜದಲ್ಲಿ ಗ್ರಂಥಾಲಯ ಜ್ಞಾನದ ಪಾತ್ರ ಕುರಿತು ಕಾರ್ಯಾಗಾರ ನಡೆಯಿತು.  | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದ್ಯತೆ, ವಿಫುಲ ಅವಕಾಶಗಳಿವೆ. ಆದರೆ, ವಿದ್ಯಾರ್ಥಿಗಳು ಕಾಲಕ್ಕೆ ಅನುಗುಣವಾಗಿ ನಿರಂತರ ಅಧ್ಯಯನಶೀಲರಾಗುವುದು ಮುಖ್ಯವಾಗಿದೆ ಎಂದು ಬೆಂಗಳೂರು ಇಸ್ರೋ ಮಾಹಿತಿ ತಂತ್ರಜ್ಞಾನ ವಿಭಾಗದ ವಿಜ್ಞಾನಿ ಬೀರೇಶ್ ಅಭಿಪ್ರಾಯಪಟ್ಟರು.

ಹೊಸನಗರ: ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದ್ಯತೆ, ವಿಫುಲ ಅವಕಾಶಗಳಿವೆ. ಆದರೆ, ವಿದ್ಯಾರ್ಥಿಗಳು ಕಾಲಕ್ಕೆ ಅನುಗುಣವಾಗಿ ನಿರಂತರ ಅಧ್ಯಯನಶೀಲರಾಗುವುದು ಮುಖ್ಯವಾಗಿದೆ ಎಂದು ಬೆಂಗಳೂರು ಇಸ್ರೋ ಮಾಹಿತಿ ತಂತ್ರಜ್ಞಾನ ವಿಭಾಗದ ವಿಜ್ಞಾನಿ ಬೀರೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗವು ಪ್ರಸಕ್ತ ಸಮಾಜದಲ್ಲಿ ಗ್ರಂಥಾಲಯ ಜ್ಞಾನದ ಪಾತ್ರ ಕುರಿತಂತೆ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ನಾಗರೀಕತೆ ಜೊತೆಗೆ ತಂತ್ರಜ್ಞಾನ ಸಹ ಬೆಳೆಯುತ್ತಿದೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಗಳು ಇಂದು ಎಲ್ಲೆಡೆ ಹಾಸುಹೊಕ್ಕಿವೆ. ಬಾಹ್ಯಾಕಾಶ, ಸೇನೆ, ಆರೋಗ್ಯ, ಬ್ಯಾಂಕಿಂಗ್, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ಕಬಂಧಬಾಹು ಚಾಚಿದೆ. ಈ ವಿಭಾಗದಲ್ಲಿ ಕಲಿತ ವಿದ್ಯಾರ್ಥಿಗಳು ಹೆಚ್ಚಿನ ಕಲಿಕಾ ನಿರತರಾಗಿ ಉನ್ನತ ಸ್ಥಾನಮಾನ ಅಲಂಕರಿಸಬಹುದಾಗಿದೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರವು ಇಂದು ವಿಶ್ವ ಮಾನ್ಯತೆ ಪಡೆದಿದ್ದು, ಪದವಿ ಪೂರೈಸಿದ ವಿದ್ಯಾರ್ಥಿಗಳು ನಿರಂತರ ಓದಿನ ಮೂಲಕ ತಮ್ಮ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಸಾಹಿತ್ಯದಿಂದ ಮಾತ್ರ ಮಾನವನ ವಿಕಸನ ಸಾಧ್ಯ, ಅದಕ್ಕಾಗಿ ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ಪುಸ್ತಕ ಸಂಸ್ಕೃತಿಯನ್ನು ಬೆಳೆಸಬೇಕಾಗಿದೆ ಎಂಬ ಸಲಹೆ ನೀಡಿದರು.

ಪ್ರಾಂಶುಪಾಲ ಡಾ. ಕೆ. ಉಮೇಶ್ ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದು, ಕಾಲೇಜಿನ ಐಕ್ಯೂಎಸಿ ಸಂಚಾಲಕ ಅಧ್ಯಾಪಕ ಡಿ. ಮಂಜುನಾಥ್, ಪತ್ರಿಕಾ ಪ್ರತಿನಿಧಿ ರಾಘವೇಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ