ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯ ತ್ರೈಮಾಸಿಕ ಕೆಡಿಪಿ ಸಭೆಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ
ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂದಿನ 3 ತಿಂಗಳ ಒಳಗೆ ಎಲ್ಲಾ ರಸ್ತೆಯ ಗುಂಡಿ ಮುಚ್ಚಿರಬೇಕು. ಜಂಗಲ್ ಕ್ಲಿಯರ್ ಮಾಡಬೇಕು. ಮುಂದೆ ಚುನಾವಣೆಗಳು ಬರುವುದರಿಂದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಎಲ್ಲಾ ಕಾಮಗಾರಿಗಳನ್ನು ಶೇ.100 ರಷ್ಟು ಮುಗಿಸಬೇಕು ಎಂದು ಸೂಚಿಸಿದರು.
ರೇಲ್ವೆ ಬ್ಯಾರಿಕೇಡ್: ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ವಿ.ನೀಲೇಶ್ ಮಾತನಾಡಿ, ಮುತ್ತಿನಕೊಪ್ಪ ಭಾಗದಲ್ಲಿ ಕಾಡಾನೆಗಳು ಬಾರದಂತೆ ಅರಣ್ಯ ಇಲಾಖೆ ಐಬೆಕ್ಸ್ ಬೇಲಿ ನಿರ್ಮಿಸಿತ್ತು. ಆದರೆ, ಕಳೆದ 6 ತಿಂಗಳಿಂದ ಐಬೆಕ್ಸ್ ಬೇಲಿ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.ಈ ಸಂದರ್ಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಕಾಡಾನೆಗಳು ಬಾರದಂತೆ ಗುಣಮಟ್ಟದ ರೈಲ್ವೆ ಬ್ಯಾರಿಕೇಡ್ ಹಾಕಲು ಸರ್ಕಾರ ಗಮನ ನೀಡಿದೆ. ತಮಿಳುನಾಡಿನಲ್ಲೂ ಸಹ ಕಾಡಾನೆಗಳು ಬಾರದಂತೆ ರೈಲ್ವೆ ಹಳಿಯ ಬ್ಯಾರಿಕೇಡ್ ಹಾಕಿ ಯಶಸ್ಸು ಕಂಡಿದ್ದಾರೆ. ಐಬೆಕ್ಸ್ ಬೇಲಿ ನೋಡಿಕೊಳ್ಳುವುದು ಕಷ್ಟವಾಗುತ್ತದೆ. ಗಿಡ,ಗುಂಟೆ ಬೆಳೆದು ಬ್ಯಾಟರಿ ಹಾಳಾಗುತ್ತದೆ. ಗುಣಮಟ್ಟದ ರೇಲ್ವೆ ಬ್ಯಾರಿಕೇಡ್ ನ್ನು ಹಂತ, ಹಂತವಾಗಿ ಮಾಡಬೇಕು ಎಂದು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ನರಸಿಂಹರಾಜಪುರ ತಾಲೂಕಿಗೆ ಪ್ರತ್ಯೇಕವಾಗಿ ಎಲಿಫೆಂಟ್ ಟಾಸ್ಕ್ ಪೋರ್ಸ ಹಾಕಿಸಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಟಿ.ಡಿ.ರಾಜೇಗೌಡ ಈ ವಿಷಯ ನನ್ನ ಗಮನಕ್ಕೆ ಬಂದಿಲ್ಲ.ನಬಾರ್ಡನಲ್ಲಿ ದುಡ್ಡಿನ ಕೊರತೆ ಇಲ್ಲ.ಬೇಡಿಕೆ ಇದ್ದಷ್ಟು ಹಣ ನೀಡುತ್ತೇವೆ. ಶೂನ್ಯದರದಲ್ಲಿ ಸಾಲ ನೀಡದಿದ್ದರೆ ಬೆಳಗಾಂ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ಶಾಸಕ ಟಿ.ಡಿ.ರಾಜೇಗೌಡ ವಹಿಸಿದ್ದರು. ವೇದಿಕೆಯಲ್ಲಿ ತಹಸೀಲ್ದಾರ್ ತನುಜ, ತಾಲೂಕು ಪಂಚಾಯಿತಿ ಇ.ಒ.ನವೀನ್ ಕುಮಾರ್, ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೊಪ್ಪ ಡಿಎಫ್ಒ ನಂದೀಶ್, ನೋಡಲ್ ಅಧಿಕಾರಿ ಗ್ರಾಮೀಣ ಕೈಗಾರಿಕೆ ಉಪ ನಿರ್ದೇಶಕ ಉಮೇಶ್ ಇದ್ದರು. ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.