ವಿಜ್ಞಾನದ ಮಧ್ಯೆ ಮಕ್ಕಳಿಗೆ ಬೇರೆ ಕೌಶಲ ಅಗತ್ಯ

KannadaprabhaNewsNetwork |  
Published : Sep 22, 2024, 01:47 AM IST
ಯುತ್‌ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ: ನಾಗಲೋಟದಲ್ಲಿ ಬೆಳೆಯುತ್ತಿರುವ ವಿಜ್ಞಾನದ ಮಧ್ಯದಲ್ಲಿ ನಮ್ಮ ಮಕ್ಕಳು ಬೆಳೆಯಬೇಕಾದರೆ ಅವರಿಗೆ ಶಿಕ್ಷಣದ ಜೊತೆಗೆ ಬೇರೆ ಬೇರೆ ಕೌಶಲ್ಯ, ತಂತ್ರಜ್ಞಾನ ಕಲಿಸುವುದು ಅನಿವಾರ್ಯವಾಗಿದೆ ಎಂದು ಎಚ್‌.ಜಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ: ನಾಗಲೋಟದಲ್ಲಿ ಬೆಳೆಯುತ್ತಿರುವ ವಿಜ್ಞಾನದ ಮಧ್ಯದಲ್ಲಿ ನಮ್ಮ ಮಕ್ಕಳು ಬೆಳೆಯಬೇಕಾದರೆ ಅವರಿಗೆ ಶಿಕ್ಷಣದ ಜೊತೆಗೆ ಬೇರೆ ಬೇರೆ ಕೌಶಲ್ಯ, ತಂತ್ರಜ್ಞಾನ ಕಲಿಸುವುದು ಅನಿವಾರ್ಯವಾಗಿದೆ ಎಂದು ಎಚ್‌.ಜಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.

ಬಂದಾಳ ರಸ್ತೆಯ ವಿವೇಕ್ ಇಂಟರ್‌ನ್ಯಾಷನಲ್‌ ಪಬ್ಲಿಕ್ ಶಾಲೆಯಲ್ಲಿ ಶನಿವಾರ ನಡೆದ ಯೂತ್ ಫೆಸ್ಟಿವಲ್ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಶಿಕ್ಷಕರಿಗಿಂತ ಹೆಚ್ಚು ಸಮಯವನ್ನು ಕಳೆಯುವುದು ಪಾಲಕರ ಬಳಿ. ಶಿಕ್ಷಕರಷ್ಟೇ ಜವಾಬ್ದಾರಿಯನ್ನ ಪಾಲಕರು ಮಕ್ಕಳ ಮೇಲೆ ಇಡಬೇಕು. ವಿಜ್ಞಾನದ ಭರಾಟೆಯಲ್ಲಿ ಮಕ್ಕಳಲ್ಲಿ ಮಾನವೀಯ ಸಂಬಂಧಗಳು, ವಿವೇಚನಾ ಶಕ್ತಿ, ಸೃಜನಶೀಲ ಚಟುವಟಿಕೆಗಳು ಕುಸಿತಗೊಳ್ಳುತ್ತಿವೆ. ಇದರ ಬಗ್ಗೆ ಹೆಚ್ಚು ಪಾಲಕರು ಮತ್ತು ಶಿಕ್ಷಕರು ಗಮನಹರಿಸಬೇಕು. ಉತ್ತಮ ಆರೋಗ್ಯಕರವಾಗಿರುವ ವಾತಾವರಣ ಮಕ್ಕಳಿಗೆ ಮೂಡಿಸಿ ಅವರ ವ್ಯಕ್ತಿತ್ವದ ಬೆಳವಣಿಗೆಯನ್ನ ನಿರ್ಮಾಣ ಮಾಡಬೇಕು ಎಂದರು.

ಸಂಸ್ಥೆಯ ಮಾರ್ಗದರ್ಶಕ ಎಚ್.ಜಿ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಮಾತನಾಡಿ, ಮಕ್ಕಳಿಗೆ ನೀಡುವ ವಿವಿಧ ರೀತಿಯ ಕೌಶಲಗಳಿಂದ ವಿವೇಚನಾ ಶಕ್ತಿ ಮತ್ತು ಆಲೋಚನಾ ಶಕ್ತಿ ವೃದ್ಧಿಯಾಗುತ್ತದೆ. ಇದರಿಂದ ಶಾಲೆಯ ಕಲಿಕೆಯು ಅತ್ಯಂತ ಸುಲಭವಾಗಿ ರೂಪಗೊಳ್ಳುತ್ತದೆ ಎಂದರು.

ಶಾಲೆಯ ಪ್ರಾಚಾರ್ಯ ಶಾನಿಮೋಲ್ ರಾಬಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳು ನೀಡಿದ ವಿವಿಧ ರೀತಿಯ ಚಟುವಟಿಕೆಗಳ ನಿರ್ಣಾಯಕರಾಗಿ ಶಿಕ್ಷಕಿ ಬಂಗಾರಿ ಕುಲಕರ್ಣಿ ಆಗಮಿಸಿದ್ದರು.

ಸಂಸ್ಥೆಯ ಅಧ್ಯಕ್ಷರಾದ ನೀಲಮ್ಮ ಹೆಗ್ಗಣದೊಡ್ಡಿ ಅಧ್ಯಕ್ಷತೆ ವಹಿಸಿದ್ದರು. ಟೇನಿ ರಾಬಿನ್ ಶಿಕ್ಷಕಿ ಪ್ರಿಯದರ್ಶಿನಿ ನಿರೂಪಿಸಿದರು. ಈ ವೇಳೆ ಮಕ್ಕಳಿಂದ ಪಠ್ಯೇತರ ಚಟುವಟಿಕೆಗಳಾದ ಆಶುಭಾಷಣ, ರಂಗೋಲಿ, ಛದ್ಮವೇಷ, ಕಸದಿಂದ ರಸ ಸೇರಿದಂತೆ ವಿವಿಧ ಚಟುವಟಿಕೆಗಳು ಮಕ್ಕಳಿಂದ ಮೂಡಿ ಬಂದವು. ಈ ಸಂದರ್ಭದಲ್ಲಿ ಪಾಲಕರು ಮತ್ತು ಶಿಕ್ಷಕ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂಗಡಗಿ, ನಾಲತವಾಡಗೆ ಪಿಯು ಕಾಲೇಜು ಪರಿಶೀಲಿಸಿ ಮಂಜೂರು
ಲಗಾನಿ ಹೆಸರಿನಲ್ಲಿ ಕಬ್ಬು ಬೆಳೆಗಾರರ ಲೂಟಿ